AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leopard Attack: ಅಧಿವೇಶದದಲ್ಲಿ ಪ್ರತಿಧ್ವನಿಸಿದ ಚಿರತೆ ಹಾವಳಿ, ಮಂಡ್ಯದಲ್ಲಿ 410 ಪ್ರಕರಣ ದಾಖಲು, ಕ್ರಮ ಕೈಗೊಳ್ಳದ ಸರ್ಕಾರ: ರವೀಂದ್ರ ಶ್ರೀಕಂಠಯ್ಯ

ಚಿರತೆ ಹಾವಳಿ ಬಜೆಟ್​ ಅಧಿವೇಶದ ಪ್ರಶ್ನೋತ್ತರ ವೇಳೆ ಪ್ರತಿಧ್ವನಿಸಿತು. ಪ್ರಶ್ನೋತ್ತರ ವೇಳೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಚಿರತೆ ಹಾವಳಿ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Feb 21, 2023 | 3:18 PM

Share

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಚಿರತೆ (Leopard) ಹಾವಳಿಯಿಂದ ಜನರು ಆತಂಕಗೊಂಡಿದ್ದಾರೆ. ಪದೆ ಪದೆ ಚಿರತೆ ದಾಳಿಯಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಹೆಚ್ಚಾಗಿ ಚೆರತೆಗಳು ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತಿದ್ದು, ಕಬ್ಬು ಕಟಾವಿನ ವೇಳೆ ದಾಳಿ ಮಾಡುತ್ತವೆ. ಇದರಿಂದ ಅನೇಕರು ಗಾಯಗೊಂಡಿದ್ದಾರೆ. ಮೊದಲೇ ಕಬ್ಬು ಕಟಾವಿಗೆ ಕೂಲಿ ಆಳುಗಳು ಸಿಗುತ್ತಿಲ್ಲ ಎಂದು ರೈತರು ಪರದಾಡುತ್ತಿದ್ದು, ಈಗ ಚಿರತೆ ದಾಳಿಯಿಂದ ಕಟಾವು ಮಾಡಲು ಕೂಲಿ ಕಾರ್ಮಿಕರು ಮುಂದೆ ಬರುತ್ತಿಲ್ಲ. ಈ ಚಿರತೆ ಹಾವಳಿ ಬಜೆಟ್​ ಅಧಿವೇಶದ (Budget Session) ಪ್ರಶ್ನೋತ್ತರ ವೇಳೆ ಪ್ರತಿಧ್ವನಿಸಿತು. ಪ್ರಶ್ನೋತ್ತರ ವೇಳೆ ಶ್ರೀರಂಗಪಟ್ಟಣ (Srirangapatna) ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ (Ravindra Srikantaiah) ಚಿರತೆ ಹಾವಳಿ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು.

ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಶ್ನೆ: ಚಿರತೆ ಹಾವಳಿ ತಡೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾತಿ ಅವರು ಹೇಳಿದ್ದಾರೆ. ಆದರೂ ರೈತರು ಹೊಲ ಗದ್ದೆಗಳಿಗೆ ಹೋದಾಗ ಚಿರತೆ ದಾಳಿ ಮಾಡುತ್ತಿದೆ. ಮಂಡ್ಯ ಜಿಲ್ಲೆಯಲ್ಲೇ ಚಿರತೆ ಹಾವಳಿಯ 410 ಪ್ರಕರಣ ದಾಖಲಾದರೂ ಕ್ರಮ ತೆಗೆದುಕೊಂಡಿಲ್ಲ. ಮಕ್ಕಳನ್ನು ಹೊರಗಡೆ ಬಿಡದಿರುವ ಪರಿಸ್ಥಿತಿ ಇದೆ ಎಂದು ಪ್ರಶ್ನಿಸಿದರು.

ಸಚಿವ ಜೆ.ಸಿ.ಮಾಧುಸ್ವಾಮಿ ಉತ್ತರ: ಚಿರತೆ ಮರಿ ಹಾಕಿದ ಮೇಲೆ ಟಚ್ ಮಾಡಲು ಹೋದರೇ ಅಟ್ಯಾಕ್ ಮಾಡುತ್ತಿದೆ. ಸಾಮಾನ್ಯವಾಗಿ ಹಳ್ಳಿಗಳ ಪಕ್ಕದಲ್ಲೇ ಚಿರತೆ ವಾಸ ಮಾಡುವುದು. ಚಿರತೆ ಸೆರೆಗೆ 63 ಜನರ ಟಾಸ್ಕ್​​ಫೋರ್ಸ್ ರಚನೆ ಮಾಡಿದ್ದೇವೆ. ಅದಕ್ಕಾಗಿ ಈ ಬಾರಿಯ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿದ್ದೇವೆ. ಚಿರತೆ ದಾಳಿಗೊಳಗಾದವರಿಗೆ ಪರಿಹಾರ ನೀಡಲಾಗುತ್ತಿದೆ. ಕಾನೂನಿನಡಿ ಚಿರತೆಗಳನ್ನು ಶೂಟ್ ಮಾಡುವುದಕ್ಕೂ ಸಾಧ್ಯವಿಲ್ಲ. ಚಿರತೆಗಳನ್ನು ಹಿಡಿದು ಅರಣ್ಯಕ್ಕೆ ಬಿಡುತ್ತೇವೆ ಎಂದರು.

ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಶ್ನೆ: ಬೈಕ್​​ಗಳಿಗೆ ಚಿರತೆ ಡಿಕ್ಕಿ ಹೊಡೆದು ಸಾಯುತ್ತಿವೆ ಅಂತ ಹೇಳಲೂ ಹೆದರುವಂತಾಗಿದೆ. ಮಂಡ್ಯ ಜಿಲ್ಲೆಗೆ ಉಸ್ತುವಾರಿ ಸಚಿವರೂ ಇಲ್ಲ. ನಾವ್ಯಾರಿಗೆ ಹೇಳಬೇಕು ಅಂತ ಪ್ರಶ್ನೆ ಮಾಡಿದರು.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ: ಉಸ್ತುವಾರಿ ಸಚಿವರನ್ನು ನೇಮಿಸಿದರೇ ಚಿರತೆ ಹಿಡಿಯಲು ಹೋಗುತ್ತಾರಾ ಎಂದು ಕಾಲೆಳೆದರು. ​

ಶಾಸಕ ರವೀಂದ್ರ ಶ್ರೀಕಂಠಯ್ಯ: ದಯಮಾಡಿ ಬೆಳಗ್ಗೆ ಸಮಯದಲ್ಲಿ ವಿದ್ಯುತ್ ನೀಡಿ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ: ಬೆಳಗಿನ ಜಾವ ವಿದ್ಯುತ್ ಪೂರೈಸಿ ಅಂತ ಇಂಧನ ಸಚಿವ ಸುನಿಲ್ ಕುಮಾರ್‌ ಸೂಚಿಸಿದರು.

Published On - 3:17 pm, Tue, 21 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು