AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Fine Discount: 50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಇಂದು ಕೊನೆ ದಿನ

ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇಕಡಾ 50ರಷ್ಟು ರಿಯಾಯಿತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಟ್ರಾಫಿಕ್ ದಂಡ ರಿಯಾಯಿತಿ ಪಾವತಿಗೆ ಕೊನೆ ದಿನ. ಜುಲೈ 6 ರಿಂದ ಸೆ.9ರವರೆಗೆ ಟ್ರಾಫಿಕ್ ದಂಡ ಪಾವತಿಗೆ 2ನೇ ಬಾರಿ ಅವಕಾಶ ನೀಡಲಾಗಿತ್ತು. ಸದ್ಯ ಗಡವು ಮುಗಿದಿದ್ದು ಇಂದು ದಂಡ ಪಾವತಿಗೆ ಕೊನೆ ದಿನವಾಗಿದೆ.

Traffic Fine Discount: 50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಇಂದು ಕೊನೆ ದಿನ
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on:Sep 09, 2023 | 7:05 AM

Share

ಬೆಂಗಳೂರು, ಸೆ.09: ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇಕಡಾ 50ರಷ್ಟು ರಿಯಾಯಿತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಟ್ರಾಫಿಕ್ ದಂಡ ರಿಯಾಯಿತಿ ಪಾವತಿಗೆ ಕೊನೆ ದಿನ. ಜುಲೈ 6 ರಿಂದ ಸೆ.9ರವರೆಗೆ ಟ್ರಾಫಿಕ್ ದಂಡ ಪಾವತಿಗೆ 2ನೇ ಬಾರಿ ಅವಕಾಶ ನೀಡಲಾಗಿತ್ತು. ಸದ್ಯ ಗಡವು ಮುಗಿದಿದ್ದು ಇಂದು ದಂಡ ಪಾವತಿಗೆ ಕೊನೆ ದಿನವಾಗಿದೆ. ಹೀಗಾಗಿ ಇಂದೇ ದಂಡ ಪಾವತಿ ಮಾಡಿದರೆ 50% ರಿಯಾಯಿತಿ ಸಿಗಲಿದೆ. ಜು.6ರಿಂದ ಈವರೆಗೂ 2,53,519 ಪ್ರಕರಣಗಳ ದಂಡ ವಸೂಲಿಯಾಗಿದೆ. ಈವರೆಗೂ ಅಂದರೆ ಕಳೆದ 64 ದಿನಗಳಲ್ಲಿ 8,07,73,190 ರೂ. ಬಾಕಿ ದಂಡ ವಸೂಲಿ ಸಂಗ್ರಹವಾಗಿದೆ. ಇಂದು ಕೊನೆ ದಿನ ಹೀಗಾಗಿ, ಯಾರಾದರೂ ಫೈನ್‌ ಬಾಕಿ ಉಳಿಸಿಕೊಂಡಿದ್ದರೆ ಕಟ್ಟುಬಿಡಿ.

ಇದೇ ವರ್ಷ ಫೆಬ್ರವರಿ 2ಕ್ಕಿಂತ ಹಿಂದೆ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿ ಇ-ಚಲನ್‌ನಲ್ಲಿ ದಾಖಲಾಗಿರುವ ಕೇಸ್‌ಗಳಿಗೆ ಮಾತ್ರವೇ ಅನ್ವಯಿಸುವಂತೆ ಜುಲೈ 5ರಂದು ಸರ್ಕಾರ ಆದೇಶ ಹೊರಡಿಸಿತ್ತು. ಬರೋಬ್ಬರಿ 64 ದಿನಗಳ ಡಿಸ್ಕೌಂಟ್‌ ಅವಧಿಯಲ್ಲಿ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ 2,53,519 ಕೇಸ್‌ಗಳನ್ನು ಇತ್ಯರ್ಥಪಡಿಸಿಕೊಂಡಿರುವ ವಾಹನ ಸವಾರರು, 8,07,73,190 ರೂ. ದಂಡ ಪಾವತಿಸಿದ್ದಾರೆ.

ಇದನ್ನೂ ಓದಿ: Traffic Fine Discount: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ 50ರಷ್ಟು ರಿಯಾಯಿತಿ

ಇನ್ನು ಇಡೀ ಕರ್ನಾಟಕದಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ವಾಹನ ಸವಾರರು ಹಲವು ವರ್ಷಗಳಿಂದ ದಂಡ ಪಾವತಿ ಮಾಡದೆ ಸುಮಾರು 259 ಕೋಟಿ ರೂ. ಉಳಿಸಿಕೊಂಡಿದ್ದರು. ಹೀಗಾಗಿ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ಸಾರಿಗೆ ಹಾಗೂ ಸಂಚಾರ ಪೊಲೀಸರ ಜೊತೆ ಚರ್ಚಿಸಿ ಶೇ 50ರಷ್ಟು ದಂಡ ವಿನಾಯಿತಿ ಘೋಷಿಸುವಂತೆ ಸರಕಾರಕ್ಕೆ ಶಿಫಾರಸು ಮಾಡಿತ್ತು. ಈ ಪರಿಣಾಮ ಫೆಬ್ರವರಿ ಹಾಗೂ ಮಾರ್ಚ್‌ನಲ್ಲಿಎರಡು ಅವಧಿಯಲ್ಲಿ ವಿನಾಯಿತಿ ನೀಡಲಾಗಿತ್ತು. ಈ ವಿನಾಯಿತಿಯಿಂದ ವಾಹನ ಸವಾರರು ಫುಲ್ ಖುಷ್ ಆಗಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, 35.60 ಲಕ್ಷ ಬಾಕಿ ಕೇಸ್‌ಗಳು ಇತ್ಯರ್ಥಗೊಂಡು 120 ಕೋಟಿ ರೂ.ಗಳಿಗೆ ಹೆಚ್ಚು ಮೊತ್ತ ಸಂಗ್ರಹವಾಗಿತ್ತು. ಬಳಿಕ ಮೂರನೇ ಬಾರಿ ಜುಲೈ 5ರಂದು 60 ದಿನಗಳಿಗೂ ಹೆಚ್ಚು ಕಾಲಾವಕಾಶ ನೀಡಿದರೂ ವಾಹನ ಸವಾರರು ನಿರಾಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:59 am, Sat, 9 September 23

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ