AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಮಗಳಿಗೆ ಮದುವೆ ಮಾಡಿಸಲು ಒಲ್ಲೆ ಎಂದ ಗಂಡ, ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಗೆ ತಾನು ಕೊನೆಯುಸಿರೆಳೆಯುವ ಮುನ್ನ ತನ್ನ ಎರಡನೇ ಮಗಳಿಗೂ ಮುದವೆ ಮಾಡಿಸಿ ತಲೆ ಮೇಲೆ ಇರುವ ಜವಾಬ್ದಾರಿ ಇಳಿಸಬೇಕೆಂಬ ಹಠ. ಆದರೆ, ಅಪ್ರಾಪ್ತ ಮಗಳಿಗೆ ಮದುವೆ ಮಾಡಿಸಲು ಸಾಧ್ಯವಿಲ್ಲ ಎಂದು ಗಂಡ ಹೇಳಿದ್ದಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಪ್ರಾಪ್ತ ಮಗಳಿಗೆ ಮದುವೆ ಮಾಡಿಸಲು ಒಲ್ಲೆ ಎಂದ ಗಂಡ, ಆತ್ಮಹತ್ಯೆ ಮಾಡಿಕೊಂಡ ಪತ್ನಿ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 18, 2023 | 3:30 PM

Share

ಬೆಂಗಳೂರು, ಆಗಸ್ಟ್ 18: ಅಪ್ರಾಪ್ತ ಮಗಳನ್ನು ಮದುವೆ ಮಾಡಿಸಲು ಕಾನೂನು ಅಡ್ಡಿ ಬರುತ್ತದೆ. ಹೀಗಾಗಿ ಈಗಲೇ ಮದುವೆ ಮಾಡಿಸಲು ಸಾಧ್ಯವಿಲ್ಲ ಎಂದು ಪತಿ ಹೇಳಿದ್ದಕ್ಕೆ ಮನನೊಂದ ಪತ್ನಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಗರದ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಫೀಸ ಸುಲ್ತಾನ (42) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಹಫೀಸ ಸುಲ್ತಾನಗೆ ಸೈಯದ್ (34) ಎರಡನೇ ಪತಿಯಾಗಿದ್ದಾರೆ. ಮೊದಲ ಪತಿಯಿಂದ ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರು. ಮೊದಲ ಪತಿ ವಿಚ್ಛೇದನ ನೀಡಿದ ಹಿನ್ನೆಲೆ ಒಂಬತ್ತು ವರ್ಷಗಳ ಹಿಂದೆ ಸೈಯದ್ ಅವರನ್ನು ಮದುವೆಯಾಗಿದ್ದರು. ಈ ನಡುವೆ ಹಫೀಸ ಅನಾರೋಗ್ಯಕ್ಕೆ ಒಳಗಾಗಿದ್ದಳು.

ಇದನ್ನೂ ಓದಿ: ವಿವಾಹಿತ ಪ್ರೇಮಿಗಳಿಂದ ಚಿಕ್ಕಬಳ್ಳಾಪುರದಲ್ಲಿ ತುಂಬಿದ ಕೆರೆಯಲ್ಲಿ ಮುಳುಗಿ, ಆತ್ಮಹತ್ಯೆ ಮಾಡಿಕೊಂಡಿರುವ ರೀತಿ ಡ್ರಾಮಾ! ಕೊನೆಗೇನಾಗಿದೆ ಗೊತ್ತಾ!?

ಹೀಗಾಗಿ, ತಾನು ಬದುಕಿದ್ದಾಗಲೇ ತನ್ನ ಎರಡನೇ ಮಗಳ ಮದುವೆ ನೋಡಬೇಕು. ಆ ಮೂಲಕ ತನ್ನ ತಲೆ ಮೇಲೆ ಇರುವ ಜವಾಬ್ದಾರಿ ಇಳಿಸಬೇಕು ಎಂಬ ಚಿಂತೆಯಲ್ಲಿದ್ದಳು. ಅದರಂತೆ, ಆರು ತಿಂಗಳ ಹಿಂದೆ ಹಿರಿಯ ಮಗಳಿಗೆ ಮದುವೆ ಮಾಡಿಕೊಟ್ಟಿದ್ದ ಪತಿಗೆ ಅಪ್ರಾಪ್ತಳಾಗಿರುವ ಎರಡನೇ ಮಗಳಿಗೂ ಮದುವೆ ಮಾಡಿಕೊಡುವಂತೆ ಒತ್ತಾಯಿಸಲು ಆರಂಭಿಸಿದ್ದಳು.

ಪತ್ನಿಯ ಮಾತಿಗೆ ಒಲ್ಲೆ ಎಂದ ಸೈಯದ್, ಅಪ್ರಾಪ್ತೆಗೆ ಮದುವೆ ಮಾಡಿದರೆ ಜೈಲೂಟ ಗ್ಯಾರಂಟಿ ಎಂದು ಹೇಳಿದ್ದಾರೆ. ಈ ವೇಳೆ, ತಾನು ಸಾಯುವ ಮುನ್ನ ಎರಡನೇ ಮಗಳ ಮದುವೆ ನೋಡಬೇಕು ಎಂದು ಪಟ್ಟು ಹಿಡಿದಿದ್ದಳು. ಆದರೆ ಪತಿ ಕಾನೂನಿನ ಬಗ್ಗೆ ತಿಳಿ ಹೇಳಿ ಮದುವೆ ಮಾಡಿಸಲು ನಿರಾಕರಿಸಿದ್ದಾರೆ.

ಇದರಿಂದ ಮನನೊಂದ ಹಫೀಸ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:25 pm, Fri, 18 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?