AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಾಲಕಿ ಜೀವ ಉಳಿಸಲು 13 ನಿಮಿಷದಲ್ಲಿ 14 ಕಿಮೀ ಕ್ರಮಿಸಿ ಹೃದಯ ರವಾನೆ

ಹೃದಯವನ್ನು ರವಾನಿಸಲು ಬೆಂಗಳೂರು ನಗರ ಸಂಚಾರ ಪೊಲೀಸರು ಯಾವುದೇ ರಸ್ತೆ ಅಡಚಣೆ ಉಂಟಾಗದಂತೆ ಹಸಿರು ಕಾರಿಡಾರ್​ ನಿರ್ಮಿಸಿ ಸಹಾಯ ಮಾಡಿದ್ದಾರೆ. ಬೆಂಗಳೂರು ಟ್ರಾಫಿಕ್​ ಪೊಲೀಸರ ಸಹಾಯ ಮೇರೆಗೆ ಅತಿ ವೇಗವಾಗಿ ಹೃದಯವನ್ನು ರವಾನಿಸಲಾಯಿತು. ಮತ್ತು ಸಂಚಾರ ಪೊಲೀಸರ ಈ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಬೆಂಗಳೂರು: ಬಾಲಕಿ ಜೀವ ಉಳಿಸಲು 13 ನಿಮಿಷದಲ್ಲಿ 14 ಕಿಮೀ ಕ್ರಮಿಸಿ ಹೃದಯ ರವಾನೆ
ವಿಶ್ವ ಹೃದಯ ದಿನ
TV9 Web
| Edited By: |

Updated on: Oct 17, 2023 | 7:19 AM

Share

ಬೆಂಗಳೂರು ಅ.17: ಏಳು ವರ್ಷದ ಬಾಲಕಿಯ ಹೃದಯ ಕಸಿ ಮಾಡಲು ನಗರದ ಶೇಷಾದ್ರಿಪುರಂನಿಂದ 14 ಕಿಮೀ ದೂರದಲ್ಲಿರುವ ಆರ್​ಆರ್​​​ನಗರದ (RR Nagar) ಸ್ಪರ್ಶ ಆಸ್ಪತ್ರೆಗೆ ಬರೀ 13 ನಿಮಿಷ 17 ಸೆಕೆಂಡುಗಳಲ್ಲಿ ಹೃದಯವನ್ನು (Heart) ಸಾಗಿಸಲಾಗಿದೆ. ಹೃದಯವನ್ನು ರವಾನಿಸಲು ಬೆಂಗಳೂರು ನಗರ ಸಂಚಾರ ಪೊಲೀಸರು ಯಾವುದೇ ರಸ್ತೆ ಅಡಚಣೆ ಉಂಟಾಗದಂತೆ ಹಸಿರು ಕಾರಿಡಾರ್​ ನಿರ್ಮಿಸಿ ಸಹಾಯ ಮಾಡಿದ್ದಾರೆ. ಬೆಂಗಳೂರು ಟ್ರಾಫಿಕ್​ ಪೊಲೀಸರ ಸಹಾಯ ಮೇರೆಗೆ ಅತಿ ವೇಗವಾಗಿ ಹೃದಯವನ್ನು ರವಾನಿಸಲಾಯಿತು. ಮತ್ತು ಸಂಚಾರ ಪೊಲೀಸರ ಈ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಆಸ್ಪತ್ರೆ ಬಿಡುಗಡೆ ಮಾಡಿರುವ ವರದಿ ಪ್ರಕಾರ ಏಳು ವರ್ಷದ ಬಾಲಕಿ ಕಾರ್ಡಿಯೊಮಿಯೋಪತಿ ಎಂಬ ಕಾಯಿಲೆಯಿಂದ ಬಳಲುತ್ತಿದ್ದಳು. ಇದು ಹಿಗ್ಗಿದ ಹೃದಯ ಸ್ನಾಯುವಿನ ಕಾಯಿಲೆಯ ಒಂದು ವಿಧವಾಗಿದ್ದು, ಹೃದಯದ ಕೋಣೆಗಳು ತೆಳುವಾಗಿರುತ್ತದೆ, ಹಿಗ್ಗುತ್ತದೆ ಮತ್ತು ದೊಡ್ಡದಾಗಿ ಬೆಳೆಯುತ್ತದೆ. ಇದರಿಂದ ಹೃದಯ ವೈಫಲ್ಯವಾಗುವ ಸಾಧ್ಯತೆಯೂ ಇದೆ. ಇದೇ ಕಾರಣಕ್ಕೆ ಹೃದಯ ಕಸಿ ಮಾಡಲಾಗಿದೆ.

ಇದನ್ನೂ ಓದಿ: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ; 9 ಜನರ ಬಾಳಿಗೆ ಬೆಳಕು

ಅದೇ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಅಕ್ಕ ಕೂಡ 2019 ರಲ್ಲಿ ನಿಧನರಾದರು. ಕಿರಿ ಮಗಳು ಕೂಡ ಇದೇ ಕಾಯಿಲೆಯಿಂದ ಬಳಲುತ್ತಿದ್ದು, ಹೇಗಾದರು ಮಾಡಿ ಮಗಳನ್ನು ಉಳಿಸಿಕೊಳ್ಳಬೇಕು ಬಾಲಿಕಗೆ ಚಿಕಿತ್ಸೆ ಕೊಡಸಿದ್ದಾರೆ. ಆದರೂ ಬಾಲಕಿಯ ಆರೋಗ್ಯ ಹದಗೆಟ್ಟಿದೆ. ಆಗ ವೈದ್ಯರು ಹೃದಯ ಕಸಿ ಮಾಡಬೇಕು ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ಹೃದಯ ಕಸಿ ಮಾಡಲು ನೋಂದಾಯಿಸಿದ್ದರು. ಆದರೆ ಹೃದಯ ದಾನಿ ಇಲ್ಲದೆ ಚಿಕಿತ್ಸೆ ನೀಡಲಾಗುತ್ತಿತ್ತು.

ಇನ್ನು ಹೃದಯ ರವಾನೆ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಶೇಷಾದ್ರಿಪುರಂ ಮತ್ತು ಆರ್‌ಆರ್‌ನಗರ ನಡುವೆ ಹಸಿರು ಕಾರಿಡಾರ್‌ ಕಲ್ಪಿಸುವಂತೆ ಮನವಿ ಸಲ್ಲಿಸಲಾಗಿತ್ತು. ಭಾನುವಾರ, ಟ್ರಾಫಿಕ್ ಪೊಲೀಸರು ಹಸಿರು ಕಾರಿಡಾರ್​ ನಿರ್ಮಿಸಿದರು. ಇದರಿಂದ ಆಂಬುಲೆನ್ಸ್ ಸಮಯಕ್ಕೆ ಸರಿಯಾಗಿ ಆಸ್ಪತ್ರೆಯನ್ನು ತಲುಪಿತು.

ಕಳೆದ ವರ್ಷ ಮಾರ್ಚ್‌ನಲ್ಲಿ ಇದೇ ರೀತಿಯ ಘಟನೆಯಲ್ಲಿ, ಹಸಿರು ಕಾರಿಡಾರ್ ನಿರ್ಮಿಸಲಾಗಿತ್ತು. ಆಗ ಕೇವಲ ಎರಡು ಗಂಟೆಗಳಲ್ಲಿ ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಹೃದಯವನ್ನು ಸಾಗಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್