AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ವಿರುದ್ಧ ಸಾಲು ಸಾಲು ಆರೋಪ: ತಮ್ಮ ಸಿಬ್ಬಂದಿಗೆ ಕೆಲ ಕಿವಿ ಮಾತು ಹೇಳಿದ ಪೊಲೀಸ್ ಆಯುಕ್ತ ದಯಾನಂದ್

ಬೆಂಗಳೂರು ನಗರದಲ್ಲಿ ರಾಬರಿ ಹಾಗೂ ಮನೆಕಳ್ಳತನ ಪ್ರಕರಣಗಳು ಕಂಟ್ರೂಲ್​ಗೆ ಬಂದಿದ್ದು, ಅಂಕಿ ಅಂಶಗಳನ್ನ ನೋಡಿದಾಗ ಕ್ರೈಂ ರೇಟ್ ಕಡಿಮೆಯಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಳಿದರು.

ಪೊಲೀಸರ ವಿರುದ್ಧ ಸಾಲು ಸಾಲು ಆರೋಪ: ತಮ್ಮ ಸಿಬ್ಬಂದಿಗೆ ಕೆಲ ಕಿವಿ ಮಾತು ಹೇಳಿದ ಪೊಲೀಸ್ ಆಯುಕ್ತ ದಯಾನಂದ್
ನಗರ ಪೊಲೀಸ್ ಆಯುಕ್ತ ದಯಾನಂದ್
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 28, 2023 | 11:07 AM

Share

ಬೆಂಗಳೂರು, ಜು.28: ನಗರದಲ್ಲಿ ರಾಬರಿ ಹಾಗೂ ಮನೆಕಳ್ಳತನ ಪ್ರಕರಣಗಳು ಕಂಟ್ರೂಲ್​ಗೆ ಬಂದಿದ್ದು, ಅಂಕಿ ಅಂಶಗಳನ್ನ ನೋಡಿದಾಗ ಕ್ರೈಂ ರೇಟ್ ಕಡಿಮೆಯಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ(Bangalore City Police Commissioner) ದಯಾನಂದ್(Dayanand) ಅವರು ಹೇಳಿದರು. ಚಾಮರಾಜಪೇಟೆಯ ಸಿಎಆರ್ ಮೈದಾನದಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ನಗರ ಸಶಸ್ತ್ರ ಮೀಸಲು ಪಡೆಯಿಂದ ಸೇವಾ ಕವಾಯತು ಹಮ್ಮಿಕೊಳ್ಳಲಾಗಿದೆ. ಈ ವೇಳೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ‘ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತಿದ್ದಾರೆ. ನಾನು ಅಂದುಕೊಂಡಿದ್ದಕ್ಕಿಂತ ಹೆಚ್ಚಿನದಾಗಿ ಕೆಲಸ ಮಾಡುತಿದ್ದೀರಿ. ಜೊತೆಗೆ ಹೊಸದಾಗಿ ಜಾರಿಗೆ ತಂದ ನಿಯಮಗಳ ಪಾಲನೆ ಸಹ ಉತ್ತಮವಾಗಿ ನಡೆಯುತ್ತಿದೆ ಎಂದರು.

ಲೋಕಸ್ಪಂದನದಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ಪ್ರತಿಕ್ರಿಯೆ

ಲೋಕ ಸ್ಪಂದನೆಗೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು, ಸಿಬ್ಬಂದಿಗಳ ಕೆಲಸದ ಬಗ್ಗೆ ಲೋಕಸ್ಪದನ ಮೂಲಕ ಅಭಿಪ್ರಾಯ ಪಡೆಯಲಾಗುತ್ತಿದೆ. ಡಿಸಿಪಿ, ಎಸಿಪಿಗಳು ಖುದ್ದಾಗಿ ಜನರ ಸಮಸ್ಯೆ ಆಲಿಸುತ್ತಿದ್ದು, ಉತ್ತಮ ರೀತಿ ಕೆಲಸ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ಕೂಡ ಬಂದಿದೆ. ಇನ್ನು ಕರ್ತವ್ಯದ ಬಗ್ಗೆ ಬಂದ ಆರೋಪಗಳ ಸಂಬಂಧ ಕೂಡ ಕೌನ್ಸಿಲಿಂಗ್ ಸಹ ನಡೆಸಲಾಗುತ್ತಿದೆ. ಪಾಸ್​ಪೊರ್ಟ್ ವಿಚಾರದಲ್ಲಿ 500ರೂ ಲಂಚ ಪಡೆದಿದ್ದ ಪೊಲೀಸ್ ಸಿಬ್ಬಂದಿ ಬಗ್ಗೆ ಲೋಕ ಸ್ಪಂದನೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಈ ಹಿನ್ನಲೆ ಸಿಬ್ಬಂದಿಯನ್ನ ಡಿಸಿಪಿ ಆದೇಶದಂತೆ ಅಮಾನತ್ತು ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಂಧನ

ಸಿಬ್ಬಂದಿಗಳಿಗೆ ಕಿವಿ ಮಾತು ಹೇಳಿದ ಆಯ್ತುಕ ದಯಾನಂದ್​

ಪೊಲೀಸರ ವಿರುದ್ಧ ಕೇಳಿ ಬರುತ್ತಿರುವ ಸಾಲು ಸಾಲು ಆರೋಪಗಳ ಹಿನ್ನಲೆ ಸಿಬ್ಬಂದಿಗಳಿಗೆ ಆಯ್ತುಕ ದಯಾನಂದ್​ ಅವರು ಕಿವಿ ಮಾತು ಹೇಳಿದ್ದಾರೆ. ‘ಸಾರ್ವಜನಿಕರ ಜೊತೆ ಸೌಜನ್ಯವಾಗಿ ನಡೆದುಕೊಳ್ಳಬೇಕು. ಪೊಲೀಸರು ಸಮಾಜದ ರಕ್ಷಕರು, ನೊಂದವರ ಕಣ್ಣೀರು ಒರೆಸುವ ಸಮಾಜ ಮುಖಿಯಾಗಿ ಕರ್ತವ್ಯ ನಿರ್ವಹಿಸಬೇಕು. ನೊಂದವರಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ಕ್ರಿಟಿಸಿಜಂ ಬಗ್ಗೆ ಕಿವಿ ಕೊಡಬೇಡಿ. ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡೊಣ. ಕಾನೂನು ಗೌರವಿಸುವವರಿಗೆ ಸೌಜನ್ಯರಾಗಿ ಹಾಗೂ ಸಮಾಜಘಾತುಕರಿಗೆ ಪ್ರಳಾಯಾಂತಕರಾಗಿ ಕೆಲಸ ಮಾಡಬೇಕು. ಅದು ನಮ್ಮ ಕರ್ತವ್ಯ ಅದನ್ನು ಮುಂದುವರೆಸಿಕೊಂಡು ಹೋಗೊಣ ಎಂದು ತಿಳಿ ಹೇಳಿದರು.

ಇನ್ನು ಕಾಲೇಜು ಆವರಣದೊಳಗಿನ ಡ್ರಗ್ಸ್ ಪೆಡ್ಲಿಂಗ್ ವಿಚಾರ ‘ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸ ನಡೆಯುತ್ತಿದ್ದು, ಕಾಲೇಜು ಬಳಿ ಪೊಲೀಸರಿಂದ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದೇವೆ. ಡ್ರಗ್ ಪೆಡ್ಲಿಂಗ್​ನಲ್ಲಿ ತೊಡಗಿರುವವರ ವಿರುದ್ದ ಕ್ರಮವಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:06 am, Fri, 28 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ