AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್​ ಹಿಂತಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಹೆಡ್​ಕಾನ್ಸ್ ಟೇಬಲ್

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿಗೆ ಕರೆ ಮಾಡಿ ಹಿಂತಿರುಗಿಸುವ ಮೂಲಕ ಹೆಡ್​ಕಾನ್ಸ್ ಟೇಬಲ್ ಹೆಚ್ ಸಿ ಮಲ್ಲಿಕಾರ್ಜುನ​ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ನಗರದ ಕೋರಮಂಗಲದ ವಾಟರ್ ಟ್ಯಾಂಕ್ ಸಿಗ್ನಲ್ ಬಳಿ ಘಟನೆ ನಡೆದಿದೆ.

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್​ ಹಿಂತಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಹೆಡ್​ಕಾನ್ಸ್ ಟೇಬಲ್
ಚಿನ್ನಾಭರಣ ಇದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿ
Shivaprasad B
| Edited By: |

Updated on:Jan 17, 2024 | 5:09 PM

Share

ಬೆಂಗಳೂರು, ಜನವರಿ 17: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿಗೆ ಕರೆ ಮಾಡಿ ಹಿಂತಿರುಗಿಸುವ ಮೂಲಕ ಹೆಡ್​ಕಾನ್ಸ್ ಟೇಬಲ್ (Head Cons table) ಹೆಚ್​.ಸಿ ಮಲ್ಲಿಕಾರ್ಜುನ​ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ನಗರದ ಕೋರಮಂಗಲದ ವಾಟರ್ ಟ್ಯಾಂಕ್ ಸಿಗ್ನಲ್ ಬಳಿ ಘಟನೆ ನಡೆದಿದೆ. ಇಂದು ಬೆಳಗ್ಗೆ ಬಸ್​ನಲ್ಲಿ ಬೆಂಗಳೂರಿಗೆ ಪ್ರವೀಣ್ ಹಾಗೂ ಭಾವನಿ ದಂಪತಿ ಬಂದಿದ್ದಾರೆ. ಕೋರಮಂಗಲ ವಾಟರ್ ಟ್ಯಾಂಕ್ ಸಿಗ್ನಲ್​ನಲ್ಲಿ ಬಸ್ ಇಳಿದಿದ್ದಾರೆ. ಈ ವೇಳೆ ಮನೆ ಹೋಗುವ ಆತುರದಲ್ಲಿ ಬ್ಯಾಗ್ ಬಿಟ್ಟಿದ್ದಾರೆ.

ಬಳಿಕ ಅಲ್ಲೇ ಡ್ಯೂಟಿಯಲ್ಲಿ ಇದ್ದ ಆಡುಗೋಡಿ ಸಂಚಾರಿ ಠಾಣೆಯ ಹೆಡ್​ಕಾನ್ಸ್ ಟೇಬಲ್ ಹೆಚ್ ಸಿ ಮಲ್ಲಿಕಾರ್ಜುನ ನೋಡಿದ್ದಾರೆ. ಬಳಿಕ ಆ ಬ್ಯಾಗ್ ಓಪನ್ ಮಾಡಿ ನೋಡಿದಾಗ ಚಿನ್ನಾಭರಣ ಇರೋದು ಗೊತ್ತಾಗಿದೆ. ಅದರಲ್ಲೇ ಇದ್ದ ನಂಬರ್​ಗೆ ಕರೆ ಮಾಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮನ ಸಾಕ್ಷಾತ್ಕಾರಕ್ಕೆ ಹಾರೋಹಳ್ಳಿಯ ಕಲ್ಲು ಅಷ್ಟೇ ಅಲ್ಲ; ಮಣ್ಣು ಸಹ ಬಳಕೆಯಾಗಿದೆ!

ಅದು ಕೊಡಗಿನ ಪ್ರವೀಣ್ ಸಂಬಂಧಿಕ ಸೋಮು ನಂಬರ್ ಆಗಿತ್ತು. ಕರೆ ಮಾಡಿ ಸೋಮು ಅವರಿಗೆ ಮಾಹಿತಿ ನೀಡಿದ್ದ ಹೆಡ್ ಕಾನ್ಸ್ ಸ್ಟೇಬಲ್ ಮಲ್ಲಿಕಾರ್ಜುನ ಬಳಿಕ ಬ್ಯಾಗ್ ಬಿಟ್ಟು ಹೋಗಿರುವ ವಿಷಯ ಪ್ರವೀಣ್​ಗೆ ತಿಳಿಸಿದ್ದಾರೆ. ಪ್ರವೀಣ್ ಬಂದು ಚಿನ್ನಾಭರಣ ಇದ್ದ ಬ್ಯಾಗ್ ಪಡೆದುಕೊಂಡಿದ್ದಾರೆ. ಆಡುಗೋಡಿ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನಗೆ ದಂಪತಿ ಧನ್ಯವಾದ ತಿಳಿಸಿದ್ದಾರೆ. ಹೆಚ್​ಸಿ ಮಲ್ಲಿಕಾರ್ಜುನ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ದುಬಾರಿ ಐಫೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್​​

ದುಬಾರಿ ಐಫೋನ್ ಅನ್ನು ಪೊಲೀಸರು ಅದರ ಮಾಲೀಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿರುವಂತಹ ಘಟನೆ ಕೊಡಗು ಜಿಲ್ಲೆ‌ಯ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲ್ಲಿನಲ್ಲಿ ನಡೆದಿದ್ದು, ಠಾಣೆಯ ಕಾನ್ಸ್‌ಟೇಬಲ್‌ ರಾಘವೇಂದ್ರ ಈ ಸ್ತುತ್ಯರ್ಹ ಕಾರ್ಯವೆಸಗಿದ್ದರು.

ಇದನ್ನೂ ಓದಿ: ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಠಾಣೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಸಿಬ್ಬಂದಿ

ಭಾನುವಾರ ಡಿಸೆಂಬರ್​ 3 ರಂದು ಆನೆಚೌಕೂರು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್‌ಟೇಬಲ್‌ ರಾಘವೇಂದ್ರ, ಈ ಸಂದರ್ಭ ರಸ್ತೆ ಬದಿ ದುಬಾರಿ ಬೆಲೆಯ ಐಫೋನ್ ಒಂದು ಅವರ ಕಣ್ಣಿಗೆ ಬಿದ್ದಿತ್ತು. ಐಫೋನ್​ನಲ್ಲಿ‌ ಬಹಳಷ್ಟು ಮಿಸ್ಡ್​​​ ಕಾಲ್​ಗಳಿದ್ದವು. ಅದರಲ್ಲಿ ಅತಿ ಹೆಚ್ಚು ಮಿಸ್ಡ್​ ಕಾಲ್‌ ಬಂದ ನಂಬರ್​ಗೆ ರಾಘವೇಂದ್ರ ಕರೆ ಮಾಡಿದಾಗ ಆ ಮೊಬೈಲ್​ನ​ ಮಾಲೀಕ‌ ಕೇರಳ‌ ಮೂಲದ ಸಿಜೋಮ್ ಎಂಬುದು ಗೊತ್ತಾಗಿತ್ತು. ಬಳಿಕ ಠಾಣೆಯಲ್ಲಿ ಕಾನ್ಸ್‌ಟೇಬಲ್‌ ರಾಘವೇಂದ್ರ ಮೊಬೈಲ್ ಹಿಂದಿರುಗಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:08 pm, Wed, 17 January 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು