AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanskrit schools: ಶಿಕ್ಷಣ ಇಲಾಖೆ ವಿರುದ್ಧ ಹೊಸ ಸಮರ ಸಾರಿದ ಹಿಂದೂ ಪರ ಸಂಘಟನೆಗಳು!

ಕೆಲವು ದಿನಗಳಿಂದ ಶಾಲೆಗಳಲ್ಲಿ ರಾಮಯಣ, ಭಗವದ್ಗೀತೆ ಕೊನೆಯಲ್ಲಿ ಧ್ಯಾನಕ್ಕೂ ಅವಕಾಶ ಕಲ್ಪಿಸುವುದಕ್ಕೆ ಮುಸ್ಲಿಂ ಸಮುದಾಯದವರು ವಿರೋಧ ಮಾಡ್ತಾ ಇದ್ದಾರೆ. ಆದ್ರೆ ಉರ್ದು ಶಾಲೆಗಳಲ್ಲಿ ಮದರಸಾಗಳಲ್ಲಿ ತಮ್ಮ ಮಕ್ಕಳಿಗೆ ಇಸ್ಲಾಂ ಧರ್ಮದ ಪರಿಚಯ ಹೇಳಿಕೊಡ್ತಾರೆ.

Sanskrit schools: ಶಿಕ್ಷಣ ಇಲಾಖೆ ವಿರುದ್ಧ ಹೊಸ ಸಮರ ಸಾರಿದ ಹಿಂದೂ ಪರ ಸಂಘಟನೆಗಳು!
ಶಿಕ್ಷಣ ಇಲಾಖೆ ವಿರುದ್ಧ ಹೊಸ ಸಮರ ಸಾರಿದ ಹಿಂದೂ ಪರ ಸಂಘಟನೆಗಳು!
TV9 Web
| Updated By: ಸಾಧು ಶ್ರೀನಾಥ್​|

Updated on:Nov 09, 2022 | 1:00 PM

Share

ಬೆಂಗಳೂರು: ಮುಸ್ಲಿಂ ಸಂಘಟನೆಗಳಿಗೆ ಠಕ್ಕರ್​ ಕೊಡಲು ಮುಂದಾದ ಹಿಂದೂಪರ ಸಂಘಟನೆಗಳು (hindu organisations) ಶಿಕ್ಷಣ ಇಲಾಖೆ ವಿರುದ್ಧ ಹೊಸ ಸಮರ ಸಾರಿವೆ. ಉರ್ದು ಶಾಲೆಯಂತೆ ರಾಜ್ಯದಲ್ಲಿ ಹಿಂದೂ ಮಕ್ಕಳಿಗೆ ಸಂಸ್ಕೃತ ಶಾಲೆಗಳನ್ನು (Sanskrit schools) ಆರಂಭಿಸುವುದಕ್ಕೆ ಬೇಡಿಕೆಯಿಟ್ಟಿವೆ. ಹಾಗಾದರೆ ಮುಸ್ಲಿಂ ಸಮುದಾಯದ ಮಕ್ಕಳಿಗೆ ಉರ್ದು ಹಾಗೂ ಅರೆಬಿಕ್ ಶಾಲೆಗಳು (urdu schools) ಇರುವಂತೆ ರಾಜ್ಯದಲ್ಲಿ ಸರ್ಕಾರದಿಂದ ಸಂಸ್ಕೃತ ಶಾಲೆಗಳು ಓಪನ್ ಆಗುತ್ತಾ? ಎಂಬುದನ್ನು ಕಾದು ನೋಡಬೇಕಿದೆ.

ಈ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದ ಮಕ್ಕಳಿಗೂ ಸಂಸ್ಕೃತ ಶಾಲೆಗಳ ಆರಂಭಕ್ಕೆ ಒತ್ತಾಯ ಕೇಳಿಬಂದಿದ್ದು, ಪ್ರತಿ ಜಿಲ್ಲೆ ಹಾಗೂ ತಾಲ್ಲೂಕಗಳಲ್ಲಿಯೂ ಸಂಸ್ಕೃತ ಶಾಲೆಗಳನ್ನ ಆರಂಭಿಸುವಂತೆ ಮನವಿ ಮಾಡಲಾಗಿದೆ. ಇದೇ ವೇಳೆ, ಹಿಂದೂ ಮಕ್ಕಳಿಗೆ ಶಿಕ್ಷಣ ಇಲಾಖೆ ಶಾಲೆಗಳನ್ನ ಆರಂಭಿಸುವಂತೆ ಅಭಿಯಾನವನ್ನೂ ಕೈಗೊಳ್ಳಲಾಗಿದೆ. ಸಂಸ್ಕೃತ ಭೋದನೆ ಜೊತೆಗೆ ಹಿಂದೂ ಧರ್ಮದ ಪರಿಚಯ ಸಂಸ್ಕೃತಿ ಪರಿಚಯಿಸಬೇಕು. ಹಿಂದೂ ಹಬ್ಬಗಳು, ರಾಮಾಯಣ, ಭಗವದ್ಗೀತೆ, ಧ್ಯಾನ, ಪೂಜಾ ಪುನಸ್ಕಾರ, ಕುಂಕುಮ, ಬಳೆ, ತಿಲಕದ ಜ್ಞಾನ ನೀಡುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: Tv9 Exclusive: ಹಿಂದೂ ಪದಕ್ಕೆ ಹೀನಾರ್ಥವಿದೆ ಎಂದ ಸತೀಶ್ ಜಾರಕಿಹೊಳಿ ಹೇಳಿಕೆ ಭಾರತದ ಪರಂಪರೆಗೆ ಮಾಡಿದ ಅವಮಾನ; ಜಿ.ಬಿ.ಹರೀಶ್, ಶೆಲ್ವಪಿಳ್ಳೆ ಅಯ್ಯಂಗಾರ್

ಹಿಂದೂ ಧರ್ಮದ ಆಚರಣೆಗಳ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಕೆಲವು ದಿನಗಳಿಂದ ಶಾಲೆಗಳಲ್ಲಿ ರಾಮಯಣ, ಭಗವದ್ಗೀತೆ ಕೊನೆಯಲ್ಲಿ ಧ್ಯಾನಕ್ಕೂ ಅವಕಾಶ ಕಲ್ಪಿಸುವುದಕ್ಕೆ ಮುಸ್ಲಿಂ ಸಮುದಾಯದವರು ವಿರೋಧ ಮಾಡ್ತಾ ಇದ್ದಾರೆ. ಆದ್ರೆ ಉರ್ದು ಶಾಲೆಗಳಲ್ಲಿ ಮದರಸಾಗಳಲ್ಲಿ ತಮ್ಮ ಮಕ್ಕಳಿಗೆ ಇಸ್ಲಾಂ ಧರ್ಮದ ಪರಿಚಯ ಹೇಳಿಕೊಡ್ತಾರೆ. ಹಿಂದೂ ಧರ್ಮದ ಎಲ್ಲ ಆಚರಣೆಗೂ ವಿರೋಧ ಮಾಡ್ತಾರೆ. ಹೀಗಾಗಿ ಉರ್ದು ಶಾಲೆಗಳ ಮಾದರಿಯಂತೆ ಹಿಂದೂ ಶಾಲೆಗಳನ್ನ ಶಿಕ್ಷಣ ಇಲಾಖೆ ರಾಜ್ಯದಲ್ಲಿ ಆರಂಭಿಸಬೇಕು ಎಂದು ಹಿಂದೂ ಪರ ಸಂಘಟನೆಗಳಿಂದ ವಿಭಿನ್ನ ಅಭಿಯಾನ ಶುರುವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Wed, 9 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?