AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ನಾಯಿ ಕೊಂದ ಚಿರತೆ, ಆಚೆ ಹೆಜ್ಜೆ ಇಡಲೂ ಜನರಿಗೆ ಆತಂಕ

Leopard: ಕಳೆದು ನಾಲ್ಕೈದು ತಿಂಗಳಿಂದ ನಗರದ ಒಂದಲ್ಲ, ಒಂದು ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗ್ತಿದೆ. ಇದೀಗ, ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಗೊಂಗಡಿಪುರದಲ್ಲಿ ಚಿರತೆ ಕಾಣಿಸಿಕೊಂಡಿದೆ.

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ನಾಯಿ ಕೊಂದ ಚಿರತೆ, ಆಚೆ ಹೆಜ್ಜೆ ಇಡಲೂ ಜನರಿಗೆ ಆತಂಕ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Feb 03, 2023 | 6:58 AM

Share

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಚಿರತೆ ಹಾವಳಿ ಎದುರಾಗಿದ್ದು, ಜನರ ಆತಂಕ ಪರಿಸ್ಥಿತಿ ಮತ್ತೆ ಮುಂದುವರಿದಿದೆ. ಬೆಂಗಳೂರಿನ ಗೊಂಗಡಿಪುರ ಗ್ರಾಮದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ಭಾಗದ ಜನ ಸಂಜೆಯಾದ್ರೆ ಮನೆ ಬಿಟ್ಟು ಆಚೆ ಬರಲು ಎದುರುವಂತಾಗಿದೆ.

ಕಳೆದು ನಾಲ್ಕೈದು ತಿಂಗಳಿಂದ ನಗರದ ಒಂದಲ್ಲ, ಒಂದು ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗ್ತಿದೆ. ಇದೀಗ, ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಗೊಂಗಡಿಪುರದಲ್ಲಿ ಚಿರತೆ ಕಾಣಿಸಿಕೊಂಡಿದೆ. ಸೋಮವಾರ ರಾತ್ರಿ ನಾಯಿಯೊಂದನ್ನ ಬೇಟೆಯಾಡಿರುವ ಮೃಗ, ಹನುಮಂತಪ್ಪ ಅನ್ನೋರ ಜಮೀನಿನ ಬಳಿ ನಾಯಿ ತಿಂದು ಕೆಲ ದೇಹದ ಭಾಗವನ್ನು ಬಿಟ್ಟುಹೋಗಿದೆ. ನಾಯಿ ಸತ್ತಿರುವ ಜಾಗದಲ್ಲಿ ಚಿರತೆ ಹೆಜ್ಜೆ ಗುರುತು ಇನ್ನೂ ಹಸಿಹಸಿಯಾಗಿ ಪತ್ತೆಯಾಗಿದೆ. ಚಿರತೆ ಜೊತೆ ಎರಡು ಮರಿಗಳನ್ನೂ ಸ್ಥಳೀಯರು ನೋಡಿದ್ದು, ಆತಂಕಕ್ಕೆ ತುತ್ತಾಗಿದ್ದಾರೆ. ಸಂಜೆ 6ರ ಬಳಿಕ ಮನೆಯಿಂದ ಹೊರ ಬರೋಕೆ ಭಯ ಪಡ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜನರ ನಿದ್ದೆಗೆಡಿಸಿದ ಚಿರತೆ ದಾಳಿ; ಶಾಲಾ ಕಾಲೇಜುಗಳಿಗಿಲ್ಲ ರಜೆ, ಇಂದು ಸಹ‌ ಮುಂದುವರೆಯಲಿರುವ ಚೀತಾ ಕೂಂಬಿಂಗ್

ಚಿರತೆ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ರು ಅಧಿಕಾರಿಗಳು ಏನೂ ಮಾಡ್ತಿಲ್ಲ. ಸ್ಥಳಕ್ಕೆ ಬಂದು ಜಸ್ಟ್ ಪಟಾಕಿ ಸಿಡಿಸಿ ತೆರಳಿದ್ದಾರೆ. ಅರಣ್ಯಾಧಿಕಾರಿಗಳ ನಡೆಗೂ ಜನರು ಕೆರಳಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಶವಂತಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಚಿರತೆ ಇರೋದಂತೂ ಕನ್ಪರ್ಮ್​ ಆಗಿದೆ. ಸದ್ಯ ಶ್ವಾನವನ್ನ ಬೇಟೆಯಾಡ್ತಿರುವ ಚಿರತೆ ಮುಂದೆ ಯಾವ ಹಂತಕ್ಕಾದ್ರೂ ಹೋಗಬಹುದು. ಹೀಗಾಗಿ, ಅಧಿಕಾರಿಗಳು ಈಗಲೇ ಎಚ್ಚೆತ್ತುಕೊಳ್ಳಬೇಕಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು