Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ ಚಿರತೆ ಓಡಾಟ, ಜನರಿಗೆ ಹೆಚ್ಚಿದ ಆತಂಕ

ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಎನ್‌ಟಿಟಿಎಫ್‌ ಕಾಲೇಜು ಕಾಂಪೌಂಡ್​ ಪಕ್ಕದಲ್ಲಿನ ರಸ್ತೆಯಲ್ಲಿ ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಟೋಲ್​ ಫ್ಲಾಜಾ ಫೇಸ್​ 1ರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ ಚಿರತೆ ಓಡಾಟ, ಜನರಿಗೆ ಹೆಚ್ಚಿದ ಆತಂಕ
ಚಿರತೆ ಓಡಾಟ
Follow us
ವಿವೇಕ ಬಿರಾದಾರ
|

Updated on:Sep 18, 2024 | 11:35 AM

ಬೆಂಗಳೂರು, ಸೆಪ್ಟೆಂಬರ್​​ 18: ಮಂಗಳವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್​ ಸಿಟಿಯ (Electronic City) ಎನ್‌ಟಿಟಿಎಫ್‌ (NNTF) ಕಾಲೇಜು ಕಾಂಪೌಂಡ್​ ಪಕ್ಕದಲ್ಲಿನ ರಸ್ತೆಯಲ್ಲಿ ಚಿರತೆ (Leopard) ರಸ್ತೆ ದಾಟುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಟೋಲ್​ ಫ್ಲಾಜಾ ಫೇಸ್​ 1ರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿದ್ದು ಇದೇ ಮೊದಲಲ್ಲ. ಎರಡು ವಾರಗಳ ಹಿಂದೆ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಚಿರತೆ ಓಡಾಟ ಕಂಡುಬಂದಿತ್ತು. ಇದೇ ಚಿರತೆ ಮತ್ತೆ ಎಲೆಕ್ಟ್ರಾನಿಕ್​ ಸಿಟಿಯಲ್ಲೂ ಕಂಡು ಬಂದಿದೆ ಎಂದು ಅಧಿಕಾರಿಗಳು ಮತ್ತು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ

ಎಲೆಕ್ಟ್ರಾನಿಕ್​ ಸಿಟಿಯ ಎನ್‌ಟಿಟಿಎಫ್‌ ಕಾಲೇಜಿನ ಪ್ರಾಂಶುಪಾಲ ಸುನೀಲ್‌ ಜೋಶಿ ಮಾತನಾಡಿ, ಟೋಲ್‌ಗೇಟ್‌ ಬಳಿಯಿರುವ ಕ್ಯಾಮೆರಾದಲ್ಲಿ ಕಾಂಪೌಂಡ್‌ ಬಳಿ ಚಿರತೆ ಹಾದು ಹೋಗಿರುವ ದೃಶ್ಯ ಸೆರೆಯಾಗಿದೆ. ಕ್ಯಾಂಪಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪರಿಶೀಲನೆ ನಡೆಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಬಂದು ಮರು ಪರಿಶೀಲನೆ ನಡೆಸಿದ್ದಾರೆ.

ಟ್ವಿಟರ್​ ಪೋಸ್ಟ್​

ನಾವು ಎಲ್ಲ ಕೊಠಡಿಗಳು ಮತ್ತು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಚಿರತೆಯ ಯಾವುದೇ ಕುರುಹು ಕಂಡುಬಂದಿಲ್ಲ. ಚಿರತೆ ಕಾಂಪೌಂಡ್ ಪಕ್ಕದ ಮಾರ್ಗದ ಬಳಿ ನಡೆದುಕೊಂಡು ಹೋಗುತ್ತಿರುವುದು ಕಂಡಿದೆ. ಆದರೆ ಅದು ಎಲ್ಲಿ ಹೋಯಿತು ಎಂದು ನಮಗೆ ತಿಳಿದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Wed, 18 September 24

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು