AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ.60 ರಷ್ಟು ಕನ್ನಡ ಬೋರ್ಡ್ ಹಾಕದ ಅಂಗಡಿಗಳ ಲೈಸೆನ್ಸ್ ರದ್ದು: ಬಿಬಿಎಂಪಿ ಎಚ್ಚರಿಕೆ

ಮಳಿಗೆಯಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ನೀಡಿದ್ದ ಗಡುವು ನಿನ್ನೆಗೆ ಅಂತ್ಯಗೊಂಡಿದ್ದು, ಅದಾಗ್ಯೂ ಕೆಲವು ಅಂಗಡಿಗಳಲ್ಲಿ ಶೇ.60 ರಷ್ಟು ಕನ್ನಡ ಪದಗಳುಳ್ಳ ಬೋರ್ಡ್​ಗಳನ್ನು ಅಳವಡಿಕೆ ಮಾಡಲಾಗಿದೆ. ಹೀಗಾಗಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಎಚ್ಚೆತ್ತ ಬಿಬಿಎಂಪಿ, ಕನ್ನಡ ನಾಮಫಲಕ ಹಾಕದವರಿಗೆ ಬಿಸಿಮುಟ್ಟಿಸಲು ಸಜ್ಜಾಗಿದ್ದು, ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿದೆ.

ಶೇ.60 ರಷ್ಟು ಕನ್ನಡ ಬೋರ್ಡ್ ಹಾಕದ ಅಂಗಡಿಗಳ ಲೈಸೆನ್ಸ್ ರದ್ದು: ಬಿಬಿಎಂಪಿ ಎಚ್ಚರಿಕೆ
ಬಿಬಿಎಂಪಿ
TV9 Web
| Edited By: Rakesh Nayak Manchi|

Updated on:Feb 29, 2024 | 7:07 AM

Share

ಬೆಂಗಳೂರು, ಫೆ.29: ಮಳಿಗೆಯಲ್ಲಿ ಕನ್ನಡ ನಾಮಫಲಕ (Kannada Board) ಅಳವಡಿಕೆಗೆ ನೀಡಿದ್ದ ಗಡುವು ನಿನ್ನೆಗೆ ಅಂತ್ಯಗೊಂಡಿದ್ದು, ಅದಾಗ್ಯೂ ಕೆಲವು ಅಂಗಡಿಗಳಲ್ಲಿ ಶೇ.60 ರಷ್ಟು ಕನ್ನಡ ಪದಗಳುಳ್ಳ ಬೋರ್ಡ್​ಗಳನ್ನು ಅಳವಡಿಕೆ ಮಾಡಲಾಗಿದೆ. ಹೀಗಾಗಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಎಚ್ಚೆತ್ತ ಬಿಬಿಎಂಪಿ (BBMP), ಕನ್ನಡ ನಾಮಫಲಕ ಹಾಕದವರಿಗೆ ಬಿಸಿಮುಟ್ಟಿಸಲು ಸಜ್ಜಾಗಿದ್ದು, ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿದೆ.

ಡೆಡ್​ಲೈನ್ ಮುಕ್ತಾಯ ಹಿನ್ನೆಲೆ ಇಂದು ನಾಮಫಲಕ ಪರಿಶೀಲನೆ ನಡೆಸಲು ಮುಂದಾದ ಪಾಲಿಕೆ ಅಧಿಕಾರಿಗಳು, ಶೇಕಡಾ 60ರಷ್ಟು ಕನ್ನಡ ನಾಮಫಲಕ ಅಳವಡಿಸದಿದ್ದರೆ ಪರವಾನಗಿ ರದ್ದು ಮಾಡಿ ಬೀಗ ಜಡಿಯುವುದಾಗಿ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಕನ್ನಡ ನಾಮಫಲಕ ಕಡೆಗಣಿಸಿದವರಿಗೆ ಪಾಲಿಕೆ ಅಧಿಕಾರಿಗಳು ಬಿಸಿಮುಟ್ಟಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: BBMP Budget: ಇಂದು ಬಿಬಿಎಂಪಿ ಬಜೆಟ್, ಬ್ರ್ಯಾಂಡ್ ಬೆಂಗಳೂರಿಗೆ ಏನೆಲ್ಲಾ ನಿರೀಕ್ಷೆ? ಇಲ್ಲಿದೆ ವಿವರ

ಕನ್ನಡ ನಾಮಫಲಕ ಹಾಕದಿದ್ದರೆ ಅಂಗಡಿಗಳನ್ನು ಬಂದ್ ಮಾಡುತ್ತೇವೆ. ಈಗಾಗಲೇ ಶೇಕಡಾ 90ರಷ್ಟು ಕನ್ನಡ ನಾಮಫಲಕ ಹಾಕಲಾಗಿದೆ. ಇನ್ನು ಉಳಿದಿರುವುದು 3 ಸಾವಿರ ನಾಮಫಲಕ ಮಾತ್ರ​. ಮತ್ತಷ್ಟು ಸಮಯ ನೀಡುವಂತೆ ಅಂತಾರಾಷ್ಟ್ರೀಯ ಕಂಪನಿಗಳು, SBI, ಕೆನರಾ ಬ್ಯಾಂಕ್ ಮನವಿ ನೀಡಿವೆ. ಈ ಬಗ್ಗೆ ಇಂದು ಸಂಜೆ ತೀರ್ಮಾನ ಮಾಡುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಕನ್ನಡ ರಥ ಸಂಚಾರ

ರಾಜ್ಯದಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಗಡುವು ಮುಗಿದ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಕನ್ನಡ ಉಳಿಸಿ, ಕನ್ನಡ ಬೆಳೆಸಿ, ಕನ್ನಡ ರಥ ಸಂಚಾರ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಿಂದ ಕನ್ನಡ ರಥ ಸಂಚಾರ ಆರಂಭಗೊಳ್ಳಲಿದೆ.

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಎಂಎನ್​ಸಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ನಮ್ಮ ಜನರ ಭೂಮಿ ಪಡೆದು ಕೈಗಾರಿಕೆ ಆರಂಭಿಸಿ ಉದ್ಯೋಗ ಕೊಟ್ಟಿಲ್ಲ. ರಾಜ್ಯದಲ್ಲಿ ಯಾರಿಗೆ ಉದ್ಯೋಗ ನೀಡಲಾಗಿದೆ ಎಂದು ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುವಂತೆ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:05 am, Thu, 29 February 24

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ