AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಸ್ಟೋರ್​ಗಳಲ್ಲಿ ಸಿಗುತ್ತಿಲ್ಲ ಮದ್ಯ, ಕಾರಣ ಇಲ್ಲಿದೆ

ರಾಜ್ಯ ಸರ್ಕಾರ ಕಳೆದ ವಾರವಷ್ಟೇ ಪ್ರೀಮಿಯಂ ಮದ್ಯದ ದರವನ್ನು ಕಡಿಮೆ ಮಾಡಿದ್ದರೆ, ಇತ್ತ ಅಗ್ಗದ ಮದ್ಯದ ಬೆಕೆಯನ್ನು ಕೊಂಚ ಏರಿಕೆ ಮಾಡಿತ್ತು. ಆದರೆ ಹೊಸ ದರದ ಮದ್ಯ ಇನ್ನೂ ಬೆಂಗಳೂರಿನ ಬಾರ್ ಅಂಡ್ ರೆಸ್ಟೋರೆಂಟ್​​ಗಳಿಗೆ ಪೂರೈಕೆ ಆಗುತ್ತಿಲ್ಲ. ಈಗಾಗಲೇ ಇರುವ ಸ್ಟಾಕ್ ಖಾಲಿ ಆಗುತ್ತಿದೆ. ಇದರಿಂದ ಬಾರ್ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದರೆ, ಮದ್ಯಪ್ರಿಯರು ನೋವು ತೋಡಿಕೊಳ್ಳುತ್ತಿದ್ದಾರೆ.

ಬೆಂಗಳೂರು: ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಸ್ಟೋರ್​ಗಳಲ್ಲಿ ಸಿಗುತ್ತಿಲ್ಲ ಮದ್ಯ, ಕಾರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Sep 05, 2024 | 7:06 AM

Share

ಬೆಂಗಳೂರು, ಸೆಪ್ಟೆಂಬರ್ 5: ಮದ್ಯಕ್ಕೆ ಹೊಸ ಬೆಲೆ ಆದೇಶ ಜಾರಿಯಾದ ಬೆನ್ನಲ್ಲೇ ಕೆಎಸ್​ಬಿಸಿಎಲ್​ನಿಂದ ಹೊಸ ದರ ಅಳವಡಿಸಿದ ಮದ್ಯದ ಬಾಟಲ್​​ಗಳು ಪೂರೈಕೆಯಾಗುತ್ತಿಲ್ಲ. ಇತ್ತೀಚೆಗೆ ಪ್ರೀಮಿಯಂ ಮದ್ಯಗಳ ಬೆಲೆಯನ್ನು ಸರ್ಕಾರ ಕಡಿಮೆ ಹಾಗೂ ಅಗ್ಗದ ಮದ್ಯಗಳ ದರವನ್ನು ಕೊಂಚ ಏರಿಕೆ ಮಾಡಿತ್ತು. ಇದರಿಂದ ಮದ್ಯದಂಗಡಿಗಳಲ್ಲಿ ಸ್ಟಾಕ್ ಕೊರತೆ ಕಂಡುಬಂದಿದೆ. ಬೆಲೆ ಇಳಿಕೆ ಮತ್ತು ಏರಿಕೆಯಾಗಿದ್ದರಿಂದ ಹೊಸ ಲೇಬಲಿಂಗ್ ಮಾಡುವ ಕಾರ್ಯಕ್ಕೆ ಟೈಮ್ ಬೇಕಿರುವುದರಿಂದ ಹೊಸ ಮದ್ಯೆ ಪೂರೈಕೆ ಆಗುತ್ತಿಲ್ಲ. ಇದರಿಂದ ಯಾವುದೇ ಬಾರ್ ಅಂಡ್ ರೆಸ್ಟೋರೆಂಟ್​ಗಳಲ್ಲೂ ಸರಿಯಾಗಿ ಮದ್ಯ ಸರಬರಾಜು ಆಗುತ್ತಿಲ್ಲ ಎಂದು ಬೆಂಗಳೂರು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಕರುಣಾಕರ ಹೆಗ್ಡೆ ತಿಳಿಸಿದ್ದಾರೆ.

ಇನ್ನು ಅಕ್ಕಪಕ್ಕದ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ನಮ್ಮಲ್ಲಿ ದುಬಾರಿ ಮದ್ಯಗಳ ದರವನ್ನು ಇತ್ತೀಚೆಗೆ ಸ್ವಲ್ಪ ಕಡಿಮೆ ಮಾಡಲಾಗಿದೆ. ಹೊಸ ದರದಂತೆ ಲೇಬಲ್ ಮುದ್ರಿಸಬೇಕಿದ್ದು, ಇದಕ್ಕೆ ಕಾಲಾವಕಾಶ ಬೇಕಿರುವುದರಿಂದ ಮಾರಾಟಗಾರರಿಗೆ ಕೆಲ ಬ್ರಾಂಡ್ ಮದ್ಯ ಅಗತ್ಯಕ್ಕೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ವೈನ್ಸ್ ಸ್ಟೋರ್, ಬಾರ್ ಸೇರಿದಂತೆ ಮದ್ಯದಂಗಡಿಗಳಲ್ಲಿ ಮಾರಾಟ ಕಡಿಮೆಯಾಗಿದ್ದು, ಅಬಕಾರಿ ಆದಾಯಕ್ಕೆ ಸ್ವಲ್ಪ ಹಿನ್ನಡೆ ಉಂಟಾಗಿದೆ.

ಬ್ಲ್ಯಾಕ್ ಅಂಡ್ ವೈಟ್, ಬ್ಲ್ಯಾಕ್ ಡಾಗ್, ಟೀಚರ್ಸ್, ಬ್ಲ್ಯಾಕ್ ಲೇಬಲ್, ಶಿವಾಸ್ ರೀಗಲ್, ಸ್ವಿರ್ನಾಫ್ ವೋಡ್ಕಾ ಸೇರಿದಂತೆ ಪ್ರೀಮಿಯಂ ಮತ್ತು ಸೆಮಿ ಪ್ರೀಮಿಯಂನ ಹಲವು ಬ್ರಾಂಡ್​​ಗಳ ಮದ್ಯ ಸಮರ್ಪಕವಾಗಿ ಸರಬರಾಜಾಗುತ್ತಿಲ್ಲ ಎನ್ನಲಾಗಿದೆ.

ಈ ಬಗ್ಗೆ ಮದ್ಯಪ್ರಿಯರು ನೋವು ತೋಡಿಕೊಳ್ಳುತ್ತಿದ್ದಾರೆ. ನಮಗೆ ಬೇಕಾದ ಬ್ರಾಂಡ್ ಸಿಗ್ತಿಲ್ಲ, ಎಣ್ಣೆ ಕುಡಿಯುವುದನ್ನೇ ಬಿಟ್ಟಿದ್ದೀವಿ ಎಂದಿದ್ದಾರೆ ಮದ್ಯಪ್ರಿಯ ಗಿರೀಶ್.

ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ: ಇನ್ನೂ ನೀವು ನಿಮ್ಮ ವಾಹನಕ್ಕೆ HSRP ನಂಬರ್​ ಪ್ಲೇಟ್ ಹಾಕಿಸಿಲ್ಲವೇ..?​

ಒಟ್ಟಿನಲ್ಲಿ ರಾಜ್ಯ ಸರ್ಕಾರ ಏನೋ ದರ ಕಡಿಮೆ ಮತ್ತು ಜಾಸ್ತಿ ಮಾಡಿ ಆದೇಶ ಮಾಡಿದೆ. ಆದರೆ, ಹೊಸ ದರದ ಲೇಬಲ್​​ಗಳನ್ನು ಹಾಕಲು ಸಮಯ ಬೇಕಿರುವುದರಿಂದ ಹೊಸ ಎಣ್ಣೆ ಪೂರೈಕೆ ಆಗುತ್ತಿಲ್ಲ. ಇದರಿಂದ ಒಂದುಕಡೆ ಅಬಕಾರಿ ಇಲಾಖೆಗೆ ನಷ್ಟ, ಮತ್ತೊಂದು ಕಡೆ ಮದ್ಯಪ್ರಿಯರಿಗೆ ಅಚ್ಚುಮೆಚ್ಚಿನ ಬ್ರ್ಯಾಂಡ್ ಸಿಗ್ತಿಲ್ಲ ಎಂಬ ಬೇಜಾರಿಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!