AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಅಲರ್ಟ್

ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವಂತಹ ಘಟನೆ ನಡೆದಿದೆ. ಕೆಂಗೇರಿ ಸುತ್ತಮುತ್ತಲಿನ ಜನರು ಚಿರತೆ ದಾಳಿ ಭೀತಿಯಲ್ಲಿದ್ದಾರೆ.

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಅಲರ್ಟ್
ಚಿರತೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 01, 2022 | 4:25 PM

ಬೆಂಗಳೂರು: ನಗರದ ಜನರಿಗೆ ಇಷ್ಟು ದಿನ ರಸ್ತೆ ಗುಂಡಿಗಳ ಚಿಂತೆಯಾಗಿತ್ತು. ಆದರೆ ಈಗ ಸಿಲಿಕಾನ್​ ಸಿಟಿ ಜನರಿಗೆ ಚಿರತೆ (Leopard) ಕಾಟ ಶುರುವಾದಂತ್ತಾಗಿದೆ. ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವಂತಹ ಘಟನೆ ನಡೆದಿದೆ. ಕೆಂಗೇರಿ ಸುತ್ತಮುತ್ತಲಿನ ಜನರು ಚಿರತೆ ದಾಳಿ ಭೀತಿಯಲ್ಲಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಿಂದ ಚಿರತೆಗಳು ಬಂದಿರುವ ಶಂಕೆ ವ್ಯಕ್ತವಾಗಿದೆ. ಮುಖ್ಯರಸ್ತೆಗೆ ನುಗ್ಗಿ ಜಿಂಕೆ ಕೊಂದು ಚಿರತೆ ತಿಂದುಹೋಗಿರುವುದರಿಂದ ಆ ಭಾಗದಲ್ಲಿ ಜನರಲ್ಲಿ ಆತಂಕ ಶುರುವಾಗಿದೆ. 4 ಚಿರತೆಗಳು ಬಂದಿವೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ಸುತ್ತ 5 ಶಾಲೆಗಳಿದ್ದು, ಶಾಲಾ ಮಕ್ಕಳು ರಸ್ತೆಯಲ್ಲಿ ಓಡಾಡುತ್ತಾರೆ ಎಂದರು. ಬಿಡಿಎ ಕಾಂಪ್ಲೆಕ್ಸ್​ ಕಡೆ ಚಿರತೆ ಬಂದಿದೆ ಎಂದು ಜನರಲ್ಲಿ ಜಾಗೃತಿ ಮೂಡಿಸಲಾಗಿದೆ.

ಇದನ್ನೂ ಓದಿ: ಬಂಡೀಪುರ ಹುಲಿ ಸಂರಕ್ಷಿತಾರಣ್ಯ ರಾಜ್ಯಕ್ಕೆ ನಂ.1, ದೇಶದಲ್ಲಿ ಈ ಸ್ಥಾನದ ನಿರೀಕ್ಷೆ

ಬೆಂಗಳೂರಿನ ಕೆಂಗೇರಿ ಹೊರವಲಯದ ತುರಹಳ್ಳಿ ಬಳಿ ಪ್ರತ್ಯಕ್ಷವಾದ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಬೋನ್​ ಇಟ್ಟಿದ್ದಾರೆ. ಬೋನ್​ನಲ್ಲಿ ನಾಯಿಮರಿ ಕಟ್ಟಿಹಾಕಿ ಚಿರತೆ ಸೆರೆಗೆ ಪ್ರಯತ್ನಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಖಾಸಗಿ ಕಾರ್ಖಾನೆ ಬಳಿ ಕೂಡ ಚಿರತೆ ಪ್ರತ್ಯಕ್ಷವಾಗಿದೆ. 2 ದಿನದಿಂದ ಫ್ಯಾಕ್ಟರಿ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದೆ. ದಟ್ಟವಾದ ಕಾಡು ಇರುವುದರಿಂದ ಚಿರತೆ ಬಂದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಐವರು ಅರಣ್ಯ ಸಿಬ್ಬಂದಿಯಿಂದ ಚಿರತೆಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳು ಬೋನ್ ಇಟ್ಟಿದ್ದಾರೆ.

ಆನೆಗಳೇ ಹೆಚ್ಚಿರುವ ಚಾಮರಾಜನಗರಕ್ಕಿಲ್ಲ ಟಾಸ್ಕ್​ಪೋರ್ಸ್

ಚಾಮರಾಜನಗರ: ಜಿಲ್ಲೆಯ ಶೇ 50 ರಷ್ಟು ಅರಣ್ಯದಿಂದಲೇ ಕೂಡಿರುವ ಜಿಲ್ಲೆಯಾಗಿದೆ. ಅದರಲ್ಲೂ ಸುಮಾರು 2ಸಾವಿರಕ್ಕೂ ಹೆಚ್ಚು ಆನೆಗಳು ವಾಸಿಸುವ ಅರಣ್ಯ ಪ್ರದೇಶವನ್ನು ಹೊಂದಿದೆ. ಇದರಿಂದಲ್ಲೆ ಜಿಲ್ಲೆಯಲ್ಲಿ‌ ನಿರಂತರವಾಗಿ ವನ್ಯಜೀವಿ ಮಾನವ ಸಂಘರ್ಷ ಉಂಟಾಗುತ್ತಿದೆ. ಅದರಲ್ಲೂ ಆನೆಗಳ ಹಾವಳಿ ಯಿಂದ ಜನರ ಜೀವಗಳೂ ಹೋಗಿವೆ. ಇದೇ ರೀತಿಯ ಸಮಸ್ಯೆ ಬೇರೆ ಜಿಲ್ಲೆಗಳಲ್ಲು ಇದೆ. ಇದನ್ನ ಮನಗಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆನೆಗಳ ಹಾವಳಿ ಪರಿಹಾರಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆಯನ್ನ ರಚಿಸಿದ್ದಾರೆ. ಇದರಲ್ಲಿ ಮೈಸೂರು, ಕೊಡುಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ ಒಳಗೊಂಡಿದೆ. ಆದರೆ ಸರ್ಕಾರ ಈ ಟಾಸ್ಕ್ ಪೋರ್ಸ್ (Task Force)​​ನಲ್ಲಿ ಚಾಮರಾಜನಗರ ಜಿಲ್ಲೆಯನ್ನೇ ಕೈಬಿಟ್ಟಿರುವುದು ಆಶ್ವರ್ಯವಾಗಿದೆ. ಇದೇ ಕಾರಣಕ್ಕೆ ಜಿಲ್ಲೆಯ ಶಾಸಕರು ಈ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.

ಪ್ರಮುಖವಾಗಿ ಚಾಮರಾಜನಗರ ಜಿಲ್ಲೆಯ ಹನೂರು ಮಹದೇಶ್ವರ ಬೆಟ್ಟದ ಭಾಗದಲ್ಲಿ ಸಾಕಷ್ಟು ಆನೆ ಹಾವಳಿ ಇದೆ. ಆನೆ ಹಾವಳಿಯಿಂದ ಜೀವ ಹಾನಿ, ಜಮೀನಿನಲ್ಲಿ ಬೆಳೆ ಹಾನಿಯಂತ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದೆ.‌ ಹಾನಿ ಹಾವಳಿ ಇರುವ ಕಾರಣ ಆನೆಗಳಿಗೆ ರೇಡಿಯೋ ಕಾಲರ್​ಗಳನ್ನು ಮಹದೇಶ್ವರ ಬೆಟ್ಟಭಾಗದಲ್ಲಿ ಹಾಕಲಾಗಿದೆ.‌ ಹೀಗಿದ್ದರೂ ಸರ್ಕಾರ ಜಿಲ್ಲೆಯನ್ನ ಟಾಸ್ಕ್ ಪೋರ್ಸ್​​ನಿಂದ ಕೈಬಿಟ್ಟಿರುವುದಕ್ಕೆ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:10 pm, Thu, 1 December 22

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್