AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Discount Offer: ಟ್ರಾಫಿಕ್ ಫೈನ್ ಕಟ್ಟುವವರಿಗೆ ಶೇಕಡಾ 50ರಷ್ಟು ರಿಯಾಯಿತಿ, ಅಂತಿಮ ದಿನಾಂಕ ಇಲ್ಲಿದೆ

ಲೋಕ ಅದಾಲತ್ ಹಿನ್ನಲೆಯಲ್ಲಿ ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯಿತಿ ನೀಡಲಾಗುತ್ತಿದೆ. ಫೈನ್ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ.

Discount Offer: ಟ್ರಾಫಿಕ್ ಫೈನ್ ಕಟ್ಟುವವರಿಗೆ ಶೇಕಡಾ 50ರಷ್ಟು ರಿಯಾಯಿತಿ, ಅಂತಿಮ ದಿನಾಂಕ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 02, 2023 | 8:37 PM

Share

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟಲು (Traffic Fine) ಬಾಕಿ ಇರುವವರು ಮತ್ತು ಪ್ರಕರಣ ಕೋರ್ಟ್​ನಲ್ಲಿ ಇದ್ದರೆ ಅಂತಹವರಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯಿತಿ ನೀಡುತ್ತಿದೆ. ಫೆಬ್ರವರಿ 11ರಂದು ಲೋಕ ಅದಾಲತ್ (Lok Adalat) ನಡೆಯಲಿರುವ ಹಿನ್ನಲೆ ದಂಡ ಪಾವತಿಯಲ್ಲಿ ರಿಯಾಯಿತಿ ನೀಡುವಂತೆ ಕಾನೂನು ಸೇವೆಗಳ ಪ್ರಾಧಿಕಾರದ (Legal Services Authority) ಅಧ್ಯಕ್ಷ ಬಿ.ವೀರಪ್ಪ ಅವರು ಮನವಿ ಮಾಡಿದ್ದರು. ಅದರಂತೆ ಶೇಕಡಾ 50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ (Transport Department) ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ. ಫೆ.11 ರ ಒಳಗಾಗಿ ಫೈನ್ ಕಟ್ಟುವವರು ಕಟ್ಟಬಹುದಾಗಿದೆ. ಫೆಬ್ರವರಿ 11ರನಂತರ ಸಂಪೂರ್ಣ ದಂಡದ ಮೊತ್ತ ಪಾವತಿಸಬೇಕು.

ಅಜಾಗರೂಕತೆಯಿಂದ ಬಸ್ ಚಾಲನೆ, ಚಾಲಕನಿಗೆ ನೋಟಿಸ್

ಬೆಂಗಳೂರು: ಅಜಾಗರೂಕತೆಯಿಂದ ಬಸ್ ಚಾಲನೆ ಮಾಡಿದ ಆರೋಪ ಸಂಬಂಧ ಬಿಎಂಟಿಸಿ ಬಸ್ ಚಾಲಕನೋರ್ವನಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬಿಎಂಟಿಸಿ ಡಿಪೋ-33ರ ವ್ಯವಸ್ಥಾಪಕರಿಂದ ಚಾಲಕ ವಿವೇಕಾನಂದಸ್ವಾಮಿಗೆ ನೋಟಿಸ್​ ಜಾರಿ ಮಾಡಲಾಗಿದೆ. ಡಿಪೋ ಮ್ಯಾನೇಜರ್​ಗಳಿಂದ ಚಾಲಕರಿಗೆ ಇಲ್ಲ ಸಲ್ಲದ ವಿಚಾರಕ್ಕೆ ನೋಟೀಸ್ ಜಾರಿ ಮಾಡುವ ಆರೋಪವೂ ಇದೆ. ಕೇವಲ ಕಾರ್ ಅನ್ನು ಓವರ್ ಟೇಕ್ ಮಾಡಿದ್ದಕ್ಕೆ ಇದೀಗ ನೋಟೀಸ್ ಜಾರಿ ಮಾಡಲಾಗಿದ್ದು, ಸೂಕ್ತ ಕಾರಣ ನೀಡುವಂತೆ ಮೂರು ದಿನಗಳ ಗಡುವು ನೀಡಲಾಗಿದೆ. ಒಂದು ವೇಳೆ ಸೂಕ್ತ ಉತ್ತರ ನೀಡದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳುವಂತೆಯೂ ಸೂಚಿಸಲಾಗಿದೆ. ಅಜಾಗರುಕತೆಯಿಂದ ಬಸ್ ಚಾಲನೆ ಮಾಡಿದ್ದಾರೆ ಎಂಬ ಪ್ರಯಾಣಿಕನೊಬ್ಬನ ದೂರು ಆಧರಿಸಿ ಈ ನೋಟಿಸ್ ಜಾರಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Thu, 2 February 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?