AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?

ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?
ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್
TV9 Web
| Edited By: |

Updated on: Jul 29, 2022 | 3:08 PM

Share

ಬೆಂಗಳೂರು: ಕಳೆದ ಎರಡು ವರ್ಷದಿಂದ ಕೊರೊನಾ(Coronavirus) ಕಾರಣದಿಂದಾಗಿ ನಿಂತಿದ್ದ ಲಾಲ್ ಬಾಗ್ ಫ್ಲವರ್ ಶೋ (Lalbagh Flower Show) ಈ ವರ್ಷ ಅದ್ದೂರಿಯಾಗಿ ನಡೆಯಲಿದೆ. ಆಗಸ್ಟ್ 5ರಿಂದ ಆ.15ರವರೆಗೆ ಫ್ಲವರ್ ಶೋ ನಡೆಯಲಿದ್ದು ಆಗಸ್ಟ್ 5 ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ(Basavaraj Bommai) ಮಾಡಲಿದ್ದಾರೆ. ಅದರಲ್ಲೂ ಈ ಬಾರಿ ವಿಶೇಷ ಅಂದ್ರೆ ಈ ಬಾರಿ ನಟ ಪುನೀತ್ ರಾಜ್ ಕುಮಾರ್(Puneeth Rajkumar) ಹೆಸರಿನಲ್ಲಿ ಫ್ಲವರ್ ಶೋ ನಡೆಯುತ್ತದೆ. ಡಾ.ರಾಜ್ ಕುಮಾರ್(Dr Raj kumar) ಅವರ ಗಾಜನೂರಿನ ಮನೆಗೆ ಹೂವಿನ ಅಲಂಕಾರ ಮಾಡಲಾಗುತ್ತಿದೆ.

ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು

ಇನ್ನು ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋ ಬಗ್ಗೆ ತೋಟಗಾರಿಕೆ ಇಲಾಖೆ ನಿರ್ದೇಶಕ ಜಗದೀಶ್ ಮಾಹಿತಿ ನೀಡಿದ್ದಾರೆ. ಇದು 212ನೇ ಫ್ಲವರ್ ಶೋ. ಲಾಲ್ ಬಾಗ್ನಲ್ಲಿ ಈ ಬಾರಿಯ ಫ್ಲವರ್ ಶೋ ಅಣ್ಣಾವ್ರು ಮತ್ತು ಪುನೀತ್ ಗೆ ಡೆಡಿಕೇಟ್ ಮಾಡ್ತಿದ್ದೀವಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಕಾರಣ ಫ್ಲವರ್ ಶೋ ಮಾಡಿರಲಿಲ್ಲ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡ್ತೀವಿ. ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು ಎಂದ ತಿಳಿಸಿದ್ದಾರೆ.

ಈ ಬಾರಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷ ಕಳೆದ ಎರಡು ವರ್ಷ ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡಲು ತಯಾರಿ ನಡೆಯುತ್ತಿದೆ. ವಿದೇಶಗಳಿಂದಲೆಲ್ಲ ಹೂಗಳನ್ನು ತರಿಸಲಾಗುತ್ತಿದೆ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡಲಾಗುತ್ತೆ.

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್