AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಡಿಪೋಗಳಲ್ಲಿ ಡೀಸೆಲ್​ಗೆ ಹಾಹಾಕಾರ! ಬೆಂಗಳೂರಿನಲ್ಲಿ ಇಂದು ಬಸ್ ಸಂಚಾರ ವ್ಯತ್ಯಯ ಸಾಧ್ಯತೆ

ಡಿಪೋಗಳಲ್ಲಿ ಡೀಸೆಲ್ ಖಾಲಿಯಾಗಿರುವ ಹಿನ್ನೆಲೆ ನಿಗಮ ಚಿಲ್ಲರೆ ವ್ಯಾಪಾರಿಗಳಿಂದ ಡೀಸೆಲ್ ಖರೀದಿಸುತ್ತಿತ್ತು. ಆದರೆ ಮೂರು ದಿನದಿಂದ ಚಿಲ್ಲರೆ ವ್ಯಾಪಾರಿಗಳಿಂದೂ ಸಪ್ಲೈ ಆಗುತ್ತಿಲ್ಲ.

ಬಿಎಂಟಿಸಿ ಡಿಪೋಗಳಲ್ಲಿ ಡೀಸೆಲ್​ಗೆ ಹಾಹಾಕಾರ! ಬೆಂಗಳೂರಿನಲ್ಲಿ ಇಂದು ಬಸ್ ಸಂಚಾರ ವ್ಯತ್ಯಯ ಸಾಧ್ಯತೆ
ಬಿಎಂಟಿಸಿ ಬಸ್​ಗಳು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Jun 27, 2022 | 9:28 AM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ಜನರು ಓಡಾಡಲು ಬಿಎಂಟಿಸಿ (BMTC) ಬಸ್​ಗಳನ್ನೇ ಅವಲಂಬಿಸಿದ್ದಾರೆ. ವಿದ್ಯಾರ್ಥಿಗಳಿಂದ ಹಿಡಿದು ನೌಕರರ ತನಕ ಬಿಎಂಟಿಸಿ ಬಸ್​ಗಳಲ್ಲಿ ಓಡಾಡುತ್ತಾರೆ. ಆದರೆ ಸದ್ಯ ಬಿಎಂಟಿಸಿ ಡಿಪೋಗಳಲ್ಲಿ ಡೀಸೆಲ್​ಗೆ (Diesel) ಹಾಹಾಕಾರ ಶುರುವಾಗಿದ್ದು, ಇಂದು (ಜೂನ್ 27) ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಕಳೆದ ಎರಡು ದಿನಗಳಿಂದ ಡಿಪೋ ನಂ 22 ಸೇರಿ ಕೆಲ ಡಿಪೋಗಳಲ್ಲಿ ಡೀಸೆಲ್ ಕೊರತೆ ಎದುರಾಗಿತ್ತು. ಇಂದು ಬಹುತೇಕ ಡಿಪೋಗಳಲ್ಲಿ ಡೀಸೆಲ್ ಖಾಲಿ ಆಗುವ ಸಾಧ್ಯತೆ ಹೆಚ್ಚಿದೆ.

ಡಿಪೋಗಳಲ್ಲಿ ಡೀಸೆಲ್ ಖಾಲಿಯಾಗಿರುವ ಹಿನ್ನೆಲೆ ನಿಗಮ ಚಿಲ್ಲರೆ ವ್ಯಾಪಾರಿಗಳಿಂದ ಡೀಸೆಲ್ ಖರೀದಿಸುತ್ತಿತ್ತು. ಆದರೆ ಮೂರು ದಿನದಿಂದ ಚಿಲ್ಲರೆ ವ್ಯಾಪಾರಿಗಳಿಂದೂ ಸಪ್ಲೈ ಆಗುತ್ತಿಲ್ಲ. ಹೀಗಾಗಿ ಡಿಪೋಗಳಲ್ಲಿ ಭಾರಿ ಡೀಸೆಲ್ ಕೊರತೆ ಉಂಟಾಗಿದ್ದು, ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಓಡಾಡಲು ತೊಂದರೆ ಉಂಟಾಗಬಹುದು.

ಇದನ್ನೂ ಓದಿ: ಇಂದಿನಿಂದ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ಆರಂಭ! ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ

ಇದನ್ನೂ ಓದಿ
Image
Hardik Pandya: ಐರ್ಲೆಂಡ್ ವಿರುದ್ಧ ಕೇವಲ ಒಂದು ವಿಕೆಟ್ ಕಿತ್ತು ಇತಿಹಾಸ ನಿರ್ಮಿಸಿದ ಹಾರ್ದಿಕ್ ಪಾಂಡ್ಯ
Image
ಜುಲೈ 1ರಿಂದ ಕಬ್ಬನ್ ಪಾರ್ಕ್​ನಲ್ಲಿ ಸಾಕುಪ್ರಾಣಿಗಳಿಗೆ ಪ್ರವೇಶ ನಿಷೇಧ ಪ್ರಸ್ತಾವ: ನಾಯಿ ಸಾಕಿದವರಿಂದ ಆಕ್ರೋಶ
Image
Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು
Image
ಆಕ್ಸಿಡೆಂಟ್ ಎಂದು ಬಿಂಬಿಸಿದ್ದ ಪ್ರಕರಣಕ್ಕೆ ಟ್ವಿಸ್ಟ್; ಮದ್ಯ ಕುಡಿಸಿ ಸ್ನೇಹಿತನನ್ನೇ ಕೊಲೆಗೈದಿದ್ದ ಆರೋಪಿಗಳು ಅರೆಸ್ಟ್!

ಸಗಟು ಖರೀದಿ ದರ ಹೆಚ್ಚಳದಿಂದ ನಿಗಮ ಚಿಲ್ಲರೆ ವ್ಯಾಪಾರದಲ್ಲಿ ತೈಲ ಖರೀದಿ ಮಾಡುತ್ತಿದೆ. ನಿತ್ಯ ಚಿಲ್ಲರೆ ವ್ಯಾಪಾರಿಗಳು ಟ್ಯಾಂಕರ್​ಗಳ ಮೂಲಕ ಬಿಎಂಟಿಸಿ ಡಿಪೋಗಳಿಗೆ ಇಂಧನ ಪೂರೈಕೆ ಮಾಡುತ್ತಿದ್ದರು. ಆದರೆ ಇಂದು ಕಂಪನಿಗಳು ಬಂಕ್​ಗಳಿಗೆ ಇಂಧನ ಪೂರೈಕೆ ಮಾಡಲಿಲ್ಲ. ಡಿಪೋಗಳಲ್ಲಿ ಡಿಸೇಲ್ ಖಾಲಿಯಾಗಿ ಬಿಎಂಟಿಸಿ ಬಸ್​ಗಳು ಖಾಸಗಿ ಬಂಕ್​ಗಳ ಮುಂದೆ ನಿಂತಿವೆ.

ಇಂದು ಡೀಸೆಲ್ ಪೂರೈಕೆ ಆಗದಿದ್ದರೆ ನಾಳೆ ಬಹುತೇಕ ಬಸ್​ಗಳು ರೋಡಿಗೆ ಇಳಿಯುವುದು ಅನುಮಾನ ಇದೆ.

ಇದನ್ನೂ ಓದಿ: ಜುಲೈ 1ರಿಂದ ಕಬ್ಬನ್ ಪಾರ್ಕ್​ನಲ್ಲಿ ಸಾಕುಪ್ರಾಣಿಗಳಿಗೆ ಪ್ರವೇಶ ನಿಷೇಧ ಪ್ರಸ್ತಾವ: ನಾಯಿ ಸಾಕಿದವರಿಂದ ಆಕ್ರೋಶ

Published On - 9:21 am, Mon, 27 June 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ