AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ, ಒಬ್ಬೊಬ್ಬರೇ ಓಡಾಡದಂತೆ K.R.ಪುರಂ ಅರಣ್ಯಾಧಿಕಾರಿಗಳಿಂದ ಅನೌನ್ಸ್​

ಸಿಂಗಸಂದ್ರ ಬಳಿ ನಿನ್ನೆ ಚಿರತೆ ಪ್ರತ್ಯಕ್ಷವಾಗಿದ್ದು ಬೊಮ್ಮನಹಳ್ಳಿ HSR ಲೇಔಟ್ BTM ಲೇಔಟ್ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಜನರು ಒಬ್ಬೊಬ್ಬರೇ ಓಡಾಡದಂತೆ ಅರಣ್ಯ ಇಲಾಖೆ ಸೂಚನೆ‌ ನೀಡಿದೆ. ರಾತ್ರಿ ವೇಳೆ ಒಬ್ಬೊಬ್ಬರೇ ಓಡಾಡಬೇಡಿ ಅನಿವಾರ್ಯವಿದ್ದಲ್ಲಿ ಕಾರಿನಲ್ಲಿ ಓಡಾಡಿ ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ, ಒಬ್ಬೊಬ್ಬರೇ ಓಡಾಡದಂತೆ K.R.ಪುರಂ ಅರಣ್ಯಾಧಿಕಾರಿಗಳಿಂದ ಅನೌನ್ಸ್​
ಕಾರಿನ ಮುಂದೆ ಪಾಸ್ ಆದ ಚಿರತೆ
ರಾಮು, ಆನೇಕಲ್​
| Edited By: ಆಯೇಷಾ ಬಾನು|

Updated on:Oct 30, 2023 | 1:03 PM

Share

ಬೆಂಗಳೂರು, ಅ.30: ಸಿಲಿಕಾನ್​​ ಸಿಟಿ ಬೆಂಗಳೂರಿನಲ್ಲಿ (Bengaluru) ಚಿರತೆ (Leopard) ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ನಿನ್ನೆ ಚಿರತೆ ಪ್ರತ್ಯಕ್ಷವಾಗಿದ್ದು ಬೊಮ್ಮನಹಳ್ಳಿ HSR ಲೇಔಟ್ BTM ಲೇಔಟ್ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಜನರು ಒಬ್ಬೊಬ್ಬರೇ ಓಡಾಡದಂತೆ ಅರಣ್ಯ ಇಲಾಖೆ ಸೂಚನೆ‌ ನೀಡಿದೆ. ರಾತ್ರಿ ವೇಳೆ ಒಬ್ಬೊಬ್ಬರೇ ಓಡಾಡಬೇಡಿ ಅನಿವಾರ್ಯವಿದ್ದಲ್ಲಿ ಕಾರಿನಲ್ಲಿ ಓಡಾಡಿ ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ. K.R.ಪುರಂ ಅರಣ್ಯಾಧಿಕಾರಿಗಳು ಚಿರತೆಗಾಗಿ ಸಿಂಗಸಂದ್ರ ಲೇಔಟ್​​ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ದಾಮೊದರ್ ರೆಡ್ಡಿ ಎಂಬುವವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು, ಬೀದಿ ನಾಯಿಗಳು ಚಿರತೆಯನ್ನು ನೋಡಿ ಅದನ್ನು ಓಡಿಸಿಕೊಂಡು ಹೋಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಚಿರತೆ ನೋಡಿದ ನಿವಾಸಿಗಳು ಆತಂಕದಲ್ಲೇ ಮನೆಯಲ್ಲಿ ಅಡಗಿ ಕೂರುವಂತಾಗಿದೆ. ಇದೀಗ ನಿದ್ದೆಗೆಡಿಸಿದ ಚಿರತೆ ಸೆರೆಗಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ಪತ್ತೆ; ಅರಣ್ಯ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು

ಗಾಬರಿಪಡುವ ಅಗತ್ಯವಿಲ್ಲ, ನಾವು ಶನಿವಾರ ರಾತ್ರಿ ತಂಡವನ್ನು ಕಳುಹಿಸಿದ್ದೇವೆ ಮತ್ತು ಇಂದು ಕೆಲವು ಸಿಬ್ಬಂದಿಯನ್ನು ಕಳುಹಿಸಿ ಚಿರತೆ ಹುಡುಕಿಸಲಾಗುತ್ತಿದೆ. ಚಿರತೆಯ ಸುಳಿವು ಸಿಕ್ಕಿಲ್ಲ. ನಾವು ಚಿರತೆ ತಲಾಶ್ ಮುಂದುವರೆಸುತ್ತಿದ್ದೇವೆ ಮತ್ತು ಅಲ್ಲಿನ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದೇವೆ ಎಂದು ಬೆಂಗಳೂರು ನಗರ ಅರಣ್ಯ ಉಪ ಸಂರಕ್ಷಣಾಧಿಕಾರಿ ಎನ್ ರವೀಂದ್ರ ಕುಮಾರ್ ತಿಳಿಸಿದರು.

ಪರಪ್ಪನ ಅಗ್ರಹಾರ ಪೊಲೀಸರು ಕೂಡ ಚಿರತೆ ಕಾಣಿಸಿಕೊಂಡಿರುವುದನ್ನು ಖಚಿತಪಡಿಸಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿರತೆ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಕಳೆದ ವರ್ಷವೂ ಹೊರವಲಯದಲ್ಲಿ ಚಿರತೆ ಓಡಾಡಿದ ಅನೇಕ ದೃಶ್ಯಗಳು ಕಂಡುಬಂದಿದ್ದವು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:55 pm, Mon, 30 October 23

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು