AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ: ಇನ್ನೂ ಅಧಿಕೃತವಾಗಿ ಪ್ರಕಟವಾಗದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಬ್ರಾಹ್ಮಣ, ಪಂಚಮಸಾಲಿ ಲಿಂಗಾಯತ, ಹಿಂದುಳಿದ ವರ್ಗ ಮತ್ತು ಮಹಿಳಾ ಕೋಟಾದಡಿ ಅವಕಾಶ ನೀಡುವ ಸಾಧ್ಯತೆಯಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಒಂದು ಸ್ಥಾನ ದೊರೆಯಲಿದೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ: ಇನ್ನೂ ಅಧಿಕೃತವಾಗಿ ಪ್ರಕಟವಾಗದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 24, 2022 | 7:12 AM

Share

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಈಗಾಗಲೇ ಕೆಲವು ಸಂಭಾವ್ಯ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ವರಿಷ್ಠರಿಂದ ಆಂತರಿಕ ಸೂಚನೆ ನೀಡಲಾಗಿತ್ತು. ವರಿಷ್ಠರ ಆಂತರಿಕ ಸೂಚನೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಸಂಭಾವ್ಯ ಅಭ್ಯರ್ಥಿಗಳು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಜಾತಿವಾರು ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಮುಂದಾಗಿದೆ. ಬ್ರಾಹ್ಮಣ, ಪಂಚಮಸಾಲಿ ಲಿಂಗಾಯತ, ಹಿಂದುಳಿದ ವರ್ಗ ಮತ್ತು ಮಹಿಳಾ ಕೋಟಾದಡಿ ಅವಕಾಶ ನೀಡುವ ಸಾಧ್ಯತೆಯಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಒಂದು ಸ್ಥಾನ ದೊರೆಯಲಿದೆ. ಬಿಜೆಪಿ ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ರಾಜ್ಯ ಖಜಾಂಚಿ ಸುಬ್ಬ ನರಸಿಂಹ, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್ ಮತ್ತು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್​ ಇಷ್ಟು ಜನರಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ ನೋಡಬೇಕಿದೆ. ಕೊನೆಯ ಕ್ಷಣದಲ್ಲಿ ಹೈಕಮಾಂಡ್​ನಿಂದ ಅಚ್ಚರಿಯ ಅಭ್ಯರ್ಥಿಗಳು ಪ್ರಕಟಗೊಳ್ಳುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಲಾರಿ, ಖಾಸಗಿ ಬಸ್ ಮುಖಾಮುಖಿ: 7 ಮಂದಿ ಸಾವು

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ನಿನ್ನೆ ಮಧ್ಯಾಹ್ನ ಅಥವಾ ಸಂಜೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ನಿರೀಕ್ಷೆಯಿತ್ತು. ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿದ್ದು, ನಾಲ್ಕು ಸ್ಥಾನಗಳಿಗೆ ಹೈಕಮಾಂಡ್ ಅಭ್ಯರ್ಥಿಗಳ ಹೆಸರು ಪ್ರಕಟಿಸಬೇಕಿದೆ. ಬಿ.ವೈ. ವಿಜಯೇಂದ್ರ, ಎಂ. ರಾಜೇಂದ್ರ, ಲಕ್ಷ್ಮಣ ಸವದಿ, ನಿರ್ಮಲ್ ಕುಮಾರ್ ಸುರಾನಾ, ಗೀತಾ ವಿವೇಕಾನಂದ, ಕೇಶವಪ್ರಸಾದ್, ಛಲವಾದಿ ನಾರಾಯಣಸ್ವಾಮಿ, ಸಿದ್ಧರಾಜು, ಮಂಜಳಾ ಸೇರಿದಂತೆ ಹಲವು ಹೆಸರು ರೇಸ್​ನಲ್ಲಿದ್ದಾವೆ.

ಬಿಜೆಪಿ ಹೈಕಮಾಂಡ್​ಗೆ ತಲೆನೋವಾದ ಅದೊಂದು ಅಭ್ಯರ್ಥಿ ಆಯ್ಕೆ:

ಬಿಜೆಪಿ ಹೈಕಮಾಂಡ್​ಗೆ ಪರಿಷತ್​​ ಅಭ್ಯರ್ಥಿ ಆಯ್ಕೆ ತಲೆನೋವು ಉಂಟು ಮಾಡಿದ್ದು, ಅದೊಂದು ಅಭ್ಯರ್ಥಿ ಬಗ್ಗೆ ಬಿಜೆಪಿ ಹೈಕಮಾಂಡ್​​​​ನಲ್ಲಿ ಗೊಂದಲ ಉಂಟಾಗಿದೆ. ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಸ್ಥಾನ ನೀಡಬೇಕೆ? ಬೇಡವೇ ಎನ್ನುವ ಗೊಂದಲು ಉಂಟಾಗಿದ್ದು, ಬಿ.ವೈ.ವಿಜಯೇಂದ್ರಗೆ ಸ್ಥಾನ ನೀಡಿದರೆ ಹೋಗುವ ಸಂದೇಶ ಏನು? ಬಿ.ವೈ.ವಿಜಯೇಂದ್ರಗೆ ಸ್ಥಾನ ನೀಡದಿದ್ದರೆ ಪರಿಣಾಮ ಏನಾಗಬಹುದು? ವಿಜಯೇಂದ್ರಗೆ ಸ್ಥಾನ ನೀಡದಿದ್ರೆ ಬಿ.ಎಸ್​. ಯುಡಿಯೂರಪ್ಪ ಮುನಿಸಿಕೊಳ್ಳದೆ ಇರುವರೇ? ಬಿಜೆಪಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿತುಪ್ಪವಾಗಿದ್ದಾರೆ. ಸದ್ಯ ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್ ಮೇಲೆ ಬಾರ ಹಾಕಿ ಕುಳಿತಿದ್ದಾರೆ. ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಕೂಡ ಹೇಳಿದ್ದಾರೆ.

ರಾಜ್ಯದ ಇನ್ನುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ