AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂತುರು ಮಳೆಗೆ ವಾರಾಂತ್ಯದಲ್ಲಿ ಬೆಂಗಳೂರು ಕೂಲ್ ಕೂಲ್; ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಜಿಟಿ ಜಿಟಿ ಮಳೆ ಕಾಟ!

ಬೆಂಗಳೂರಿನಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ ನಾಳಿದ್ದು ಸೋಮವಾರದ ವರೆಗೂ ಬರುವ ಸಾಧ್ಯತೆಯಿದೆ. ದಕ್ಷಿಣ ಭಾರತದ ಕಡೆ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತುಂತುರು ಮಳೆಗೆ ವಾರಾಂತ್ಯದಲ್ಲಿ ಬೆಂಗಳೂರು ಕೂಲ್ ಕೂಲ್; ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಜಿಟಿ ಜಿಟಿ ಮಳೆ ಕಾಟ!
ತುಂತುರು ಮಳೆಗೆ ವಾರಾಂತ್ಯದಲ್ಲಿ ಬೆಂಗಳೂರು ಕೂಲ್ ಕೂಲ್; ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಜಿಟಿ ಜಿಟಿ ಮಳೆ ಕಾಟ!
TV9 Web
| Edited By: |

Updated on:Oct 09, 2021 | 11:16 AM

Share

ಬೆಂಗಳೂರು: ರಾಜಧಾನಿ ಮಂದಿ ಕೊರೊನಾಘಾತದಿಂದ ತುಸು ಚೇತರಿಸಿಕೊಂಡಿದ್ದು, ಈಗೀಗ ನಗರದಲ್ಲಿ ಜೋರಾಗಿಯೇ ಓಡಾಡತೊಡಗಿದ್ದಾರೆ. ವಾರಂತ್ಯದಲ್ಲಿ ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ಆದರೆ ಈ ವಾರಾಂತ್ಯ ವಾತಾವರಣ ತುಸು ಭಿನ್ನವಾಗಿದೆ. ಕೊರೊನಾ ಸೋಂಕು ಬಹುತೇಕ ಜೀರೋಗೆ ಕುಸಿದಿದೆ. ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಬೆಂಗಳೂರು ನಗರದ ಹಲವೆಡೆ ಜಿಟಿ ಜಿಟಿ ಮಳೆ ಬೆಳಗ್ಗೆಯಿಂದ ಬೀಳುತ್ತಿದೆ.

ಜಯನಗರ, ಬಸವನಗುಡಿ, ಮಲ್ಲೇಶ್ವರಂ, ರಾಜಾಜಿನಗರ, RR ನಗರ, ಹೆಬ್ಬಾಳ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಬನಶಂಕರಿ, ಕೋರಮಂಗಲ, ಪದ್ಮನಾಭನಗರ, ಹನುಮಂತನಗರ, ಗಿರಿನಗರ, ಚಾಮರಾಜಪೇಟೆ ಸೇರಿದಂತೆ ಹಲವೆಡೆ ಮಳೆ ಸುರಿಯತೊಡಗಿದೆ. ಮೈಸೂರು ರಸ್ತೆ, ನಾಯಂಡಹಳ್ಳಿ, ಸದಾಶಿವನಗರ, ಮೇಖ್ರೀ ಸರ್ಕಲ್, ಮಲ್ಲೇಶ್ವರಂ, ಹೆಬ್ಬಾಳ ಭಾಗದಲ್ಲೂ ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ ನಾಳಿದ್ದು ಸೋಮವಾರದ ವರೆಗೂ ಬರುವ ಸಾಧ್ಯತೆಯಿದೆ. ದಕ್ಷಿಣ ಭಾರತದ ಕಡೆ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣ ನಿರ್ಮಾಣಗೊಂಡಿದ್ದು, ಇದೀಗ ತುಂತುರು ಮಳೆಗೆ ವಾರಾಂತ್ಯದಲ್ಲಿ ಸಿಟಿ ಕೂಲ್ ಕೂಲ್ ಆಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 4 ದಿನ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆಯಿದೆ. ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಸಾರಲಾಗಿದೆ. ಕರಾವಳಿಯ 3 ಜಿಲ್ಲೆಗಳು, ದಕ್ಷಿಣ ಒಳನಾಡು, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಯೆಲ್ಲೋ ಅಲರ್ಟ್‌ ಇದೆ.

Rain Problem : ತುಂಬಿ ಹರಿಯುತ್ತಿರುವ ಹಳ್ಳ ದಾಟಲು ಜೀವ ಅಂಗೈಯಲ್ಲಿಡಿದು ಜನರ ಪರದಾಟ | Tv9kannada

Published On - 11:09 am, Sat, 9 October 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?