AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಡೆ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅಸಮಾಧಾನ: ಆಡಿಯೋ ವೈರಲ್

ಸೊಸೈಟಿಗಳಲ್ಲಿ ಹಣ ವಸೂಲಿ ಬಗ್ಗೆ ಸಚಿವರಿಗೆ ಸಾಮಾಜಿಕ ಹೋರಾಟಗಾರ ಕರೆ ಮಾಡಿದ್ದು, ಈ ವೇಳೆ ಸರ್ಕಾರದ ನಡೆ ಬಗ್ಗೆ ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾಗುತ್ತಿದೆ.

ಸರ್ಕಾರದ ನಡೆ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅಸಮಾಧಾನ: ಆಡಿಯೋ ವೈರಲ್
ಕಾನೂನು ಸಚಿವ ಮಾಧುಸ್ವಾಮಿ
TV9 Web
| Edited By: |

Updated on:Aug 13, 2022 | 11:23 AM

Share

ಬೆಂಗಳೂರು: ಈ ಸರ್ಕಾರ ನಡೆಯುತ್ತಿಲ್ಲ ಕಣಪ್ಪ, ಏಳೆಂಟು ತಿಂಗಳು ಇದೆ ಅಂತ ಮ್ಯಾನೇಜ್​​ ಮಾಡುತ್ತಿದ್ದೇವೆ ಎಂದು ಸರ್ಕಾರದ ನಡೆ ಕುರಿತು ಕಾನೂನು ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾದ ಅವರ ಆಡಿಯೋ ವೈರಲ್ ಆಗಿದೆ. ಸೊಸೈಟಿಗಳಲ್ಲಿ ಹಣ ವಸೂಲಿ ಬಗ್ಗೆ ಸಚಿವರಿಗೆ ಸಾಮಾಜಿಕ ಹೋರಾಟಗಾರ ಕರೆ ಮಾಡಿದ್ದು, ಈ ವೇಳೆ ಸರ್ಕಾರದ ನಡೆ ಬಗ್ಗೆ ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾಗುತ್ತಿದೆ. ಈ ವೇಳೆ ರೈತರ ಸಮಸ್ಯೆ ಬಗೆಹರಿಸಲಾಗುವುದಿಲ್ಲ. ಸಹಕಾರ ಸಚಿವರ ಗಮನಕ್ಕೆ ತಂದರೂ ಅವರು ಏನು ಕ್ರಮ ಕೈಗೊಂಡಿಲ್ಲ ಏನು ಮಾಡೋಣ ಎಂದು ಮಾಧುಸ್ವಾಮಿ ಹೇಳಿದ್ದು, ಈ ಸರ್ಕಾರ ಏನೂ ನಡೆಯುತ್ತಿಲ್ಲ, ಏಳೆಂಟು ತಿಂಗಳಿದೆ ಎಂದು ಮ್ಯಾನೇಜ್ ಮಾಡುತ್ತಿದ್ದೇವೆ ಎಂದು ಸರ್ಕಾರದ ಬಗ್ಗೆ ಮಾಧುಸ್ವಾಮಿ ಮಾತಾಡಿದ್ದಾರೆನ್ನಲಾದ ಆಡಿಯೋ ವೈರಲ್ ಆಗುತ್ತಿದೆ.

ಸಾಮಾಜಿಕ ಹೋರಾಟಗಾರ ಭಾಸ್ಕರ್ ಜೊತೆಗೆ ದೂರವಾಣಿ ಮೂಲಕ ಮಾತನಾಡುವಾಗ ಸಚಿವರು ಹೇಳಿಕೆ ನೀಡಿದ್ದು, ಮೂರು ದಿನದ ಹಿಂದೆ ಈ ಸಂಭಾಷಣೆ ನಡೆದಿದೆ ಎನ್ನಲಾಗುತ್ತಿದೆ. ರೈತರಿಂದ ಬ್ಯಾಂಕ್​ನವರು ಹೆಚ್ಚುವರಿಯಾಗಿ ಹಣ ಪಡೆಯುತ್ತಿದ್ದಾರೆ. ರೈತರ ಹೆಸರಲ್ಲಿ ಬ್ಯಾಂಕ್‌ನವರೆ ಸಾಲ ಪಡೆಯುತ್ತಿದ್ದಾರೆ. ಈ ಬಗ್ಗೆ ಸಚಿವರಿಗೆ ದೂರು ನೀಡಿದಾಗ ದುಡ್ಡು ನಾನೇ ಕಟ್ಟಿದ್ದೀನಿ ಅಂತಾ ಅಸಹಾಯಕ ಹೇಳಿಕೆ ನೀಡಿದ್ದಾರೆ. ಸರ್ಕಾರ ನಡಿತ್ತಿಲ್ಲ ಅಂತಾ ಅವರೆ ಒಪ್ಪಿಕೊಂಡಿದ್ದು, ಸಹಕಾರಿ ಬ್ಯಾಂಕ್​ಗಳ ಎಂ.ಡಿ ಗೆ ದೂರು ನೀಡಿದ್ರೆ ಗಲಾಟೆ ಮಾಡಿ ಅಂತಿದ್ದಾರೆ ಎನ್ನಲಾಗುತ್ತಿದೆ.

Published On - 11:19 am, Sat, 13 August 22

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ