AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೈಕ್-ಆಟೋ, ಟ್ರ್ಯಾಕ್ಟರ್​ಗೆ ನಿರ್ಬಂಧ: ಫಸ್ಟ್ ಸರ್ವಿಸ್ ರಸ್ತೆ ಸರಿ ಮಾಡಿ ಎಂದ ಸ್ಥಳೀಯರು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹಿನ್ನಲೆ ಮೊದಲು ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೈಕ್-ಆಟೋ, ಟ್ರ್ಯಾಕ್ಟರ್​ಗೆ ನಿರ್ಬಂಧ: ಫಸ್ಟ್ ಸರ್ವಿಸ್ ರಸ್ತೆ ಸರಿ ಮಾಡಿ ಎಂದ ಸ್ಥಳೀಯರು
ನಿಯಮ ಮೀರಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವೇಶಕ್ಕೆ ಫೈನ್​ ಹಾಕುತ್ತಿರುವ ಪೊಲೀಸರು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 01, 2023 | 12:24 PM

Share

ರಾಮನಗರ, ಆ.1: ಬೆಂಗಳೂರು-ಮೈಸೂರು ಹೆದ್ದಾರಿ(Bangalore-Mysore Highway)ಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹಿನ್ನಲೆ ‘ಮೊದಲು ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕ್, ಅಟೋ, ಟ್ರ್ಯಾಕ್ಟರ್ ನಿಷೇಧ ಮಾಡಿರುವುದು ಒಳ್ಳೆಯದು. ಆದ್ರೆ, ಮೊದಲು ಸರ್ವಿಸ್ ರಸ್ತೆ ಪೂರ್ಣಗೊಳಿಸಲಿ. ಮಹಾರಾಜರು ಮಾಡಿರುವ ರಸ್ತೆಯನ್ನ ಯಾರು ಬಂದೂ ಉದ್ದಾರ ಮಾಡಬೇಕಾಗಿಲ್ಲ. ಅವರು ಮಾಡಿರುವ ರಸ್ತೆ ನಮಗೆ ಒಳ್ಳೆಯದು. ಮಹಾರಾಜರು ಮಾಡಿ ಬಿಟ್ಟಿರುವ ಕೆಲಸ ಮುಂದುವರೆಸಿಕೊಂಡು ಹೋಗಿ ಎಂದಿದ್ದಾರೆ.

ಈಗ ಮಾಡಿರುವ ಸರ್ವಿಸ್ ರಸ್ತೆಯಲ್ಲಿ ಮೋರಿ ನೀರು ರಸ್ತೆಗೆ  ಹರಿಯುತ್ತಿದ್ದು, ಸರ್ವಿಸ್ ರಸ್ತೆಯಲ್ಲಿ ಮಣ್ಣು ಕೂತು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಟೋಲ್ ಕಟ್ಟುವ ರಸ್ತೆಯನ್ನ ಮಾತ್ರ ಹೆದ್ದಾರಿಯವರು ಸ್ವಚ್ಚವಾಗಿ ಇಡುತ್ತಾರೆ. ಸರ್ವಿಸ್ ರಸ್ತೆಯಲ್ಲಿ ಸಂಚಾರ ಮಾಡುವ ನಮ್ಮಂತವರ ಪಾಡೇನು?, ನಾವೇನು ಭಾರತೀಯ ಪ್ರಜೆಗಳು ಅಲ್ವಾ, ನಾವು ಓಟ್ ಹಾಕಿಲ್ಲವೇ. ಈಗಾಗಲೇ ಹಳೆ ರಸ್ತೆಯೆಲ್ಲ ಕಿತ್ತು ಹೋಗಿದೆ. ಅದಕ್ಕೆ ಡಾಂಬರೀಕರಣ ಮಾಡಿಕೊಡಬೇಕು, ಹಳೆ ರಸ್ತೆ ಬಗ್ಗೆ ಅಧಿಕಾರಿಗಳ ಕ್ರಮ ಏನು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳು; ಅಶಿಸ್ತಿನ ಚಾಲನೆ ಮಾಡಿದರೆ ಸಿಕ್ಕಿಬೀಳುವುದು ಖಂಡಿತ!

ನಿಯಮ ಮೀರಿ ಹೆದ್ದಾರಿಗೆ ಇಳಿದಿದ್ದ ವಾಹನ ಸವಾರರಿಗೆ ದಂಡ ವಿಧಿಸಿದ ಪೊಲೀಸರು

ಇನ್ನು ಈಗಾಗಲೇ ಹೆದ್ದಾರಿಗೆ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹೇರಲಾಗಿದ್ದು, ಆದರೂ, ನಿಯಮ ಮೀರಿ ಬರುವ ವಾಹನಗಳಿಗೆ ರಾಮನಗರ ಪೊಲೀಸರು ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಹೌದು ನಿಯಮ ಮೀರಿ ಹೆದ್ದಾರಿಗೆ ಇಳಿದ ಹಿನ್ನಲೆ ಹೆದ್ದಾರಿಯ ಸಂಗಬಸವನದೊಡ್ಡಿ ಬಳಿ ಪೊಲೀಸರು 500 ರೂಪಾಯಿ ಫೈನ್ ಹಾಕುತ್ತಿದ್ದಾರೆ. ಈ ವೇಳೆ ಇದೊಂದು ಬಾರಿ ಬಿಟ್ಟುಬೀಡಿ ಎಂದು ವಾಹನ ಸವಾರರು ಕೇಳಿಕೊಳ್ಳುತ್ತಿದ್ದು, ಎಷ್ಟೇ ಬೇಡಿಕೊಂಡರೂ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ