Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ಟೋದ ಗಂಡನನ್ನು ಮತ್ತೆ ಸೇರುವಂತೆ ಮಾಡ್ತೀನೆಂದು ಮಹಿಳೆಗೆ ಲಕ್ಷ ಲಕ್ಷ ಪಂಗಮಾನ; ಆರೋಪಿ ಅರೆಸ್ಟ್

ಬಿಟ್ಟುಹೋದ ಪತಿಯನ್ನು ಜೊತೆಗಿರುವಂತೆ ಮಾಡಿ ಎಂದು ಮಹಿಳೆಯೊಬ್ಬರು ಕೇಳಿಕೊಂಡಿದ್ದು, ಗಂಡ ನಿನ್ನ ಜೊತೆಗೆ ಇರುವಂತೆ ಮಾಡುತ್ತೇನೆ ಎಂದು ಲಕ್ಷ ಲಕ್ಷ ಹಣ ಪಡೆದಿದ್ದ ಆರೋಪಿ ಹಜರತ್ ಮೊಹಮ್ಮದ್, ಬಳಿಕ ಎಸ್ಕೇಪ್ ಆಗಿದ್ದ. ಈ ಹಿನ್ನಲೆ ಮಹಿಳೆಯು ವಿಧಾನಸೌಧ ಠಾಣೆಗೆ ದೂರು ದಾಖಲಿಸಿದ್ದು, ಇದೀಗ ಆರೋಪಿ ಅಂದರ್​ ಆಗಿದ್ದಾನೆ.​​

ಬಿಟ್ಟೋದ ಗಂಡನನ್ನು ಮತ್ತೆ ಸೇರುವಂತೆ ಮಾಡ್ತೀನೆಂದು ಮಹಿಳೆಗೆ ಲಕ್ಷ ಲಕ್ಷ ಪಂಗಮಾನ; ಆರೋಪಿ ಅರೆಸ್ಟ್
ಲಕ್ಷ ಲಕ್ಷ ವಂಚಿಸಿದ ಆರೋಪಿ ಬಂಧನ
Follow us
Jagadish PB
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 20, 2023 | 4:20 PM

ಬೆಂಗಳೂರು, ಡಿ.20: ಬಿಟ್ಟೋದ ಗಂಡನನ್ನು ಜೊತೆಯಾಗಿರುವಂತೆ ಮಾಡುತ್ತೀನಿ ಎಂದು ವಂಚಿಸಿದ್ದ ಹಜರತ್ ಮೊಹಮ್ಮದ್ ಎಂಬ ಆರೋಪಿಯನ್ನ ಪೊಲೀಸ(Police)ರು ಬಂಧಿಸಿದ್ದಾರೆ. ನನಗೆ ಹಣದ ಅವಶ್ಯಕತೆಯಿದೆ ಎಂದು ಮಹಿಳೆಯ ಹೆಸರಲ್ಲಿ ಲಕ್ಷ ಲಕ್ಷ ಲೋನ್ ಮಾಡಿಸಿ ಹಣ ಪಡೆದು ಸಿನಿಮೀಯ ಶೈಲಿಯಲ್ಲಿ ವಂಚನೆ ಮಾಡಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಈ ಕುರಿತು ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಇದೀಗ ಹಜರತ್​ನನ್ನು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಏನಿದು ಘಟನೆ?

ನೀರಾವರಿ ಇಲಾಖೆಯಲ್ಲಿ ಎಫ್​ಡಿಎ ಅಧಿಕಾರಿಯಾಗಿರುವ ಮಹಿಳೆಯ ಪತಿ ಬಿಟ್ಟೋಗಿದ್ದ. ಇದೇ ವೇಳೆ ಮೂರು ವರ್ಷದ ಮಗುವಿನ ಕೈಗೆ ಗಾಯದ ಸಮಸ್ಯೆಯಿದ್ದ ಹಿನ್ನಲೆ ಪಕ್ಕದ ಮನೆಯರ ಮಾತು ಕೇಳಿ ನಾಗಮಂಗಲದಲ್ಲಿರುವ ಆರೋಪಿ ಹಜರತ್ ನೂರ್ ಸಂಪರ್ಕ ಮಾಡಿ, ಔಷಧಿ ಕೊಡಿಸಿದ್ದರು. ಕಾಕತಾಳಿಯ ಎಂಬಂತೆ ಮಗುವಿಗೆ ಕೈ ಒಂದು ವಾರದಲ್ಲಿಯೇ ಸರಿ ಹೋಗಿತ್ತು. ಇದರಿಂದ ಹಜರತ್​ನನ್ನು ಆ ಮಹಿಳೆಯು ಸಂಪೂರ್ಣ ನಂಬಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್​ ಹೆಸರಿನಲ್ಲಿ ವಂಚನೆ: 15 ದಿನದಲ್ಲಿ ಮೂರು ಕೋಟಿ ಕಳೆದುಕೊಂಡ ಏಳು ಜನರು, ಏನಿದು ಡಿಜಿಟಲ್ ಅರೆಸ್ಟ್?

ಪತಿಯನ್ನ ತನ್ನ ಜೊತೆಗಿರುವಂತೆ ಮಾಡಿ ಎಂದು ಕೇಳಿಕೊಂಡಿದ್ದ ಮಹಿಳೆ

ಇನ್ನು ಕೆಲವೇ ದಿನಗಳಲ್ಲಿ ಮಹಿಳಾ ಅಧಿಕಾರಿಯು ಹಜರತ್​ನನ್ನು ನಂಬಿದ್ದಳು. ಈ ಹಿನ್ನಲೆ ಬಿಟ್ಟುಹೋದ ನನ್ನ ಪತಿಯನ್ನು ಜೊತೆಗಿರುವಂತೆ ಮಾಡಿ ಎಂದು ಕೇಳಿಕೊಂಡಿದ್ದಳು. ಗಂಡ ನಿನ್ನ ಜೊತೆಗೆ ಇರುವಂತೆ ಮಾಡುತ್ತೇನೆ ಎಂದ ಆರೋಪಿ ಹಜರತ್,​​ ಒಂದು ಲಕ್ಷ ಹಣ ಪಡೆದಿದ್ದ‌. ಆ ಬಳಿಕ ವೈಯಕ್ತಿಕ ಸಮಸ್ಯೆಯಿದೆ ಎಂದು ಲೋನ್ ಮಾಡಿಸಿ ಬರೊಬ್ಬರಿ ಏಳು ಲಕ್ಷ ಪಡೆದು, ಪ್ರತಿ ತಿಂಗಳು ಇಎಮ್ಐ ಹಣ ಕಟ್ಟುತ್ತೇನೆ ಎಂದು ಹೇಳಿ, ಹಣ ಕೈಗೆ ಬಂದ ತಕ್ಷಣ ಎಸ್ಕೇಪ್ ಆಗಿದ್ದ. ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಆರೋಪಿಯ ಬಂಧನವಾಗಿದ್ದು, ವಿಚಾರಣೆ ವೇಳೆ ಸಾಕಷ್ಟು ಮಂದಿಗೆ ಇದೇ ರೀತಿ ವಂಚನೆ‌ ಮಾಡಿರುವುದು ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Wed, 20 December 23

ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ