AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ ಚಿರತೆ ಓಡಾಟ, ಜನರಿಗೆ ಹೆಚ್ಚಿದ ಆತಂಕ

ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಎನ್‌ಟಿಟಿಎಫ್‌ ಕಾಲೇಜು ಕಾಂಪೌಂಡ್​ ಪಕ್ಕದಲ್ಲಿನ ರಸ್ತೆಯಲ್ಲಿ ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಟೋಲ್​ ಫ್ಲಾಜಾ ಫೇಸ್​ 1ರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ ಚಿರತೆ ಓಡಾಟ, ಜನರಿಗೆ ಹೆಚ್ಚಿದ ಆತಂಕ
ಚಿರತೆ ಓಡಾಟ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Sep 18, 2024 | 11:35 AM

Share

ಬೆಂಗಳೂರು, ಸೆಪ್ಟೆಂಬರ್​​ 18: ಮಂಗಳವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್​ ಸಿಟಿಯ (Electronic City) ಎನ್‌ಟಿಟಿಎಫ್‌ (NNTF) ಕಾಲೇಜು ಕಾಂಪೌಂಡ್​ ಪಕ್ಕದಲ್ಲಿನ ರಸ್ತೆಯಲ್ಲಿ ಚಿರತೆ (Leopard) ರಸ್ತೆ ದಾಟುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಟೋಲ್​ ಫ್ಲಾಜಾ ಫೇಸ್​ 1ರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿದ್ದು ಇದೇ ಮೊದಲಲ್ಲ. ಎರಡು ವಾರಗಳ ಹಿಂದೆ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಚಿರತೆ ಓಡಾಟ ಕಂಡುಬಂದಿತ್ತು. ಇದೇ ಚಿರತೆ ಮತ್ತೆ ಎಲೆಕ್ಟ್ರಾನಿಕ್​ ಸಿಟಿಯಲ್ಲೂ ಕಂಡು ಬಂದಿದೆ ಎಂದು ಅಧಿಕಾರಿಗಳು ಮತ್ತು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ

ಎಲೆಕ್ಟ್ರಾನಿಕ್​ ಸಿಟಿಯ ಎನ್‌ಟಿಟಿಎಫ್‌ ಕಾಲೇಜಿನ ಪ್ರಾಂಶುಪಾಲ ಸುನೀಲ್‌ ಜೋಶಿ ಮಾತನಾಡಿ, ಟೋಲ್‌ಗೇಟ್‌ ಬಳಿಯಿರುವ ಕ್ಯಾಮೆರಾದಲ್ಲಿ ಕಾಂಪೌಂಡ್‌ ಬಳಿ ಚಿರತೆ ಹಾದು ಹೋಗಿರುವ ದೃಶ್ಯ ಸೆರೆಯಾಗಿದೆ. ಕ್ಯಾಂಪಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪರಿಶೀಲನೆ ನಡೆಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಬಂದು ಮರು ಪರಿಶೀಲನೆ ನಡೆಸಿದ್ದಾರೆ.

ಟ್ವಿಟರ್​ ಪೋಸ್ಟ್​

ನಾವು ಎಲ್ಲ ಕೊಠಡಿಗಳು ಮತ್ತು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಚಿರತೆಯ ಯಾವುದೇ ಕುರುಹು ಕಂಡುಬಂದಿಲ್ಲ. ಚಿರತೆ ಕಾಂಪೌಂಡ್ ಪಕ್ಕದ ಮಾರ್ಗದ ಬಳಿ ನಡೆದುಕೊಂಡು ಹೋಗುತ್ತಿರುವುದು ಕಂಡಿದೆ. ಆದರೆ ಅದು ಎಲ್ಲಿ ಹೋಯಿತು ಎಂದು ನಮಗೆ ತಿಳಿದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Wed, 18 September 24

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ