AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲೇ ವಕೀಲೆಗೆ ಚಾಕು ಇರಿತ

ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲೇ ವಕೀಲೆಗೆ ಚಾಕು ಇರಿದು ಕೊಲೆಗೆ ಯತ್ನಿಸಲಾಗಿದೆ. ಕೂಡಲೆ ಹಲಸೂರು ಗೇಟ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲೇ ವಕೀಲೆಗೆ ಚಾಕು ಇರಿತ
ಚಾಕು ಇರಿದ ಆರೋಪಿ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ವಿವೇಕ ಬಿರಾದಾರ|

Updated on:Jul 23, 2024 | 1:23 PM

Share

ಬೆಂಗಳೂರು, ಜುಲೈ 23: ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ (Magistrate Court) ಹಾಲ್ ಒಂದರಲ್ಲಿ ಇಂದು (ಜು.22) ಬೆಳಗ್ಗೆ ವಕೀಲೆಗೆ (Lawyer) ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು (Police) ವಶಕ್ಕೆ ಪಡೆದುಕೊಂಡಿದ್ದಾರೆ. ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ. ಜಯರಾಮರೆಡ್ಡಿ ಚಾಕು ಇರಿದ ಆರೋಪಿ.

ವಕೀಲೆ ವಿಮಲಾ ಮತ್ತು ಆರೋಪಿ ಜಯರಾಮ ಸ್ನೇಹಿತರು. ವಕೀಲೆ ವಿಮಲಾ ಜೊತೆ ಕಳೆದ ಖಾಸಗಿ ಕ್ಷಣಗಳನ್ನು ಜಯರಾಮ ವಿಡಿಯೋ ಮಾಡಿಕೊಂಡಿದ್ದಾನೆ. ಅಲ್ಲದೆ ಜಯರಾಮ ಸ್ನೇಹಿತೆ ವಿಮಲಾ ಬಳಿಯಿಂದ ಹಂತಹಂತವಾಗಿ ಒಂದೂವರೆ ಕೋಟಿಗಿಂತಲೂ ಹೆಚ್ಚು ಹಣ ಪಡೆದಿದ್ದಾನೆ. ನಂತರ ಹೆಜ್ಜಾಲ ಬಳಿ ಇರುವ ಜಾಗದ ವಿಚಾರವಾಗಿ ಇಬ್ಬರಲ್ಲಿ ಕಿರಿಕ್ ಆಗಿತ್ತು.

ಇದನ್ನೂ ಓದಿ: ಶ್ರೀಮಂತ ಮನೆಯ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವಕನಿಗೆ ಬೆದರಿಕೆ

ಬಳಿಕ ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು ಜಾಗದ ವಿಚಾರವಾಗಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ ಇಬ್ಬರೂ ವಿಚಾರಣೆಗೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಆರೋಪಿ ಜಯರಾಮ ಸ್ನೇಹಿತೆ, ವಕೀಲೆ ವಿಮಲಾಗೆ ಕೋರ್ಟ್ ಹಾಲ್​ 1ರಲ್ಲಿ ಚಾಕು ಇರಿದಿದ್ದಾನೆ. ಸದ್ಯ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಪ್ರಕರಣ ಸಂಬಂಧ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:04 pm, Tue, 23 July 24