AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಲೀಸ್​​ ಹಣದ ವಿಚಾರಕ್ಕೆ ಕಿರಿಕ್​​: ಅಳಿಯನಿಂದಲೇ ಹೋಯ್ತು ಮಾವನ ಜೀವ

ಬೆಂಗಳೂರಿನ ಆಸ್ಟಿನ್ ಟೌನ್‌ನಲ್ಲಿ ಮನೆ ಲೀಸ್ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. 11 ವರ್ಷಗಳಿಂದ ಲೀಸ್‌ನಲ್ಲಿದ್ದ ಮನೆಯನ್ನು ಖಾಲಿ ಮಾಡುವಂತೆ ಅಕ್ಕ ಪೀಡಿಸುತ್ತಿದ್ದಳು. ಇದೇ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಮಾವನನ್ನು ಅಳಿಯ ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಘಟನೆ ಮರೆಮಾಚಲು ಯತ್ನಿಸಿದರೂ, ಪೊಲೀಸ್ ತನಿಖೆಯಿಂದ ಸತ್ಯ ಬಯಲಾಗಿದೆ.

ಮನೆ ಲೀಸ್​​ ಹಣದ ವಿಚಾರಕ್ಕೆ ಕಿರಿಕ್​​: ಅಳಿಯನಿಂದಲೇ ಹೋಯ್ತು ಮಾವನ ಜೀವ
ಮೃತ ವ್ಯಕ್ತಿ ಮತ್ತು ಆರೋಪಿImage Credit source: Tv9 Kannada
ಪ್ರದೀಪ್​ ಚಿಕ್ಕಾಟಿ
| Edited By: |

Updated on: Mar 04, 2026 | 5:49 PM

Share

ಬೆಂಗಳೂರು, ಮಾರ್ಚ್​ 04: ಮನೆ ಲೀಸ್​​ ಹಣದ ವಿಚಾರವಾಗಿ ಅಕ್ಕ-ತಮ್ಮನ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿವೇಕನಗರ ಪೊಲೀಸ್​​ ಠಾಣಾ ವ್ಯಾಪ್ತಿಯ ಆಸ್ಟಿನ್ ಟೌನ್​​ನಲ್ಲಿ ನಡೆದಿದೆ. ಅಕ್ಕ-ತಮ್ಮನ ಗಲಾಟೆ ವೇಳೆ ಮಧ್ಯಪ್ರವೇಶಿದ್ದ ಅಳಿಯನೇ ಮಾವನ ಮೇಲೆ ದಾರುಣವಾಗಿ ದಾಳಿ ನಡೆಸಿ ಕೊಂದಿದ್ದಾನೆ. ಇನಾಯತ್ ಪಾಷಾ ಮೃತ ದುರ್ದೈವಿಯಾಗಿದ್ದು, ಆರೋಪಿ ಮಶ್ರೂರ್ ಅಹ್ಮದ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 11 ವರ್ಷಗಳಿಂದ ವಿವೇಕನಗರದ ಆಸ್ಟಿನ್ ಟೌನ್‌ನಲ್ಲಿರುವ ಅಕ್ಕನ ಮನೆಯನ್ನೇ ಲೀಸ್​​ಗೆ ತೆಗೆದುಕೊಂಡು ಇನಾಯತ್ ಒಬ್ಬನೇ ವಾಸವಿದ್ದ. ಮೆಕಾನಿಕ್ ಆಗಿ ಕೆಲಸ ಮಾಡ್ಕೊಂಡಿದ್ದ ಈತ ಅಂಗವಿಕಲ ಕೂಡ. ಈ ನಡುವೆ ಲೀಸ್​​ ಹಣ ವಾಪಸ್​​ ನೀಡದೆ ಮನೆ ಖಾಲಿ ಮಾಡುವಂತೆ ಇನಾಯತ್ ಪಾಷಾನನ್ನು ಅಕ್ಕ ಪೀಡಿಸುತ್ತಿದ್ದಳು. ಇದೇ ವಿಚಾರಕ್ಕೆ ಅಕ್ಕ ಮತ್ತು ತಮ್ಮನ ನಡುವೆ ಆಗಾಗ ಕಿರಿಕ್​​ ನಡೆಯುತ್ತಲೇ ಇತ್ತು. ಭಾನುವಾರ ಕೂಡ ಇನಾಯತ್ ಮನೆಗೆ ಬಂದ ಕೂಡಲೇ ಮನೆ ಖಾಲಿ ಮಾಡು ಎಂದು ಜಗಳ ನಡೆದಿದೆ. ಈ ವೇಳೆ ಇನಾಯತ್ ಅಕ್ಕನ ಮಗ ಮಶ್ರೂರ್ ಅಹ್ಮದ್ ಕೂಡ ಜಗಳಕ್ಕೆ ಎಂಟ್ರಿಯಾಗಿದ್ದ. ಆದ್ರೆ ಜಗಳ ಮಧ್ಯೆ ಮಸ್ರೂರ್ ಮಾರಣಾಂತಿಕ ಹಲ್ಲೆ ಮಾಡಿದ್ರಿಂದ ಕುಸಿದು ಬಿದ್ದ ಇನಾಯತ್ ಪ್ರಾಣ ಬಿಟ್ಟಿದ್ದಾನೆ.

ಇದನ್ನೂ ಓದಿ: ಅಡುಗೆ ವಿಷಯದಲ್ಲಿ ಅತ್ತೆ ಕಿರಿಕ್; ನೊಂದ ಸೊಸೆ ಸಾವಿಗೆ ಶರಣು!

ಇನ್ನು ಘಟನೆಯನ್ನು ಮರೆಮಾಚಲು ಯತ್ನಿಸಿದ್ದ ಆರೋಪಿಗಳು ಇನಾಯತ್ ಅತಿಯಾಗಿ ಕುಡಿದು ಬಿದ್ದು ಸತ್ತುಹೋದ ಎಂದು ಸಂಬಂಧಿಕರು, ಸ್ಥಳೀಯರುನ್ನ ನಂಬಿಸಿದ್ದರು. ಆ ಬಳಿಕ ಇನಾಯತ್ ಅಂತ್ಯ ಸಂಸ್ಕಾರಕ್ಕೂ ಸಿದ್ದತೆ ನಡೆದಿತ್ತು. ಆದರೆ ಸಾವಿನ ಮಾಹಿತಿ ತಿಳೀದು ಸ್ಥಳಕ್ಕೆ ಹೋಗಿದ್ದ ವಿವೇಕ್ ನಗರ ಪೊಲೀಸರ ಬಳಿ ಕೆಲ ಸಂಬಂಧಿಕರು ಕೊಲೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪೊಲೀಸರು ಪ್ರಕರಣ ಕೆದಕಿದಾಗ ಕೊಲೆ ರಹಸ್ಯ ಬಯಲಾಗಿದೆ. ಇನ್ನು ಇನಾಯತ್​​ ಮೃತದೇಹ ಪರಿಶೀಲನೆ ವೇಳೆಯೂ ಮೈಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲೂ ಇನಾಯತ್​​ ಸಾವು ಕೊಲೆ ಎಂಬುದು ದೃಢಪಟ್ಟಿದೆ. ಹೀಗಾಗಿ ಕೊಲೆಯನ್ನ ಸಹಜ ಸಾವೆಂದು ಬಿಂಬಿಸಲು ಹೋಗಿದ್ದ ಮಶ್ರೂರ್ ಈಗ ಖಾಕಿ ಅತಿಥಿಯಾಗಿದ್ದಾನೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್