AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೈಕ್-ಆಟೋ, ಟ್ರ್ಯಾಕ್ಟರ್​ಗೆ ನಿರ್ಬಂಧ: ಫಸ್ಟ್ ಸರ್ವಿಸ್ ರಸ್ತೆ ಸರಿ ಮಾಡಿ ಎಂದ ಸ್ಥಳೀಯರು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹಿನ್ನಲೆ ಮೊದಲು ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೈಕ್-ಆಟೋ, ಟ್ರ್ಯಾಕ್ಟರ್​ಗೆ ನಿರ್ಬಂಧ: ಫಸ್ಟ್ ಸರ್ವಿಸ್ ರಸ್ತೆ ಸರಿ ಮಾಡಿ ಎಂದ ಸ್ಥಳೀಯರು
ನಿಯಮ ಮೀರಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವೇಶಕ್ಕೆ ಫೈನ್​ ಹಾಕುತ್ತಿರುವ ಪೊಲೀಸರು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 01, 2023 | 12:24 PM

Share

ರಾಮನಗರ, ಆ.1: ಬೆಂಗಳೂರು-ಮೈಸೂರು ಹೆದ್ದಾರಿ(Bangalore-Mysore Highway)ಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹಿನ್ನಲೆ ‘ಮೊದಲು ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕ್, ಅಟೋ, ಟ್ರ್ಯಾಕ್ಟರ್ ನಿಷೇಧ ಮಾಡಿರುವುದು ಒಳ್ಳೆಯದು. ಆದ್ರೆ, ಮೊದಲು ಸರ್ವಿಸ್ ರಸ್ತೆ ಪೂರ್ಣಗೊಳಿಸಲಿ. ಮಹಾರಾಜರು ಮಾಡಿರುವ ರಸ್ತೆಯನ್ನ ಯಾರು ಬಂದೂ ಉದ್ದಾರ ಮಾಡಬೇಕಾಗಿಲ್ಲ. ಅವರು ಮಾಡಿರುವ ರಸ್ತೆ ನಮಗೆ ಒಳ್ಳೆಯದು. ಮಹಾರಾಜರು ಮಾಡಿ ಬಿಟ್ಟಿರುವ ಕೆಲಸ ಮುಂದುವರೆಸಿಕೊಂಡು ಹೋಗಿ ಎಂದಿದ್ದಾರೆ.

ಈಗ ಮಾಡಿರುವ ಸರ್ವಿಸ್ ರಸ್ತೆಯಲ್ಲಿ ಮೋರಿ ನೀರು ರಸ್ತೆಗೆ  ಹರಿಯುತ್ತಿದ್ದು, ಸರ್ವಿಸ್ ರಸ್ತೆಯಲ್ಲಿ ಮಣ್ಣು ಕೂತು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಟೋಲ್ ಕಟ್ಟುವ ರಸ್ತೆಯನ್ನ ಮಾತ್ರ ಹೆದ್ದಾರಿಯವರು ಸ್ವಚ್ಚವಾಗಿ ಇಡುತ್ತಾರೆ. ಸರ್ವಿಸ್ ರಸ್ತೆಯಲ್ಲಿ ಸಂಚಾರ ಮಾಡುವ ನಮ್ಮಂತವರ ಪಾಡೇನು?, ನಾವೇನು ಭಾರತೀಯ ಪ್ರಜೆಗಳು ಅಲ್ವಾ, ನಾವು ಓಟ್ ಹಾಕಿಲ್ಲವೇ. ಈಗಾಗಲೇ ಹಳೆ ರಸ್ತೆಯೆಲ್ಲ ಕಿತ್ತು ಹೋಗಿದೆ. ಅದಕ್ಕೆ ಡಾಂಬರೀಕರಣ ಮಾಡಿಕೊಡಬೇಕು, ಹಳೆ ರಸ್ತೆ ಬಗ್ಗೆ ಅಧಿಕಾರಿಗಳ ಕ್ರಮ ಏನು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳು; ಅಶಿಸ್ತಿನ ಚಾಲನೆ ಮಾಡಿದರೆ ಸಿಕ್ಕಿಬೀಳುವುದು ಖಂಡಿತ!

ನಿಯಮ ಮೀರಿ ಹೆದ್ದಾರಿಗೆ ಇಳಿದಿದ್ದ ವಾಹನ ಸವಾರರಿಗೆ ದಂಡ ವಿಧಿಸಿದ ಪೊಲೀಸರು

ಇನ್ನು ಈಗಾಗಲೇ ಹೆದ್ದಾರಿಗೆ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹೇರಲಾಗಿದ್ದು, ಆದರೂ, ನಿಯಮ ಮೀರಿ ಬರುವ ವಾಹನಗಳಿಗೆ ರಾಮನಗರ ಪೊಲೀಸರು ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಹೌದು ನಿಯಮ ಮೀರಿ ಹೆದ್ದಾರಿಗೆ ಇಳಿದ ಹಿನ್ನಲೆ ಹೆದ್ದಾರಿಯ ಸಂಗಬಸವನದೊಡ್ಡಿ ಬಳಿ ಪೊಲೀಸರು 500 ರೂಪಾಯಿ ಫೈನ್ ಹಾಕುತ್ತಿದ್ದಾರೆ. ಈ ವೇಳೆ ಇದೊಂದು ಬಾರಿ ಬಿಟ್ಟುಬೀಡಿ ಎಂದು ವಾಹನ ಸವಾರರು ಕೇಳಿಕೊಳ್ಳುತ್ತಿದ್ದು, ಎಷ್ಟೇ ಬೇಡಿಕೊಂಡರೂ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್