AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalbagh Flower Show: ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಗಣರಾಜ್ಯೋತ್ಸವ ಪ್ರಯುಕ್ತ ಲಾಲ್​ಬಾಗ್​ನಲ್ಲಿ ಆಯೋಜಸಿರುವ 215ನೇ ಫ್ಲವರ್ ಶೋವನ್ನು ಬಸವಣ್ಣನವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಬಳಿಕ ಫ್ಲವರ್ ಶೋವನ್ನು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ವೀಕ್ಷಣೆ ಮಾಡಿದ್ದು, ಸಚಿವ ರಾಮಲಿಂಗರೆಡ್ಡಿ ಕೂಡ ಸಾಥ್​ ನೀಡಿದ್ದಾರೆ. 

Lalbagh Flower Show: ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಫಲಪುಷ್ಪ ಪ್ರದರ್ಶನ
Poornima Agali Nagaraj
| Edited By: |

Updated on:Jan 18, 2024 | 7:46 PM

Share

ಬೆಂಗಳೂರು, ಜನವರಿ 18: ಗಣರಾಜ್ಯೋತ್ಸವ (Republic Day) ಪ್ರಯುಕ್ತ ಲಾಲ್​ಬಾಗ್​ನಲ್ಲಿ ಆಯೋಜಸಿರುವ 215ನೇ ಫ್ಲವರ್ ಶೋ (Lalbagh Flower Show) ವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಬಳಿಕ ಫ್ಲವರ್ ಶೋವನ್ನು ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ವೀಕ್ಷಣೆ ಮಾಡಿದ್ದು, ಸಚಿವ ರಾಮಲಿಂಗರೆಡ್ಡಿ ಕೂಡ ಸಾಥ್​ ನೀಡಿದರು. ಈ ಬಾರಿ ಫ್ಲವರ್​ ಶೋನಲ್ಲಿ 68 ಬಗೆಯ 32 ಲಕ್ಷ ಹೂವುಗಳ ಬಳಕೆ ಮಾಡಲಾಗಿದೆ. ಇಂದಿನಿಂದ ಜನವರಿ 28ರವರೆಗೆ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶವಿದ್ದು, ಬೆಳಗ್ಗೆ 6.30ರಿಂದ ಸಂಜೆ 7.30ರವರೆಗೆ ವೀಕ್ಷಿಸಬಹುದಾಗಿದೆ.

215ನೇ ಫಲಪುಷ್ಟ ಪ್ರದರ್ಶನದಲ್ಲಿ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಚನ್ನಬಸವಣ್ಣ ಪ್ರತಿರೂಪ ಅರಳಿದ್ದು, ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಸೇವಂತಿಗೆ, ಗುಲಾಬಿ ಹೂವುಗಳಿಂದ ಅನುಭವ ಮಂಟಪ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ: ಅಧಿಕೃತ ಘೋಷಣೆಯೊಂದೇ ಬಾಕಿ

ವಿದೇಶದ ವಿಶೇಷ ಆರ್ಕೆಸ್ಟ್ರಾಗಳಾದ ವ್ಯಾನ್ಸ್, ಪ್ಯಾಲನೋಪ್ಸ್, ಲ್ಯಾಡ್ಸ್, ಮಕರ, ಕ್ಯಾಟ್ಲಿಯಾ ಹೂಗಳನ್ನು ಪ್ರದರ್ಶನ ಮಾಡಲಾಗುತ್ತಿದೆ.

ಬಸವಣ್ಣನವರು ಇನ್ನುಂದೆ ಸಾಂಸ್ಕೃತಿಕ ನಾಯಕ: ಸಿಎಂ ಸಿದ್ದರಾಮಯ್ಯ

ಫ್ಲವರ್ ಶೋ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಸಾಕಷ್ಟು ಜನ ಸ್ವಾಮೀಜಿಯವರು ನನ್ನ ಭೇಟಿ‌ಮಾಡಿದರು. ಸಾಂಸ್ಕೃತಿಕ ನಾಯಕ ಅಂತ ಬಸವಣ್ಣನವರನ್ನ ಕರೆಯಬೇಕು ಅಂತ ಒತ್ತಾಯ ಮಾಡಿದರು. ಹೀಗಾಗಿ ಕ್ಯಾಬಿನೆಟ್ ಮಿಟಿಂಗ್​ನಲ್ಲಿ ತೀರ್ಮಾನ ಮಾಡಿದ್ದೇವೆ. ಇನ್ಮುಂದೆ ಬಸವಣ್ಣನವರನ್ನ ಸಾಂಸ್ಕೃತಿಕ ನಾಯಕ ಎಂದು ಕರೆಯಲಾಗುತ್ತೆ. ಶಿಕರಿಪುರದ 46 ಎಕರೆ ಜೈಲಿನ ಜಾಗಕ್ಕೆ ಅಲ್ಲಮ ಪ್ರಭುಜಾಗಕ್ಕೆ ನಾಮಕರಣ ಮಾಡಿದ್ದೇವೆ. ಅನುಭವ ಮಂಟಪದ ಬಳಿ ಫ್ರಿಡಂ ಪಾರ್ಕ್ ಅಂತ ಪಾರ್ಕ್ ಇದೆ. ಆ ಪಾರ್ಕ್ ಗೆ ಅಲ್ಲಮ ಪ್ರಭು ಪಾರ್ಕ್ ಅಂತ ಕರೆಯಲಾಗುತ್ತೆ ಎಂದು ಹೇಳಿದ್ದಾರೆ.

ಲಾಲ್ ಬಾಗ್ ಎಂದಿನಂತೆ ಈ ವರ್ಷವು ಫಲಪುಷ್ಪ ಪ್ರದರ್ಶನವನ್ನು ಗಣರಾಜ್ಯೋತ್ಸವದ ಪ್ರಯುಕ್ತ ಅಯೋಜನೆ ಮಾಡಿದ್ದಾರೆ. ಈ ವರ್ಷದ ಫ್ಲವರ್ ಶೋ ನಾ ನಾನು ಮತ್ತೆ ಡಿಸಿಎಂ ಉದ್ಘಾಟನೆ ಮಾಡಿದ್ದೇವೆ. 12 ಶತಮಾನದಲ್ಲಿದಲ್ಲಿ ಸಮಾನತೆಯನ್ನ ನಿರ್ಮಾಣ ಮಾಡುವ ಸಲುವಾಗಿ ಜಾತಿ ಹೋಗಲಾಡಿಸುವ ಸಲುವಾಗಿ ಬಸವಣ್ಣನವರು ಹೋರಾಡಿದ್ದರು. ಇವುಗಳನ್ನ ಪರಿಚಯಿಸುವ ದೃಷ್ಟಿಯಿಂದ ತೋಟಗಾರಿಕೆ ಇಲಾಖೆ ಪ್ರದರ್ಶನ ಏರ್ಪಡಿಸಿದೆ ಎಂದರು.

ಇದನ್ನೂ ಓದಿ: ಜನವರಿ 18 ರಿಂದ ಲಾಲ್​ಬಾಗ್​ ಫ್ಲವರ್​ ಶೋ ಆರಂಭ: ಟಿಕೆಟ್​ ದರ, ವಿಶೇಷತೆ ಏನು? ಇಲ್ಲಿದೆ ಮಾಹಿತಿ

ಬಸವಣ್ಣನವರ ಸಂದೇಶವನ್ನ ಜನರಿಗೆ ತಲುಪಿಸುವ ಕೆಲಸವನ್ನ ತೋಟಗಾರಿಕೆ ಮಾಡಿದೆ. ಈ ಫ್ಲವರ್ ಶೋ‌ಗೆ 35 ಲಕ್ಷ ಹೂಗಳನ್ನ ಬಳಕೆ ಮಾಡಿ ಫ್ಲವರ್ ಶೋ ಆಯೋಜನೆ ಮಾಡಿದ್ದಾರೆ. ಬೆಂಗಳೂರು ಜನರು ಇದರ ಸದುಪಯೋಗ ಪಡೆದುಕೊಳ್ಳಿ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಬೆಳವಣಿಗೆಯ ಪರಿಚಯಿಸುವ ಕೆಲಸ ತೋಟಗಾರಿಕೆ ಇಲಾಖೆ ಮಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:30 pm, Thu, 18 January 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್