AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

Lok Sabha Election IT Raid: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಬರೊಬ್ಬರಿ 16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, 6 ಕೋಟಿ 45 ಲಕ್ಷ ಮೌಲ್ಯದ ವಜ್ರ ವಶಪಡಿಸಿಕೊಳ್ಳಲಾಗಿದೆ. 1.33 ಕೋಟಿ ನಗದು ಪತ್ತೆಯಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ
ಆದಾಯ ತೆರಿಗೆ ಇಲಾಖೆ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ವಿವೇಕ ಬಿರಾದಾರ|

Updated on:Apr 24, 2024 | 10:35 AM

Share

ಬೆಂಗಳೂರು, ಏಪ್ರಿಲ್​ 24: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ (Income Tax Department) ಮತ್ತು ಚುನಾವಣಾ ಆಯೋಗ (Election Commission) ಹಣ, ಚಿನ್ನ, ಬೆಳ್ಳಿ ಮತ್ತು ವಸ್ತುಗಳ ಅಕ್ರಮ ವಹಿವಾಟಿನ ಮೇಲೆ ಹದ್ದಿನ ಕಣ್ಣು ಇಟ್ಟಿವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ನಡೆಸಿದ್ದು, ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆಯಾಗಿದೆ.

ಶಂಕರಪುರದಲ್ಲಿ 3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಶಾರದದೇವಿ ರಸ್ತೆಯಲ್ಲಿ 3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ, ಮರ್ಕೈಂಟಲ್ ಬ್ಯಾಂಕ್ ಬಳಿ 2 ಕೋಟಿ 13 ಲಕ್ಷ ಮೌಲ್ಯದ 3 ಕೆಜಿ 400 ಗ್ರಾಂ, ಜಯನಗರ 3ನೇ ಬ್ಲಾಕ್​ನಲ್ಲಿ 5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾರಸ್ವತ್ ಬ್ಯಾಂಕ್, ಚಾಮರಾಜಪೇಟೆಯಲ್ಲಿ 84 ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆಯಾಗಿದೆ.

ಬಸವನಗುಡಿ ಅಂಚೆ ಕಚೇರಿ ಬಳಿ 3 ಲಕ್ಷ 34 ಸಾವಿರ ಮೌಲ್ಯದ 6.38 ಕ್ಯಾರೆಟ್ ವಜ್ರ, ಮಾತಾ ಶಾರದಾ ದೇವಿ ರಸ್ತೆಯಲ್ಲಿ 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ, ಜಯನಗರದಲ್ಲಿ 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆಯಾಗಿದೆ.

ಇದನ್ನೂ ಓದಿ: ಮತಗಟ್ಟೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುತ್ತೀರಾ? ಹಾಗಾದರೆ ಗಮನಿಸಿ

ಒಟ್ಟು 16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, 6 ಕೋಟಿ 45 ಲಕ್ಷ ಮೌಲ್ಯದ ವಜ್ರ  ವಶಪಡಿಸಿಕೊಳ್ಳಲಾಗಿದೆ. 1.33 ಕೋಟಿ ನಗದು ಪತ್ತೆಯಾಗಿದೆ.

ಬಳ್ಳಾರಿಯಲ್ಲಿ 23 ಲಕ್ಷ ಹಣ ಜಪ್ತಿ

ಬಳ್ಳಾರಿ: ಬ್ರೂಸ್ ಪೇಟೆ ಪೊಲೀಸರು, ಎಫ್.ಎಸ್.ಟಿ ಹಾಗೂ ವಿವಿಎಸ್‌ಟಿ ತಂಡದ ಜಂಟಿ ಕಾರ್ಯಚರಣೆಯಲ್ಲಿ ದಾಖಲೆ ಇಲ್ಲದೆ ಸಂಗ್ರಹಿಸಿದ್ದ 23 ಲಕ್ಷ ನಗದು, 450 ಗ್ರಾಂ ಚಿನ್ನ, 13 ಕೆಜಿ ಬೆಳ್ಳಿ ಪತ್ತೆಯಾಗಿದೆ. ಕಂಬಳಿ ಬಜಾರ್​ನ ಚುನ್ನಿಲಾಲ್ ರಾಕೇಶ್ ಕುಮಾರ್ ಷಾ ಜ್ಯೂವೆಲರ್ಸ್​​ನ ಮಾಲೀಕ ಕಮಲೇಶ್ ಜೈನ್ ಎಂಬುವರ ಮನೆಯಲ್ಲಿ ಇಷ್ಟೊಂದು ಪ್ರಮಾಣದ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಜಪ್ತಿ ಮಾಡಲಾದ ಹಣ, ಚಿನ್ನ ಮತ್ತು ಬೆಳ್ಳಿಯನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 am, Wed, 24 April 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್