AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ ಚಿರತೆ ಓಡಾಟ, ಜನರಿಗೆ ಹೆಚ್ಚಿದ ಆತಂಕ

ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಎನ್‌ಟಿಟಿಎಫ್‌ ಕಾಲೇಜು ಕಾಂಪೌಂಡ್​ ಪಕ್ಕದಲ್ಲಿನ ರಸ್ತೆಯಲ್ಲಿ ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಟೋಲ್​ ಫ್ಲಾಜಾ ಫೇಸ್​ 1ರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ ಚಿರತೆ ಓಡಾಟ, ಜನರಿಗೆ ಹೆಚ್ಚಿದ ಆತಂಕ
ಚಿರತೆ ಓಡಾಟ
ವಿವೇಕ ಬಿರಾದಾರ
|

Updated on:Sep 18, 2024 | 11:35 AM

Share

ಬೆಂಗಳೂರು, ಸೆಪ್ಟೆಂಬರ್​​ 18: ಮಂಗಳವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್​ ಸಿಟಿಯ (Electronic City) ಎನ್‌ಟಿಟಿಎಫ್‌ (NNTF) ಕಾಲೇಜು ಕಾಂಪೌಂಡ್​ ಪಕ್ಕದಲ್ಲಿನ ರಸ್ತೆಯಲ್ಲಿ ಚಿರತೆ (Leopard) ರಸ್ತೆ ದಾಟುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಟೋಲ್​ ಫ್ಲಾಜಾ ಫೇಸ್​ 1ರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿದ್ದು ಇದೇ ಮೊದಲಲ್ಲ. ಎರಡು ವಾರಗಳ ಹಿಂದೆ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಚಿರತೆ ಓಡಾಟ ಕಂಡುಬಂದಿತ್ತು. ಇದೇ ಚಿರತೆ ಮತ್ತೆ ಎಲೆಕ್ಟ್ರಾನಿಕ್​ ಸಿಟಿಯಲ್ಲೂ ಕಂಡು ಬಂದಿದೆ ಎಂದು ಅಧಿಕಾರಿಗಳು ಮತ್ತು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ

ಎಲೆಕ್ಟ್ರಾನಿಕ್​ ಸಿಟಿಯ ಎನ್‌ಟಿಟಿಎಫ್‌ ಕಾಲೇಜಿನ ಪ್ರಾಂಶುಪಾಲ ಸುನೀಲ್‌ ಜೋಶಿ ಮಾತನಾಡಿ, ಟೋಲ್‌ಗೇಟ್‌ ಬಳಿಯಿರುವ ಕ್ಯಾಮೆರಾದಲ್ಲಿ ಕಾಂಪೌಂಡ್‌ ಬಳಿ ಚಿರತೆ ಹಾದು ಹೋಗಿರುವ ದೃಶ್ಯ ಸೆರೆಯಾಗಿದೆ. ಕ್ಯಾಂಪಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪರಿಶೀಲನೆ ನಡೆಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಬಂದು ಮರು ಪರಿಶೀಲನೆ ನಡೆಸಿದ್ದಾರೆ.

ಟ್ವಿಟರ್​ ಪೋಸ್ಟ್​

ನಾವು ಎಲ್ಲ ಕೊಠಡಿಗಳು ಮತ್ತು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಚಿರತೆಯ ಯಾವುದೇ ಕುರುಹು ಕಂಡುಬಂದಿಲ್ಲ. ಚಿರತೆ ಕಾಂಪೌಂಡ್ ಪಕ್ಕದ ಮಾರ್ಗದ ಬಳಿ ನಡೆದುಕೊಂಡು ಹೋಗುತ್ತಿರುವುದು ಕಂಡಿದೆ. ಆದರೆ ಅದು ಎಲ್ಲಿ ಹೋಯಿತು ಎಂದು ನಮಗೆ ತಿಳಿದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Wed, 18 September 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್