AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರ ರೋಷಾಗ್ನಿ: ನೀವೇನು ಗೆಣಸು ತೆರೆಯೋಕೆ ಇದ್ದೀರಾ..? ಶಿಕ್ಷಣ ಸಚಿವ ಸುರೇಶ್​​ ಕುಮಾರ್​ಗೆ ಪೋಷಕರ ನೇರ ಪ್ರಶ್ನೆ

S Suresh Kumar: ಶಿಕ್ಷಣ ಸಚಿವರ ಕಿವಿ ಸತ್ತೋಗಿದ್ಯಾ..? ಸುರೇಶ್ ಕುಮಾರ್ ಜವಾಬ್ದಾರಿಯುತ ನಿರ್ಧಾರ ಕೈಗೊಂಡಿದ್ದರೆ ನಿಮ್ಗೆ ಇಂತಹ ಪರಿಸ್ಥಿತಿ ಬರ್ತಾ ಇರಲಿಲ್ಲ. ಪೋಷಕರ ಸಮಸ್ಯೆ ಬಗೆಹರಿಸಲು ಶಿಕ್ಷಣ ಸಚಿವರು ವಿಫಲರಾಗಿದ್ದಾರೆ ಎಂದು ಶಿಕ್ಷಣ ಸಚಿವರ ವಿರುದ್ಧ ನಾರಾಯಣ ಇ-ಟೆಕ್ನೊ (Narayana e Techno School) ಶಾಲಾ ಮಕ್ಕಳ ಪೋಷಕರು ರೋಷಾಗ್ನಿ ಸುರಿಸಿದರು.

ಪೋಷಕರ ರೋಷಾಗ್ನಿ: ನೀವೇನು ಗೆಣಸು ತೆರೆಯೋಕೆ ಇದ್ದೀರಾ..? ಶಿಕ್ಷಣ ಸಚಿವ ಸುರೇಶ್​​ ಕುಮಾರ್​ಗೆ ಪೋಷಕರ ನೇರ ಪ್ರಶ್ನೆ
ನಾರಾಯಣ ಇ-ಟೆಕ್ನೊ ಶಾಲೆಗೆ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ರಮೇಶ್ (ಕೆಂಪು ಮಾಸ್ಕ್​ಧಾರಿ ) ಭೇಟಿ
TV9 Web
| Edited By: |

Updated on:Jun 24, 2021 | 4:21 PM

Share

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್​ ಅವರನ್ನು ನಾರಾಯಣ ಇ-ಟೆಕ್ನೊ ಶಾಲಾ ಮಕ್ಕಳ ಪೋಷಕರು ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಶಿಕ್ಷಣ ಸಚಿವರ ಪಂಚೇಂದ್ರಿಗಳೇ ಸತ್ತು ಹೋಗಿದೆ. ಅವರ ತೆವಲನ್ನ ತೀರಿಸಿಕೊಳ್ಳಲು ಹೀಗೆಲ್ಲ ನಡೆದುಕೊಳ್ತಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಖಾಸಗಿ ಶಾಲೆಗಳ ಗುಲಾಮರಾಗಿದ್ದಾರೆ. ಶುಲ್ಕ ಸಮಸ್ಯೆ ಬಗೆಹರಿಸೊಲ್ಲ ಅಂದ್ರೆ ಸಚಿವ ಸ್ಥಾನದಲ್ಲಿ ಯಾಕಿದ್ದೀರಿ? ಸಚಿವ ಸ್ಥಾನ ನಿಭಾಯಿಸೋಕೆ ಆಗೊಲ್ಲ ಅಂತೇಳಿ‌ ಕೆಳಗಿಳಿಯಿರಿ ಎಂದು ಪೋಷಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಮಸ್ಯೆಯನ್ನ ಪೋಷಕರು ಮತ್ತು ಖಾಸಗಿ ಶಾಲೆಗಳೇ ಬಗೆಹರಿಸಿಕೊಳ್ಳಬೇಕು ಅಂತೀರಾ. ನೀವೇನು ಗೆಣಸು ಕೀಳೋಕೆ ಇದ್ದೀರಾ..? ಎಂದು ಶಿಕ್ಷಣ ಸಚಿವ ಎಸ್​ ಸುರೇಶ್ ಕುಮಾರ್ ಗೆ ಪೋಷಕರು ನೇರವಾಗಿ ಪ್ರಶ್ನೆ ಮಾಡಿದರು. ನಿಮ್ಮ ಕೈಲಿ ನಿಭಾಯಿಸೋಕೆ ಆಗೊಲ್ಲ ಅಂದ್ರೆ ಶಿಕ್ಷಣ ಇಲಾಖೆಯನ್ನ ಮುಚ್ಚಿಬಿಡಿ. ಸುರೇಶ್ ಕುಮಾರ್ (S Suresh Kumar)ಗೆ ನಾಚಿಕೆ ಆಗ್ಬೇಕು ಎಂದೆಲ್ಲಾ ಪೋಷಕರು ಬೈಗುಳಗಳ ಸುರಿಮಳೆಗೆರೆದರು.

ಶಿಕ್ಷಣ ಸಚಿವರ ಕಿವಿ ಸತ್ತೋಗಿದ್ಯಾ..? ಸುರೇಶ್ ಕುಮಾರ್ ಜವಾಬ್ದಾರಿಯುತ ನಿರ್ಧಾರ ಕೈಗೊಂಡಿದ್ದರೆ ನಿಮ್ಗೆ ಇಂತಹ ಪರಿಸ್ಥಿತಿ ಬರ್ತಾ ಇರಲಿಲ್ಲ. ಪೋಷಕರ ಸಮಸ್ಯೆ ಬಗೆಹರಿಸಲು ಶಿಕ್ಷಣ ಸಚಿವರು ವಿಫಲರಾಗಿದ್ದಾರೆ ಎಂದು ಶಿಕ್ಷಣ ಸಚಿವರ ವಿರುದ್ಧ ನಾರಾಯಣ ಇ-ಟೆಕ್ನೊ (Narayana e Techno School) ಶಾಲಾ ಮಕ್ಕಳ ಪೋಷಕರು ರೋಷಾಗ್ನಿ ಸುರಿಸಿದರು.

ಸಂದರ್ಭ ಏನು? ಸ್ಥಳ ಎಲ್ಲಿ? ಪೋಷಕರ ಸಿಟ್ಟು ಯಾವುದಕ್ಕೆ?

ಕೂಡಲೇ ಆನ್​ಲೈನ್ ಕ್ಲಾಸ್​ ವ್ಯವಸ್ಥೆ ಮಾಡಿಸಬೇಕು. ಪೂರ್ಣ ಶುಲ್ಕ ಕಟ್ಟುವುದಕ್ಕೆ ಒತ್ತಾಯಿಸದಂತೆ ಶಾಲೆಗೆ ಸೂಚನೆ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ಆಗ್ರಹಿಸಿ ಬೆಂಗಳೂರಿನ ಲಗ್ಗೆರೆಯಲ್ಲಿರುವ ನಾರಾಯಣ ಇ-ಟೆಕ್ನೊ ಶಾಲೆ ಎದುರು ಪೋಷಕರು ಇಂದು ಬೆಳಗ್ಗೆ 10.30ರಿಂದ ಕಾಯುತ್ತಾ ಕುಳಿತಿದ್ದಾರೆ.

ಬಿಇಒ ಬಂದು ಸಮಸ್ಯೆ ಬಗೆಹರಿಸುವವರೆಗೆ ಸ್ಥಳದಿಂದ ತೆರಳಲ್ಲ ಎಂದು ನಾರಾಯಣ ಇ-ಟೆಕ್ನೊ ಶಾಲೆ ಮುಂದೆ ಪೋಷಕರು ಆಕ್ರೋಶಭರಿತರಾಗಿದ್ದಾರೆ. ಊಟದ ಸಮಯವೂ ಮೀರಿ ಮಧ್ಯಾಹ್ನವಾದರೂ ಸ್ಥಳಕ್ಕೆ ಅಧಿಕಾರಿಗಳು ಬಂದು, ಸಮಸ್ಯೆ ಇತ್ಯರ್ಥ ಮಾಡದಿರುವುದರಿಂದ ಶಾಲೆಯ ಮುಂಭಾಗವೇ ಕುಳಿತು ಪೋಷಕರು ಊಟ ಮಾಡಿದ್ದಾರೆ. ಹೋಟೆಲ್‌ನಿಂದ ಪಲಾವ್‌ ಪಾರ್ಸೆಲ್​ ತರಿಸಿ ತಿಂದ ಪೋಷಕರು.

ಈ ಮಧ್ಯೆ, ನಾರಾಯಣ ಇ-ಟೆಕ್ನೊ ಶಾಲೆಗೆ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ರಮೇಶ್ ಒಮ್ಮೆ ಭೇಟಿ ಕೊಟ್ಟು, ಪೋಷಕರ ಜತೆ ಕೆಲಕಾಲ ಚರ್ಚೆ ನಡೆಸಿದ ಶಾಸ್ತ್ರ ಮಾಡಿದರು. ಆಗ ಪೋಷಕರು ಕಣ್ಣೊರೆಸುವ ರೀತಿ ಮಾತುಗಳನ್ನಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಆನ್​ಲೈನ್ ಕ್ಲಾಸ್​ ವ್ಯವಸ್ಥೆ ಮಾಡಿಸಿ. ಜೊತೆಗೆ ಪೂರ್ಣ ಶುಲ್ಕ ಕಟ್ಟುವಂತೆ ಒತ್ತಾಯಿಸದಂತೆ ಶಾಲೆಗೆ ಸೂಚನೆ ನೀಡಬೇಕು ಎಂದು ಪೋಷಕರು ಒತ್ತಾಯಿಸುತ್ತಿದ್ದಂತೆ ಬಿಇಒ ರಮೇಶ್ ಸ್ಥಳದಿಂದ ಕಾಲ್ಕಿತ್ತರು.

ಮಧ್ಯಾಹ್ನ 2.30ಕ್ಕೆ ಸಭೆ ಇದೆ, ಊಟ ಮಾಡಿ ಬರುತ್ತೇನೆಂದು ಬಿಇಒ ರಮೇಶ್ ತೆರಳಿದ್ದರು. ಆದರೆ ಇನ್ನೂ ವಾಪಸಾಗಿಲ್ಲ. ಈ ಮಧ್ಯೆ ಬಿಇಒ ಬಂದು ಸಮಸ್ಯೆ ಬಗೆಹರಿಸುವವರೆಗೂ ನಾವು ಶಾನೆಯ ಎದುರಿಗೇ ಕುಳಿತಿರುತ್ತೇವೆ ಎಂದು ನಾರಾಯಣ ಇ-ಟೆಕ್ನೊ ಶಾಲೆ ಎದುರು ಪೋಷಕರು ಪಟ್ಟುಹಿಡಿದು ಕುಳಿತರು. ಆ ವೇಳೆ ಮೇಲಿನಂತೆ ಶಿಕ್ಷಣ ಸಚಿವ ಸುರೇಶ್​​ ಕುಮಾರ್​ ಅವರನ್ನು ತರಾಟೆಗೆ ತೆಗೆದುಕೊಂಡರು.

Laggere Narayana e-Techno School students parents criticize education minister s suresh kumar 2

ನಾರಾಯಣ ಇ-ಟೆಕ್ನೊ ಶಾಲೆಗೆ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ರಮೇಶ್ (ಕೆಂಪು ಮಾಸ್ಕ್​ಧಾರಿ ) ಭೇಟಿ

(Laggere Narayana e-Techno School students parents criticize education minister s suresh kumar)

Published On - 4:15 pm, Thu, 24 June 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್