AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಕ್ಕೆ ಅಮಾಯಕ ಜೀವ ಬಲಿ: ಕುಕ್ಕರ್​ನಿಂದ ಹೊಡೆದು ಪ್ರಿಯತಮೆಯನ್ನೇ ಕೊಂದ ಪ್ರಿಯಕರ

ಕೇರಳ ಮೂಲದ ವೈಷ್ಣವ್-ದೇವಿ ಇಬ್ಬರೂ ಕೆಲ ವರ್ಷಗಳಿಂದ ಲೀವಿಂಗ್ ಟುಗೇದರ್​ನಲ್ಲಿದ್ದರು. ಕಾಲೇಜು ದಿನಗಳಿಂದ ಒಟ್ಟಿಗೆ ವಿದ್ಯಾಭ್ಯಾಸ ‌ಮಾಡಿದ್ದ ಈ ಜೋಡಿ ಕೆಲಸ ಸಿಕ್ಕ ಹಿನ್ನೆಲೆ ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಬೇಗೂರಿನ ನ್ಯೂಮೈಕೋ ಲೇಔಟ್​ನಲ್ಲಿ ನೆಲೆಸಿದ್ದರು. ತಡರಾತ್ರಿ ಇಬ್ಬರ ನಡುವೆ ಜಗಳವಾಗಿ ಹತ್ಯೆ ನಡೆದಿದೆ.

ಅನುಮಾನಕ್ಕೆ ಅಮಾಯಕ ಜೀವ ಬಲಿ: ಕುಕ್ಕರ್​ನಿಂದ ಹೊಡೆದು ಪ್ರಿಯತಮೆಯನ್ನೇ ಕೊಂದ ಪ್ರಿಯಕರ
ವೈಷ್ಣವ್-ದೇವಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Aug 28, 2023 | 10:32 AM

Share

ಬೆಂಗಳೂರು, ಆ.27: ಅನುಮಾನ ಅನ್ನೋದು ಎಂತಹ ಪ್ರೀತಿಯನ್ನು(Love) ಬೇಕಾದ್ರು ಕೊಂದುಬಿಡುತ್ತೆ ಎಂಬುವುದಕ್ಕೆ ಇದೇ ಸಾಕ್ಷಿ. ಕಾಲೇಜು ದಿನಗಳಿಂದಲೂ ಒಟ್ಟಾಗಿ ಓದುತ್ತ, ಕೆಲಸ ಪಡೆದು ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ಯುವಕ-ಯುವತಿಯ ಪ್ರೇಮಕ್ಕೆ ಅನುಮಾನ ಎಂಬ ಭೂತ ಕೊಳ್ಳಿ ಇಟ್ಟಿದೆ. ಕುಕ್ಕರ್​​ನಿಂದ ಹೊಡೆದು ಪ್ರಿಯಕರನೇ ಪ್ರಿಯತಮೆಯ ಬರ್ಬರ ಹತ್ಯೆ(Murder) ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಷ್ಣವ್ ಎಂಬ ಯುವಕ ದೇವಿ(24) ಎಂಬ ಯುವತಿಯನ್ನು ಕುಕ್ಕರ್​ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ.

ಕೇರಳ ಮೂಲದ ವೈಷ್ಣವ್-ದೇವಿ ಇಬ್ಬರೂ ಕೆಲ ವರ್ಷಗಳಿಂದ ಲೀವಿಂಗ್ ಟುಗೇದರ್​ನಲ್ಲಿದ್ದರು. ಕಾಲೇಜು ದಿನಗಳಿಂದ ಒಟ್ಟಿಗೆ ವಿದ್ಯಾಭ್ಯಾಸ ‌ಮಾಡಿದ್ದ ಈ ಜೋಡಿ ಕೆಲಸ ಸಿಕ್ಕ ಹಿನ್ನೆಲೆ ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಬೇಗೂರಿನ ನ್ಯೂಮೈಕೋ ಲೇಔಟ್​ನಲ್ಲಿ ನೆಲೆಸಿದ್ದರು. ತಡರಾತ್ರಿ ಇಬ್ಬರ ನಡುವೆ ಜಗಳವಾಗಿ ಹತ್ಯೆ ನಡೆದಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ನೈತಿಕ ಪೊಲೀಸಗಿರಿ: ಯುವತಿ ಜೊತೆ ಹೋಗಿದ್ದಕ್ಕೆ ಹಲ್ಲೆ, 6 ಜನರ ಬಂಧನ

ಇನ್ನು ವೈಷ್ಣವ್-ದೇವಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದರು. ಈ ಹಿಂದೆ ಕೂಡ ಇವರಿಬ್ಬರಲ್ಲಿ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ಆಗಿತ್ತು. ಆಗ ಕುಟುಂಬದವರೇ ಕೂತು ಸರಿಪಡಿಸಿದ್ದರು. ಆದರೆ ಆರೋಪಿ ವೈಷ್ಣವ್​ಗೆ ಕೆಲ ದಿನಗಳಿಂದ ಯುವತಿ ಮೇಲೆ ಅನುಮಾನ ಹುಟ್ಟಿಕೊಂಡಿತ್ತು. ಈ ಹಿನ್ನೆಲೆ ನಿನ್ನೆ(ಆ.26) ಸಂಜೆ ಜಗಳ ಶುರುವಾಗಿದೆ. ಈ ವೇಳೆ ವೈಷ್ಣವ್ ಕುಕ್ಕರ್ ನಿಂದ ದೇವಿ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಹಿಂದೆಲೆಗೆ ಹೊಡೆದ ಪರಿಣಾಮ ದೇವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ತಾಳಿ ಕಟ್ಟುವ ವೇಳೆ ಈ ಮದ್ವೆ ಬೇಡ ಎಂದು ಹಸೆಮಣೆಯಿಂದ ಮೇಲೆದ್ದ ವಧು

ತುಮಕೂರು, (ಆಗಸ್ಟ್ 27): ಅದ್ಧೂರಿಯಾಗಿ ಆರತಕ್ಷತೆ ಮುಗೀತು. ಇನ್ನೇನು ತಾಳಿ ಕಟ್ಟುವ ಸಂದರ್ಭದಲ್ಲಿ ವಧು ಹಸೆಮಣೆಯಿಂದ ಎದ್ದುಹೋದ ಅಪರೂಪ ಪ್ರಕಣ ತುಮಕೂರು ಜಿಲ್ಲೆ‌ ಕೊರಟಗೆರೆ ತಾಲೂಕಿನ ಕೊಳಾಲದಲ್ಲಿ ಬೆಳಕಿಗೆ ಬಂದಿದೆ. ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಈ ಮದುವೆ ಬೇಡ ಎಂದ ವಧು ಹಸೆಮಣೆಯಿಂದ ಮೇಲೆದ್ದಿದ್ದಾಳೆ. ರಿಸೆಪ್ಷನ್​ನಲ್ಲಿ ನಗುನಗುತ್ತಲೇ ಫೋಟೋಗೆ ಫೋಸ್ ಕೊಟ್ಟಿದ್ದ ಇದೀಗ ತಾಳಿ ಕಟ್ಟುವ ಮುಹೂರ್ತ ಸಮೀಪಿಸುತ್ತಿದ್ದಂತೆಯೇ ಯುವತಿ ಈ ಮದ್ವೆಯೇ ಬೇಡ ಎಂದು ಹಸೆಮಣೆಯಿಂದ ಮೇಲೆದ್ದಾಳೆ. ವಧು ಹೀಗೆ ಹೇಳುತ್ತಿದ್ದಂತೆಯೇ ಕೊಳಾಲದ ಕೆಸಿಎನ್​ ಕನ್ವೆನ್ಷನ್ ಹಾಲ್​ನಲ್ಲಿ ಮದುವೆ ಸಂಭ್ರಮದಲ್ಲಿ ನೆಂಟರು ಕ್ಷಣ ಹೌಹಾರಿದ್ದಾರೆ. ಅಲ್ಲೇ ಮದುವೆ ಮಂಟಪದಲ್ಲಿ ವಧು ಹಾಗೂ ವರನ ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಇದೀಗ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:24 pm, Sun, 27 August 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ