AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PartialSolarEclipse: ಕರ್ನಾಟಕದ ಹಲವೆಡೆ ಪಾರ್ಶ್ವ ಸೂರ್ಯಗ್ರಹಣ ಗೋಚರ: ಬೆಂಗಳೂರು ಬಹುತೇಕ ಸ್ತಬ್ಧ, ಹೊರಬಾರದ ಜನ

ಗ್ರಹಣ ಗೋಚರದಿಂದಾಗಿ ಬೆಂಗಳೂರಿನ ಬಹುತೇಕ ಕಡೆ ಸ್ತಬ್ಧವಾಗಿದ್ದು, ನಗರದ ಮಲ್ಲೇಶ್ವರಂ, ಯಶವಂತಪುರ ಸೇರಿ ಹಲವೆಡೆ ರಸ್ತೆಗಳಲ್ಲಿ ಜನ ಹಾಗೂ ವಾಹನ ಸಂಚಾರ ವಿರಳವಾಗಿದೆ.

PartialSolarEclipse: ಕರ್ನಾಟಕದ ಹಲವೆಡೆ ಪಾರ್ಶ್ವ ಸೂರ್ಯಗ್ರಹಣ ಗೋಚರ: ಬೆಂಗಳೂರು ಬಹುತೇಕ ಸ್ತಬ್ಧ, ಹೊರಬಾರದ ಜನ
ಪಾರ್ಶ್ವ ಸೂರ್ಯಗ್ರಹಣ
TV9 Web
| Edited By: |

Updated on:Oct 25, 2022 | 6:15 PM

Share

ಬೆಂಗಳೂರು: ಕರ್ನಾಟಕದ ಹಲವು ನಗರಗಳಲ್ಲೂ ಪಾರ್ಶ್ವ ಸೂರ್ಯ ಗ್ರಹಣ (PartialSolarEclipse) ಕಾಣಿಸಿಕೊಂಡಿದ್ದು, ಬೆಂಗಳೂರು, ಬೀದರ್‌, ಹುಬ್ಬಳ್ಳಿ, ಕೊಪ್ಪಳ, ಮಂಗಳೂರು, ಧಾರವಾಡ, ಬೆಳಗಾವಿ, ರಾಯಚೂರು, ಮೈಸೂರು, ಕಲಬುರಗಿ, ಕೋಲಾರ, ಬಳ್ಳಾರಿ, ವಿಜಯಪುರ, ಶಿವಮೊಗ್ಗ, ಬಾಗಲಕೋಟೆ, ಹಾಸನ, ಉಡುಪಿ, ಮಂಡ್ಯ ಸೇರಿ ಹಲವು ನಗರಗಳಲ್ಲಿ ಗ್ರಹಣ ಗೋಚರವಾಗಿದೆ. ಇನ್ನು ಗ್ರಹಣ ಗೋಚರದಿಂದಾಗಿ ಬೆಂಗಳೂರಿನ ಬಹುತೇಕ ಕಡೆ ಸ್ತಬ್ಧವಾಗಿದ್ದು, ನಗರದ ಮಲ್ಲೇಶ್ವರಂ, ಯಶವಂತಪುರ ಸೇರಿ ಹಲವೆಡೆ ರಸ್ತೆಗಳಲ್ಲಿ ಜನ ಹಾಗೂ ವಾಹನ ಸಂಚಾರ ವಿರಳವಾಗಿದೆ. ಮೆಜೆಸ್ಟಿಕ್ ಸೇರಿ ಬಹುತೇಕ ಬಸ್ ನಿಲ್ದಾಣಗಳು ಖಾಲಿ ಖಾಲಿಯಾಗಿವೆ. ನಗರದಲ್ಲಿ ಬಹುತೇಕ ಅಂಗಡಿಗಳು ಬಂದ ಮಾಡಲಾಗಿದೆ. ಸೂರ್ಯ ಗ್ರಹಣ ಹಿನ್ನೆಲೆ ಸಿಲಿಕಾನ್ ಸಿಟಿ ಜನ ಹೊರಬಂದಿಲ್ಲ. ಇನ್ನು ಭಾರತದ ಹಲವೆಡೆ ಗ್ರಹಣ ಗೋಚರವಾಗಿದ್ದು, ಮೊದಲಿಗೆ ಅಮೃತಸರ​​ದಲ್ಲಿ ಸಂಜೆ 4 ಗಂಟೆ 19 ನಿಮಿಷಕ್ಕೆ ಗ್ರಹಣ ಗೋಚರವಾಗಿದೆ. ಬಳಿಕ ದೆಹಲಿ, ಹರಿದ್ವಾರ, ಕುರುಕ್ಷೇತ್ರ, ಜಮ್ಮು, ಶ್ರೀನಗರ, ನೋಯ್ಡಾ, ಋಷಿಕೇಶ್, ಭೋಪಾಲ್, ಮುಂಬೈ, ಕೋಲ್ಕತ್ತಾ, ಅಹಮದಾಬಾದ್, ಲಖನೌ, ಜೈಪುರ, ಪಾಟ್ನಾದಲ್ಲೂ ಸೂರ್ಯಗ್ರಹಣ ಗೋಚರವಾಗಿದೆ.

ಸೂರ್ಯಗ್ರಹಣ ಹಿನ್ನೆಲೆ ರಾಜ್ಯದ ಹಲವು ದೇವಸ್ಥಾನಗಳು ಬಂದ್​

ಸೂರ್ಯಗ್ರಹಣ ಹಿನ್ನೆಲೆ ರಾಜ್ಯದ ಹಲವು ದೇವಸ್ಥಾನಗಳನ್ನೂ ಸಹ ಬಂದ್​ ಮಾಡಲಾಗಿತ್ತು. ಗವಿಪುರಂನ ಗವಿಗಂಗಾಧರೇಶ್ವರ ದೇವಸ್ಥಾನ, ಶಿರಸಿ ಮಾರಿಕಾಂಬ, ವಿಜಯಪುರದ ಸುಂದರೇಶ್ವರ ದೇವಸ್ಥಾನ, ಶನಿದೇವರ ದೇವಸ್ಥಾನ, ಸಿದ್ದೇಶ್ವರ ದೇವಸ್ಥಾನ, ಚಾಮುಂಡೇಶ್ವರಿ ದೇವಸ್ಥಾನ, ಧರ್ಮಸ್ಥಳದ ಮಂಜುನಾಥ ದೇವಸ್ಥಾನ, ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ, ಕಪಿಲೇಶ್ವರ ದೇಗುಲ, ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ, ಚಿಂಚಲಿ ಮಾಯಕ್ಕದೇವಿ ದೇವಸ್ಥಾನದಲ್ಲೂ ದರ್ಶನಕ್ಕೆ ಅವಕಾಶ, ಯಲ್ಲಮ್ಮ, ಮಾಯಕ್ಕದೇವಿ ದೇಗುಲದಲ್ಲಿ ಆರತಿ, ಪ್ರಸಾದ ಇಲ್ಲ.

ಗ್ರಹಣದ ಸಮಯದಲ್ಲಿ ಏನನ್ನೂ ತಿನ್ನಬಾರದು ಅನ್ನುವುದು ಮೌಢ್ಯ

ಕಲಬುರಗಿ: ಜಿಲ್ಲೆಯಲ್ಲಿ ಗ್ರಹಣದ ಸಮಯದಲ್ಲಿ ಉಪಾಹಾರ ಸೇವನೆ ಮಾಡಲಾಗಿದೆ. ಜ್ಞಾನ ವಿಜ್ಞಾನ ಸಮಿತಿಯಿಂದ ಜಗತ್ ವೃತ್ತದಲ್ಲಿ ಉಪಾಹಾರ ಕೂಟ ಆಯೋಜನೆ ಮಾಡಿದ್ದು, ಗ್ರಹಣದ ಸಮಯದಲ್ಲಿ ಏನನ್ನೂ ತಿನ್ನಬಾರದು ಅನ್ನುವುದು ಮೌಢ್ಯ. ಮೌಢ್ಯ ವಿರೋಧಿಸಿ ಜ್ಞಾನ ವಿಜ್ಞಾನ ಸಮಿತಿಯಿಂದ ಉಪಾಹಾರ ಕೂಟ ನಡೆಸಿದ್ದು, ನೂರಾರು ಜನರು ಉಪಾಹಾರ ಸೇವಿಸಿದರು. ಇದೇ ರೀತಿಯಾಗಿ ಶಿವಮೊಗ್ಗದಲ್ಲಿಯೂ ಮದ್ದೂರು ವಡೆ ಮತ್ತು ಮಂಡಕ್ಕಿ ಖಾರವನ್ನು ಸಾರ್ವಜನಿಕರು ಸೇವಿಸುತ್ತಿದ್ದು, ಮೂಢನಂಬಿಕೆ ಹೋಗಲಾಡಿಸುವ ಮತ್ತು ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ.

ವಿಜ್ಞಾನದೆಡೆಗೆ ನಮ್ಮ ನಡೆಯಾಗಿರಬೇಕು: ನಾರಾಯಣ ಮೂರ್ತಿ

ಸೂರ್ಯಗ್ರಹಣ ಮೌಡ್ಯತೆ ಕುರಿತಾಗಿ ಬೆಂಗಳೂರಿನಲ್ಲಿ ಮೂಡನಂಬಿಕೆ ವಿರೋಧಿ ವೇದಿಕೆ ನಾರಾಯಣ ಮೂರ್ತಿ ಮಾತನಾಡಿದ್ದು, ಹಲವಾರು ವರ್ಷಗಳಿಂದ ಈ ಮೌಡ್ಯವನ್ನ ಬಿತ್ತುತ್ತ ಬಂದಿದ್ದಾರೆ. ಇದನ್ನ ದೇವರು ಸೃಷ್ಟಿ ಮಾಡಿರುವುದಲ್ಲ. ಜನರು ಮೂಡಿಸಿಕೊಂಡ ಬಂದಿರುವುದು. ಚಂದ್ರ ಹಾಗೂ ಸೂರ್ಯನ ನಡುವೆ ಬರುವ ಗ್ರಾಹಣಕ್ಕೆ ಹಲವು ಮೌಡ್ಯಗಳ ಹೆಸರನ್ನ ಇಡುತ್ತಿದ್ದೇವೆ. ಗ್ರಾಹಣದ ಹೆಸರಿನಲ್ಲಿ ಆ ದೋಷ ಈ ದೋಷ ಅಂತ ಕೆಲ ಮೂಡರು ಭಯ ಹುಟ್ಟಿಸುತ್ತಿದ್ದಾರೆ. ಇಂತಹ ಮೂಡ ನಂಬಿಕೆಗಳು ಕಡಿಮೆಯಾಗಬೇಕು. ವಿಜ್ಞಾನದೆಡೆಗೆ ನಮ್ಮ ನಡೆಯಾಗಿರಬೇಕು ಎಂದು ನಾರಾಯಣ ಮೂರ್ತಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:12 pm, Tue, 25 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ