AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಲಾಡ್ಜ್​ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ ಒಂದರಲ್ಲಿ ಯುವತಿಯೊಂದಿಗೆ ತಂಗಿದ್ದ ಅರ್ಮಾನ್ ಮುತಾಹರ್ ಎಂಬಾತ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಬಿಟ್ಟು ಹೋಗಿದ್ದ. ಹೋಟೆಲ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ಜೆ.ಸಿ. ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಿದ್ದಾರೆ.

ಬೆಂಗಳೂರಿನ ಲಾಡ್ಜ್​ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್
ಲಾಡ್ಜ್ ನಲ್ಲಿ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆImage Credit source: google Gemini
ರಾಚಪ್ಪಾಜಿ ನಾಯ್ಕ್
| Edited By: |

Updated on:May 19, 2026 | 12:41 PM

Share

ಬೆಂಗಳೂರು, ಮೇ 19: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ (Live bullet) ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್​ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್​ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ ಸರಿಯಾಗಿ ಸ್ಪಂದಿಸದ ಕಾರಣ ಹೋಟೆಲ್ ಮ್ಯಾನೇಜರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಕೊಠಡಿಯಲ್ಲಿ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆ.
  • ಮ್ಯಾಗಜೀನ್ ಬಿಟ್ಟು ಹೋಗಿದ್ದ ಆರೋಪಿ ಅರ್ಮಾನ್‌ನನ್ನು ಜೆ.ಸಿ.ನಗರ ಪೊಲೀಸರು ಬಂಧಿಸಿದ್ದಾರೆ.
  • ಪತ್ತೆಯಾದ ಬುಲೆಟ್‌ಗಳು ಅಮೆರಿಕ ದೇಶದಲ್ಲಿ ತಯಾರಾಗಿದ್ದು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ನಡೆದಿದ್ದೇನು?

ಕಳೆದ ಏಪ್ರಿಲ್ 27ರಂದು ರಾತ್ರಿ ಆರೋಪಿ ಅರ್ಮಾನ್ ಮುತಾಹರ್ ಯುವತಿಯೊಬ್ಬಳ ಜೊತೆ ಬಂದು ಜಯಮಹಲ್ ಪ್ಯಾಲೇಸ್ ಹೋಟೆಲ್‌ನಲ್ಲಿ ರೂಂ ಒಂದನ್ನು ಬುಕ್ ಮಾಡಿದ್ದ. ಆತನೊಂದಿಗೆ ಓರ್ವ ಯುವತಿಯೂ ಅದೇ ರೂಮ್​ನಲ್ಲಿ ತಂಗಿದ್ದಳು ಎಂದು ಲಾಡ್ಜ್​ನ ಮ್ಯಾನೇಜರ್ ತಿಳಿಸಿದ್ದಾರೆ. ಗುರುತಿನ ಚೀಟಿಗಾಗಿ ತನ್ನ ಪಾಸ್‌ಪೋರ್ಟ್ ನೀಡಿದ್ದ ಆತ, ಮರುದಿನ (ಏಪ್ರಿಲ್ 28) ಬೆಳಗ್ಗೆ ಕೊಠಡಿಯಿಂದ ಚೆಕ್-ಔಟ್ ಆಗಿದ್ದ.

“ಬುಲೆಟ್ ಇಟ್ಟಿದ್ದೀನಿ, ಎತ್ತಿಡಿ” ಎಂದು ಕರೆ ಮಾಡಿದ ಆರೋಪಿ

ಹೋಟೆಲ್‌ನಿಂದ ಹೋದ ಸ್ವಲ್ಪ ಹೊತ್ತಿನ ಬಳಿಕ ರಿಸೆಪ್ಷನ್‌ಗೆ ಕರೆ ಮಾಡಿದ ಅರ್ಮಾನ್, ಜೀವಂತ ಗುಂಡುಗಳಿರುವ ನನ್ನ ಪಿಸ್ತೂಲಿನ ಮ್ಯಾಗಜೀನ್ ಅನ್ನು ರೂಮ್‌ನಲ್ಲೇ ಮರೆತು ಬಿಟ್ಟು ಬಂದಿದ್ದೇನೆ. ಅದನ್ನು ಎತ್ತಿಡಿ ಎಂದು ತಿಳಿಸಿದ್ದ. ಅದಾದ ನಂತರ ಆತ ತಂಗಿದ್ದ ಕೊಠಡಿಯನ್ನು ಹೌಸ್ ಕೀಪಿಂಗ್ ಸಿಬ್ಬಂದಿ ಪರಿಶೀಲಿಸಿದಾಗ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆಯಾಗಿದೆ. ಒಂದೆರಡು ದಿನಗಳಲ್ಲಿ ಬಂದು ಪಡೆದುಕೊಳ್ಳುತ್ತೇನೆ ಎಂದಿದ್ದ ಆರೋಪಿ, ಹೋಟೆಲ್ ಸಿಬ್ಬಂದಿ ಹಲವು ಬಾರಿ ಕರೆ ಮಾಡಿದರೂ ವಾಪಸ್ ಬಂದಿರಲಿಲ್ಲ.

ಪೊಲೀಸ್ ಠಾಣೆ ಮೆಟ್ಟಿಲೇರಿದ ಮ್ಯಾನೇಜರ್

ಕೊನೆಗೆ ಮೇ 4ರಂದು ಹೋಟೆಲ್ ಮ್ಯಾನೇಜರ್ ಕರೆ ಮಾಡಿ, ನಿಮ್ಮ ಮ್ಯಾಗಜೀನ್ ಅನ್ನು ಪೊಲೀಸರಿಗೆ ಒಪ್ಪಿಸುತ್ತಿದ್ದೇವೆ ಎಂದಾಗ, ಸರಿ, ನಾನು ಪೊಲೀಸ್ ಠಾಣೆಯಿಂದಲೇ ಪಡೆದುಕೊಳ್ಳುತ್ತೇನೆ ಎಂದು ಅರ್ಮಾನ್ ಉತ್ತರ ನೀಡಿದ್ದ. ಅದಾದ ಬಳಿಕ ಹೋಟೆಲ್ ಮ್ಯಾನೇಜರ್ ಜೆ.ಸಿ. ನಗರ ಪೊಲೀಸ್ ಠಾಣೆಗೆ ದೂರು ನೀಡಿ ಮ್ಯಾಗಜೀನ್ ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು

ಅವರ ದೂರಿನ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಅದು ಅಮೇರಿಕಾದಲ್ಲಿ ತಯಾರಿಸಲಾದ ಬುಲೆಟ್‌ಗಳು ಎಂಬುದು ಪತ್ತೆಯಾಗಿದೆ. ಅಧಿಕಾರಿಗಳ ಕಣ್ಣು ತಪ್ಪಿಸಿ ಈತ ದೇಶದೊಳಗೆ ಹಾಗೂ ಹೋಟೆಲ್‌ಗೆ ಇವುಗಳನ್ನು ಹೇಗೆ ತಂದಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Tue, 19 May 26

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?