AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Advisory: ಮತ ಎಣಿಕೆ ಎಫೆಕ್ಟ್​: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ

ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಕೂಡ ಲೋಕಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಸಂಚಾರ ಪೊಲೀಸರು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಪಾರ್ಕಿಂಗ್ ನಿಷೇಧ ಹೇರಿದ್ದಾರೆ. ಆ ವಿವರ ಇಲ್ಲಿದೆ.

Bengaluru Traffic Advisory: ಮತ ಎಣಿಕೆ ಎಫೆಕ್ಟ್​: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ
ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ
ಗಣಪತಿ ಶರ್ಮಾ
| Edited By: |

Updated on:Jun 03, 2024 | 11:42 AM

Share

ಬೆಂಗಳೂರು, ಜೂನ್ 3: ಲೋಕಸಭೆ ಚುನಾವಣೆಯ ಮತ ಎಣಿಕೆ (Lok Sabha Elections) ಮಂಗಳವಾರ ನಡೆಯಲಿದ್ದು, ಫಲಿತಾಂಶವೂ (Lok Sabha Election Result) ಪ್ರಕಟಗೊಳ್ಳಲಿದೆ. ಈ ಕಾರಣ ಜೂನ್ 4 ರಂದು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Bengaluru Traffic Advisory) ಹೇರಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು ಪ್ರಯಾಣಿಕರಿಗೆ ಸಾಮಾಜಿಕ ಮಾಧ್ಯಮ ಎಕ್ಸ್​ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ. ಸಂಚಾರ ನಿರ್ಬಂಧದ ಸಮಯದಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನೂ ನಿಷೇಧಿಸಲಾಗಿದೆ. ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಮತ ಎಣಿಕೆಯನ್ನು ಗಮನದಲ್ಲಿಟ್ಟುಕೊಂಡು ನಿಷೇಧಾಜ್ಞೆ ಹೇರಲಾಗಿದೆ.

ಈ ಕೆಳಗಿನ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

  • ಆರ್​ಆರ್​ಎಂಆರ್ ರಸ್ತೆ – ರಿಚ್ಮಂಡ್ ವೃತ್ತದಿಂದ ಹಡ್ಸನ್ ಜಂಕ್ಷನ್.
  • ವಿಠಲ್ ಮಲ್ಯ ರಸ್ತೆ – ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್.
  • ಎನ್.ಆರ್.ರಸ್ತೆ – ಹಡ್ಸನ್ ವೃತ್ತದಿಂದ ಟೌನ್ ಹಾಲ್ ಜಂಕ್ಷನ್ ಕೆಬಿ ರಸ್ತೆ – ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕ್ವಿನ್ ಜಂಕ್ಷನ್.
  • ಕೆ.ಜಿ.ರಸ್ತೆ – ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್.
  • ನೃಪತುಂಗ ರಸ್ತೆ – ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್.
  • ಕೀನ್ಸ್ ರಸ್ತೆ – ಬಾಳೇಕುಂದ್ರಿ ವೃತ್ತದಿಂದ ಸಿಟಿಒ ಪ್ರಶಕ್ಕೆ.
  • ಸೆಂಟ್ರಲ್ ಸ್ಟ್ರೀಟ್ ರಸ್ತೆ – ಬಿಆರ್‌ವಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತ, ಎಂಜಿ ರಸ್ತೆ – ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಜಂಕ್ಷನ್

ಇದನ್ನೂ ಓದಿ: ಜೂನ್ 4 2024 ಮಂಗಳವಾರದ ದಿನ ವಿಶೇಷ ಏನು? ಭಾರತದ ಭವಿಷ್ಯ ಯಾರ ಕೈ ಸೇರಲಿದೆ? ಜ್ಯೋತಿಷ್ಯ ಏನು ಹೇಳುತ್ತದೆ?

ಈ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶ

  • ಸೇಂಟ್ ಜೋಸೆಫ್ ಕಾಲೇಜು ಮೈದಾನ
  • ಕಂಠೀರವ ಸ್ಟೇಡಿಯಂ ಪಾರ್ಕಿಂಗ್ ಸ್ಥಳ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 am, Mon, 3 June 24

Follow Us
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ!
ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ!
ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ನಟ ರವಿಚಂದ್ರನ್
ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ನಟ ರವಿಚಂದ್ರನ್
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ