AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತ ಸಮರ; ಯತ್ನಾಳ್ ವಿರುದ್ಧ ಅಖಾಡಕ್ಕಿಳಿದ ವಿಜಯೇಂದ್ರ ಬಣ 

ಬಿಜೆಪಿ ಮನೆಯೊಳಗಿನ ಬಣ ಬಡಿದಾಟದ ದಂಗೆ ಮತ್ತೊಂದು ಸಮರಕ್ಕೆ ಸಾಕ್ಷಿಯಾಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್​, ಬಿ.ವೈ. ವಿಜಯೇಂದ್ರ ಬಣದ ಮಧ್ಯೆ ಲಿಂಗಾಯತ ವಾರ್ ನಡೆಯುತ್ತಿದೆ. ಅತೃಪ್ತ​ ಲಿಂಗಾಯತ ದಾಳಕ್ಕೆ ಕೌಂಟರ್ ಆಗಿ ಬಿ.ವೈ. ವಿಜಯೇಂದ್ರ ಪರವಾಗಿ ಯಡಿಯೂರಪ್ಪ ಆಪ್ತರೇ ಇದೀಗ ಅಖಾಡಕ್ಕೆ ಧುಮುಕಿದ್ದಾರೆ. ಯತ್ನಾಳ್ ವಿರುದ್ಧಬಿ.ಎಸ್​. ಯಡಿಯೂರಪ್ಪ ಆಪ್ತರಿಂದ ಶಕ್ತಿ ಪ್ರದರ್ಶನ ಯುದ್ಧ ಶುರುವಾಗಿದೆ.

ಲಿಂಗಾಯತ ಸಮರ; ಯತ್ನಾಳ್ ವಿರುದ್ಧ ಅಖಾಡಕ್ಕಿಳಿದ ವಿಜಯೇಂದ್ರ ಬಣ 
By Vijayendra
ಕಿರಣ್​ ಹನಿಯಡ್ಕ
| Edited By: |

Updated on: Feb 27, 2025 | 10:40 PM

Share

ಬೆಂಗಳೂರು: ಬಿಜೆಪಿ ಒಡೆದು ಬಣಗಳಾಗಿರುವುದು ಗೊತ್ತಿರದ ವಿಷಯವೇನಲ್ಲ. ಬಿಜೆಪಿಯಲ್ಲಿ ಒಳ ಜಗಳ ಸದ್ಯಕ್ಕಂತೂ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬಿಜೆಪಿಯ ಅತೃಪ್ತ ಶಾಸಕ ಬಸನಗೌಡ ಯತ್ನಾಳ್ ಬಿ.ವೈ. ವಿಜಯೇಂದ್ರ ವಿರುದ್ಧ ಲಿಂಗಾಯತ ದಾಳವನ್ನು ಉರುಳಿಸಿದ್ದು, ಈ ಮೂಲಕ ಇಬ್ಬರೂ ನಾಯಕರ ನಡುವೆ ಲಿಂಗಾಯತ ಸಮರ ಶುರುವಾಗಿದೆ. ಮೊನ್ನೆಯಷ್ಟೇ ಯತ್ನಾಳ್​ ಪ್ರಮುಖ ಲಿಂಗಾಯತ ನಾಯಕರ ಜೊತೆ ಸಭೆ ಮಾಡಿದ್ದನ್ನು ಸಹಿಸಿಕೊಳ್ಳಲಾಗದ ವಿಜಯೇಂದ್ರ ಬೆಂಬಲಿತ ಗುಂಪು ಇದೀಗ ಯತ್ನಾಳ್ ಅವರಿಗೆ ಟಕ್ಕರ್ ಕೊಡೋಕೆ ಮುಂದಾಗಿದೆ.

ತಮ್ಮ ಮಗನ ಪರವಾಗಿ ಯಡಿಯೂರಪ್ಪನವರೇ ಪರೋಕ್ಷವಾಗಿ ಅಖಾಡಕ್ಕೆ ಇಳಿದಿದ್ದು, ಸಾಲು ಸಾಲು ಸಭೆ ನಡೆಸೋ ಮೂಲಕ, ಯಡಿಯೂರಪ್ಪರ ಲಿಂಗಾಯತ ಶಕ್ತಿ ಏನೆಂದು​ ತೋರಿಸ್ತೀವಿ ಎಂದು ಯಡಿಯೂರಪ್ಪನವರ ಆಪ್ತ, ಮಾಜಿ ಸಚಿವ ಎಂಪಿ. ರೇಣುಕಾಚಾರ್ಯ ಕಹಳೆ ಮೊಳಗಿಸಿದ್ದಾರೆ.

ಇದನ್ನೂ ಓದಿ: ಮತ್ತೊಂದು ಮಗ್ಗುಲಿಗೆ ಹೊರಳಿದ ಬಿಜೆಪಿ ಬಣಬಡಿದಾಟ: ವಿಜಯೇಂದ್ರ ವಿರುದ್ಧ ಲಿಂಗಾಯತ ಅಸ್ತ್ರ ಹೂಡಿದ ಯತ್ನಾಳ್

ದುಷ್ಟ ಶಕ್ತಿಯಿಂದ ಸಮಾಜ ಒಡೆಯೋ ಕೆಲಸ ಆಗುತ್ತಿದೆ ಎಂದು ಯತ್ನಾಳ್ ಬಣದ ವಿರುದ್ಧ ರೇಣುಕಾಚಾರ್ಯ ರೋಷಾವೇಶಗೊಂಡಿದ್ದಾರೆ. ಯಡಿಯೂರಪ್ಪನವರ ಋಣ ತೀರಿಸ್ಬೇಕು ಅಂದರೆ ಎಲ್ಲರೂ ಕೈ ಜೋಡಿಸ್ಬೇಕು ಎಂದು ರೇಣುಕಾಚಾರ್ಯ ಕರೆ ನೀಡಿದ್ದಾರೆ.

ಇದೀಗ ಯತ್ನಾಳ್​ ಗ್ಯಾಂಗ್ ವಿರುದ್ಧ ತೊಡೆತಟ್ಟಿರೋ ವಿಜಯೇಂದ್ರ ಬಣ, ತಮ್ಮ ವೀರಶೈವ ಲಿಂಗಾಯತ ಶಕ್ತಿ ಏನು ಅಂತಾ ತೋರಿಸೋಕೆ ಹೊರಟಿದ್ದಾರೆ. ಅದಕ್ಕೆ ಸಾಲು ಸಾಲು ಸಭೆಯನ್ನೇ ನಿಗದಿ ಮಾಡಿದ್ದಾರೆ. ನಾಳೆ ಬಿ.ಎಸ್. ಯಡಿಯೂರಪ್ಪನವರ ಆಪ್ತರು, ನೆಲಮಂಗಲ, ದಾಬಸ್ ಪೇಟೆ ಭಾಗದ ವೀರಶೈವ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಮಾರ್ಚ್​ 1ರಂದು ದಾವಣಗೆರೆ ಬೈಪಾಸ್​ನಲ್ಲಿ, ಚಿತ್ರದುರ್ಗ, ಹಾವೇರಿ ಮುಖಂಡರ ಜೊತೆ ಮೀಟಿಂಗ್ ಮಾಡಲಿದ್ದಾರೆ. ಮಾರ್ಚ್​ 4ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ದೊಡ್ಡ ಸಭೆ ಸೇರೋಕೆ ನಿರ್ಧಾರ ಮಾಡಿದ್ದಾರೆ. ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ಸಭೆ ಆಯೋಜನೆ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!