AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರರಿಂದ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ: ಪ್ರತಿಭಟನೆ ಎಚ್ಚರಿಕೆ

ಬಾಕಿ ಇರುವ ಬಿಲ್ ಬಿಡುಗಡೆಗೊಳಿಸದೇ ಇದ್ದರೆ ಗುತ್ತಿಗೆದಾರರು ಆತ್ಮಹತ್ಯೆ ಹಾದಿ ಹಿಡಿಯುವ ಪರಿಸ್ಥಿತಿ ಉಂಟಾಗುತ್ತದೆ. ಪ್ರತಿಯೊಬ್ಬ ಗುತ್ತಿಗೆದಾರರು ತೀವ್ರ ಸಂಕಷ್ಟ ಹಾಗೂ ಹಣಕಾಸಿನ ತೊಂದರೆಯಿಂದ ಕಾಮಗಾರಿ ಸ್ಥಳಕ್ಕೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಗುತ್ತಿಗೆದಾರರಿಂದ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ: ಪ್ರತಿಭಟನೆ ಎಚ್ಚರಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 24, 2022 | 9:28 AM

Share

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ದೂರಿನ ಬಳಿಕ ಮತ್ತೊಂದು ಸಂಘದಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಗುತ್ತಿಗೆದಾರರ ಸಂಘದಿಂದ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆಯಲಾಗಿದೆ. ಬಾಕಿ ಇರುವ ಬಿಲ್ ಬಿಡುಗಡೆಗೊಳಿಸದೇ ಇದ್ದರೆ ಗುತ್ತಿಗೆದಾರರು ಆತ್ಮಹತ್ಯೆ ಹಾದಿ ಹಿಡಿಯುವ ಪರಿಸ್ಥಿತಿ ಉಂಟಾಗುತ್ತದೆ. ಪ್ರತಿಯೊಬ್ಬ ಗುತ್ತಿಗೆದಾರರು ತೀವ್ರ ಸಂಕಷ್ಟ ಹಾಗೂ ಹಣಕಾಸಿನ ತೊಂದರೆಯಿಂದ ಕಾಮಗಾರಿ ಸ್ಥಳಕ್ಕೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಟ್ಟಡ ಕಾಮಗಾರಿಗಳ ಉಪಕರಣ ನೀಡಿದ ವ್ಯಾಪಾರಿಗಳು, ಕಾರ್ಮಿಕರು, ಸಾಲ ನೀಡಿದ ಸಂಸ್ಥೆಗಳು ತೀವ್ರ ಒತ್ತಡ ಹೇರುತ್ತಿದ್ದಾರೆ. ಕೆಲ ಗುತ್ತಿಗೆದಾರರು ಒತ್ತಡದಿಂದ ಮನ ನೊಂದಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಭೇಟಿ ಮಾಡಿ ಔಪಚಾರಿಕವಾಗಿ ಮಾತುಕತೆ ನಡೆಸಿದ ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಕೆಲವರು ಸಾಲಭಾದೆ ತಾಳಲಾರದೇ ಆತ್ಮಹತ್ಯೆಯಂತಹ ತೀರ್ಮಾನಕ್ಕೆ ಬಂದಿದ್ದಾರೆ. ಈ ವಿಚಾರ ನಮ್ಮ ಸಂಘದ ಗಮನಕ್ಕೆ ಬಂದಿದೆ. ನಮ್ಮ ಸಂಘದ ವತಿಯಿಂದ ಎಲ್ಲಾ ಗುತ್ತಿಗೆದಾರರನ್ನು ಕರೆಸಿ ಸಮಾಧಾನಪಡಿಸಿ ಕಳಿಸಿದ್ದೇವೆ. ಇನ್ನೊಮ್ಮೆ ಕೊನೆಯದಾಗಿ ಮಾನ್ಯ ಮುಖ್ಯಮಂತ್ರಿಯವರನ್ನು, ಮಂತ್ರಿಗಳನ್ನು ಭೇಟಿ ಮಾಡುವುದಾಗಿ ಹೇಳಿ ಕಳಿಸಿದ್ದೇವೆ. ಗುತ್ತಿಗೆದಾರರು ಎಸ್.ಸಿ, ಎಸ್.ಟಿ. ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಮಕ್ಕಳ ವಸತಿ ಶಾಲೆಗಳ ಕಟ್ಟಡ ಕಾಮಗಾರಿಗಳನ್ನ ಮಾಡಿದ್ದಾರೆ. ಕಳೆದ ಏಳೆಂಟು ತಿಂಗಳಿದ ಬಾಕಿ ಪಾವತಿ ಬೆಳೆಯುತ್ತಲೇ ಇದೆ. ಸುಮಾರು 1200 ಕೋಟಿಯಷ್ಟು ಮೊತ್ತ ಗುತ್ತಿಗೆದಾರರಿಗೆ ಬಿಡುಗಡೆಯಾಗಬೇಕಿದೆ.

ಸಿಎಂಗೆ ಗುತ್ತಿಗೆದಾರರಿಂದ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಬರೆದ ಪತ್ರ

ಇದನ್ನೂ ಓದಿ: ACB ರದ್ದು ವಿರುದ್ಧ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ರಾಜ್ಯಾದ್ಯಂತ ಈಗಾಗಲೇ 100ಕ್ಕೂ ಹೆಚ್ಚು ಶಾಲಾ ಕಟ್ಟಡಗಳು ನಿರ್ಮಾಣ ಮಾಡಿದ್ದೇವೆ. ನೂರಾರು ಗುತ್ತಿಗೆದಾರರು ತಮ್ಮನ್ನು ಭೇಟಿಯಾಗಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ ಮನವಿ ಮಾಡಿದ್ರು ಪ್ರಯೋಜನವಾಗಿಲ್ಲ. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾರ್ಯ ನಿರ್ವಾಹಕ ನಿರ್ದೇಶಕರಿಗೂ ಅಹವಾಲು ಸಲ್ಲಿಸಿದ್ದೇವೆ. ಆದರೆ ಈವರೆಗೂ ನಮಗೆ ಸಕಾರಾತ್ಮಕ ಸ್ಪಂದನೆ ದೊರತಿಲ್ಲ ಎಂದು ಗುತ್ತಿಗೆದಾರರರು ಅಸಮಾಧಾನ ಹೊರಹಾಕಿದ್ದಾರೆ. ಇದು ಹೀಗೆ ಮುಂದುವರೆದರೆ ಪ್ರತಿಭಟನೆ ಮಾಡುವುದಾಗಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:20 am, Wed, 24 August 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು