AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತ ಸಮರ; ಯತ್ನಾಳ್ ವಿರುದ್ಧ ಅಖಾಡಕ್ಕಿಳಿದ ವಿಜಯೇಂದ್ರ ಬಣ 

ಬಿಜೆಪಿ ಮನೆಯೊಳಗಿನ ಬಣ ಬಡಿದಾಟದ ದಂಗೆ ಮತ್ತೊಂದು ಸಮರಕ್ಕೆ ಸಾಕ್ಷಿಯಾಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್​, ಬಿ.ವೈ. ವಿಜಯೇಂದ್ರ ಬಣದ ಮಧ್ಯೆ ಲಿಂಗಾಯತ ವಾರ್ ನಡೆಯುತ್ತಿದೆ. ಅತೃಪ್ತ​ ಲಿಂಗಾಯತ ದಾಳಕ್ಕೆ ಕೌಂಟರ್ ಆಗಿ ಬಿ.ವೈ. ವಿಜಯೇಂದ್ರ ಪರವಾಗಿ ಯಡಿಯೂರಪ್ಪ ಆಪ್ತರೇ ಇದೀಗ ಅಖಾಡಕ್ಕೆ ಧುಮುಕಿದ್ದಾರೆ. ಯತ್ನಾಳ್ ವಿರುದ್ಧಬಿ.ಎಸ್​. ಯಡಿಯೂರಪ್ಪ ಆಪ್ತರಿಂದ ಶಕ್ತಿ ಪ್ರದರ್ಶನ ಯುದ್ಧ ಶುರುವಾಗಿದೆ.

ಲಿಂಗಾಯತ ಸಮರ; ಯತ್ನಾಳ್ ವಿರುದ್ಧ ಅಖಾಡಕ್ಕಿಳಿದ ವಿಜಯೇಂದ್ರ ಬಣ 
By Vijayendra
ಕಿರಣ್​ ಹನಿಯಡ್ಕ
| Updated By: ಸುಷ್ಮಾ ಚಕ್ರೆ|

Updated on: Feb 27, 2025 | 10:40 PM

Share

ಬೆಂಗಳೂರು: ಬಿಜೆಪಿ ಒಡೆದು ಬಣಗಳಾಗಿರುವುದು ಗೊತ್ತಿರದ ವಿಷಯವೇನಲ್ಲ. ಬಿಜೆಪಿಯಲ್ಲಿ ಒಳ ಜಗಳ ಸದ್ಯಕ್ಕಂತೂ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬಿಜೆಪಿಯ ಅತೃಪ್ತ ಶಾಸಕ ಬಸನಗೌಡ ಯತ್ನಾಳ್ ಬಿ.ವೈ. ವಿಜಯೇಂದ್ರ ವಿರುದ್ಧ ಲಿಂಗಾಯತ ದಾಳವನ್ನು ಉರುಳಿಸಿದ್ದು, ಈ ಮೂಲಕ ಇಬ್ಬರೂ ನಾಯಕರ ನಡುವೆ ಲಿಂಗಾಯತ ಸಮರ ಶುರುವಾಗಿದೆ. ಮೊನ್ನೆಯಷ್ಟೇ ಯತ್ನಾಳ್​ ಪ್ರಮುಖ ಲಿಂಗಾಯತ ನಾಯಕರ ಜೊತೆ ಸಭೆ ಮಾಡಿದ್ದನ್ನು ಸಹಿಸಿಕೊಳ್ಳಲಾಗದ ವಿಜಯೇಂದ್ರ ಬೆಂಬಲಿತ ಗುಂಪು ಇದೀಗ ಯತ್ನಾಳ್ ಅವರಿಗೆ ಟಕ್ಕರ್ ಕೊಡೋಕೆ ಮುಂದಾಗಿದೆ.

ತಮ್ಮ ಮಗನ ಪರವಾಗಿ ಯಡಿಯೂರಪ್ಪನವರೇ ಪರೋಕ್ಷವಾಗಿ ಅಖಾಡಕ್ಕೆ ಇಳಿದಿದ್ದು, ಸಾಲು ಸಾಲು ಸಭೆ ನಡೆಸೋ ಮೂಲಕ, ಯಡಿಯೂರಪ್ಪರ ಲಿಂಗಾಯತ ಶಕ್ತಿ ಏನೆಂದು​ ತೋರಿಸ್ತೀವಿ ಎಂದು ಯಡಿಯೂರಪ್ಪನವರ ಆಪ್ತ, ಮಾಜಿ ಸಚಿವ ಎಂಪಿ. ರೇಣುಕಾಚಾರ್ಯ ಕಹಳೆ ಮೊಳಗಿಸಿದ್ದಾರೆ.

ಇದನ್ನೂ ಓದಿ: ಮತ್ತೊಂದು ಮಗ್ಗುಲಿಗೆ ಹೊರಳಿದ ಬಿಜೆಪಿ ಬಣಬಡಿದಾಟ: ವಿಜಯೇಂದ್ರ ವಿರುದ್ಧ ಲಿಂಗಾಯತ ಅಸ್ತ್ರ ಹೂಡಿದ ಯತ್ನಾಳ್

ದುಷ್ಟ ಶಕ್ತಿಯಿಂದ ಸಮಾಜ ಒಡೆಯೋ ಕೆಲಸ ಆಗುತ್ತಿದೆ ಎಂದು ಯತ್ನಾಳ್ ಬಣದ ವಿರುದ್ಧ ರೇಣುಕಾಚಾರ್ಯ ರೋಷಾವೇಶಗೊಂಡಿದ್ದಾರೆ. ಯಡಿಯೂರಪ್ಪನವರ ಋಣ ತೀರಿಸ್ಬೇಕು ಅಂದರೆ ಎಲ್ಲರೂ ಕೈ ಜೋಡಿಸ್ಬೇಕು ಎಂದು ರೇಣುಕಾಚಾರ್ಯ ಕರೆ ನೀಡಿದ್ದಾರೆ.

ಇದೀಗ ಯತ್ನಾಳ್​ ಗ್ಯಾಂಗ್ ವಿರುದ್ಧ ತೊಡೆತಟ್ಟಿರೋ ವಿಜಯೇಂದ್ರ ಬಣ, ತಮ್ಮ ವೀರಶೈವ ಲಿಂಗಾಯತ ಶಕ್ತಿ ಏನು ಅಂತಾ ತೋರಿಸೋಕೆ ಹೊರಟಿದ್ದಾರೆ. ಅದಕ್ಕೆ ಸಾಲು ಸಾಲು ಸಭೆಯನ್ನೇ ನಿಗದಿ ಮಾಡಿದ್ದಾರೆ. ನಾಳೆ ಬಿ.ಎಸ್. ಯಡಿಯೂರಪ್ಪನವರ ಆಪ್ತರು, ನೆಲಮಂಗಲ, ದಾಬಸ್ ಪೇಟೆ ಭಾಗದ ವೀರಶೈವ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಮಾರ್ಚ್​ 1ರಂದು ದಾವಣಗೆರೆ ಬೈಪಾಸ್​ನಲ್ಲಿ, ಚಿತ್ರದುರ್ಗ, ಹಾವೇರಿ ಮುಖಂಡರ ಜೊತೆ ಮೀಟಿಂಗ್ ಮಾಡಲಿದ್ದಾರೆ. ಮಾರ್ಚ್​ 4ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ದೊಡ್ಡ ಸಭೆ ಸೇರೋಕೆ ನಿರ್ಧಾರ ಮಾಡಿದ್ದಾರೆ. ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ಸಭೆ ಆಯೋಜನೆ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!