AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್​ ಹಿಂತಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಹೆಡ್​ಕಾನ್ಸ್ ಟೇಬಲ್

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿಗೆ ಕರೆ ಮಾಡಿ ಹಿಂತಿರುಗಿಸುವ ಮೂಲಕ ಹೆಡ್​ಕಾನ್ಸ್ ಟೇಬಲ್ ಹೆಚ್ ಸಿ ಮಲ್ಲಿಕಾರ್ಜುನ​ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ನಗರದ ಕೋರಮಂಗಲದ ವಾಟರ್ ಟ್ಯಾಂಕ್ ಸಿಗ್ನಲ್ ಬಳಿ ಘಟನೆ ನಡೆದಿದೆ.

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್​ ಹಿಂತಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಹೆಡ್​ಕಾನ್ಸ್ ಟೇಬಲ್
ಚಿನ್ನಾಭರಣ ಇದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿ
Shivaprasad B
| Edited By: |

Updated on:Jan 17, 2024 | 5:09 PM

Share

ಬೆಂಗಳೂರು, ಜನವರಿ 17: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿಗೆ ಕರೆ ಮಾಡಿ ಹಿಂತಿರುಗಿಸುವ ಮೂಲಕ ಹೆಡ್​ಕಾನ್ಸ್ ಟೇಬಲ್ (Head Cons table) ಹೆಚ್​.ಸಿ ಮಲ್ಲಿಕಾರ್ಜುನ​ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ನಗರದ ಕೋರಮಂಗಲದ ವಾಟರ್ ಟ್ಯಾಂಕ್ ಸಿಗ್ನಲ್ ಬಳಿ ಘಟನೆ ನಡೆದಿದೆ. ಇಂದು ಬೆಳಗ್ಗೆ ಬಸ್​ನಲ್ಲಿ ಬೆಂಗಳೂರಿಗೆ ಪ್ರವೀಣ್ ಹಾಗೂ ಭಾವನಿ ದಂಪತಿ ಬಂದಿದ್ದಾರೆ. ಕೋರಮಂಗಲ ವಾಟರ್ ಟ್ಯಾಂಕ್ ಸಿಗ್ನಲ್​ನಲ್ಲಿ ಬಸ್ ಇಳಿದಿದ್ದಾರೆ. ಈ ವೇಳೆ ಮನೆ ಹೋಗುವ ಆತುರದಲ್ಲಿ ಬ್ಯಾಗ್ ಬಿಟ್ಟಿದ್ದಾರೆ.

ಬಳಿಕ ಅಲ್ಲೇ ಡ್ಯೂಟಿಯಲ್ಲಿ ಇದ್ದ ಆಡುಗೋಡಿ ಸಂಚಾರಿ ಠಾಣೆಯ ಹೆಡ್​ಕಾನ್ಸ್ ಟೇಬಲ್ ಹೆಚ್ ಸಿ ಮಲ್ಲಿಕಾರ್ಜುನ ನೋಡಿದ್ದಾರೆ. ಬಳಿಕ ಆ ಬ್ಯಾಗ್ ಓಪನ್ ಮಾಡಿ ನೋಡಿದಾಗ ಚಿನ್ನಾಭರಣ ಇರೋದು ಗೊತ್ತಾಗಿದೆ. ಅದರಲ್ಲೇ ಇದ್ದ ನಂಬರ್​ಗೆ ಕರೆ ಮಾಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮನ ಸಾಕ್ಷಾತ್ಕಾರಕ್ಕೆ ಹಾರೋಹಳ್ಳಿಯ ಕಲ್ಲು ಅಷ್ಟೇ ಅಲ್ಲ; ಮಣ್ಣು ಸಹ ಬಳಕೆಯಾಗಿದೆ!

ಅದು ಕೊಡಗಿನ ಪ್ರವೀಣ್ ಸಂಬಂಧಿಕ ಸೋಮು ನಂಬರ್ ಆಗಿತ್ತು. ಕರೆ ಮಾಡಿ ಸೋಮು ಅವರಿಗೆ ಮಾಹಿತಿ ನೀಡಿದ್ದ ಹೆಡ್ ಕಾನ್ಸ್ ಸ್ಟೇಬಲ್ ಮಲ್ಲಿಕಾರ್ಜುನ ಬಳಿಕ ಬ್ಯಾಗ್ ಬಿಟ್ಟು ಹೋಗಿರುವ ವಿಷಯ ಪ್ರವೀಣ್​ಗೆ ತಿಳಿಸಿದ್ದಾರೆ. ಪ್ರವೀಣ್ ಬಂದು ಚಿನ್ನಾಭರಣ ಇದ್ದ ಬ್ಯಾಗ್ ಪಡೆದುಕೊಂಡಿದ್ದಾರೆ. ಆಡುಗೋಡಿ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನಗೆ ದಂಪತಿ ಧನ್ಯವಾದ ತಿಳಿಸಿದ್ದಾರೆ. ಹೆಚ್​ಸಿ ಮಲ್ಲಿಕಾರ್ಜುನ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ದುಬಾರಿ ಐಫೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್​​

ದುಬಾರಿ ಐಫೋನ್ ಅನ್ನು ಪೊಲೀಸರು ಅದರ ಮಾಲೀಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿರುವಂತಹ ಘಟನೆ ಕೊಡಗು ಜಿಲ್ಲೆ‌ಯ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲ್ಲಿನಲ್ಲಿ ನಡೆದಿದ್ದು, ಠಾಣೆಯ ಕಾನ್ಸ್‌ಟೇಬಲ್‌ ರಾಘವೇಂದ್ರ ಈ ಸ್ತುತ್ಯರ್ಹ ಕಾರ್ಯವೆಸಗಿದ್ದರು.

ಇದನ್ನೂ ಓದಿ: ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಠಾಣೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಸಿಬ್ಬಂದಿ

ಭಾನುವಾರ ಡಿಸೆಂಬರ್​ 3 ರಂದು ಆನೆಚೌಕೂರು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್‌ಟೇಬಲ್‌ ರಾಘವೇಂದ್ರ, ಈ ಸಂದರ್ಭ ರಸ್ತೆ ಬದಿ ದುಬಾರಿ ಬೆಲೆಯ ಐಫೋನ್ ಒಂದು ಅವರ ಕಣ್ಣಿಗೆ ಬಿದ್ದಿತ್ತು. ಐಫೋನ್​ನಲ್ಲಿ‌ ಬಹಳಷ್ಟು ಮಿಸ್ಡ್​​​ ಕಾಲ್​ಗಳಿದ್ದವು. ಅದರಲ್ಲಿ ಅತಿ ಹೆಚ್ಚು ಮಿಸ್ಡ್​ ಕಾಲ್‌ ಬಂದ ನಂಬರ್​ಗೆ ರಾಘವೇಂದ್ರ ಕರೆ ಮಾಡಿದಾಗ ಆ ಮೊಬೈಲ್​ನ​ ಮಾಲೀಕ‌ ಕೇರಳ‌ ಮೂಲದ ಸಿಜೋಮ್ ಎಂಬುದು ಗೊತ್ತಾಗಿತ್ತು. ಬಳಿಕ ಠಾಣೆಯಲ್ಲಿ ಕಾನ್ಸ್‌ಟೇಬಲ್‌ ರಾಘವೇಂದ್ರ ಮೊಬೈಲ್ ಹಿಂದಿರುಗಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:08 pm, Wed, 17 January 24

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು