AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಮತದಾನ ಮಾಡಲು ಊರುಗಳಿಗೆ ಹೊರಟವರಿಗೆ ಬಸ್ ಇಲ್ಲದೆ ಪರದಾಟ

ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದಿಂದ ಈಗಾಗಲೇ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ (ಏಪ್ರಿಲ್​ 26) ಮತದಾನ ನಡೆಯಲಿದ್ದು, ಹಾಗಾಗಿ ಚುನಾವಣಾ ಕಾರ್ಯಕ್ಕೆ ಕೆಎಸ್​​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್ (Bus) ಬಳಕೆಯಾಗಿದೆ. ಇದರಿಂದ ಮತದಾನ ಮಾಡಲು ಊರಿಗೆ ತೆರಳುವ ಪ್ರಯಾಣಿಕರು ಬಸ್​ ಸಿಗದೇ ಪರದಾಡುತ್ತಿದ್ದಾರೆ.

ಲೋಕಸಭಾ ಚುನಾವಣೆ: ಮತದಾನ ಮಾಡಲು ಊರುಗಳಿಗೆ ಹೊರಟವರಿಗೆ ಬಸ್ ಇಲ್ಲದೆ ಪರದಾಟ
ಲೋಕಸಭಾ ಚುನಾವಣೆ ಹಿನ್ನಲೆ ಬಸ್​ಗಾಗಿ ಪ್ರಯಾಣಿಕರ ಪರದಾಟ
Kiran Surya
| Edited By: |

Updated on:Apr 25, 2024 | 5:56 PM

Share

ಬೆಂಗಳೂರು, ಏ.25: ಲೋಕಸಭಾ ಚುನಾವಣೆಯ(Lok Sabha Election) ಕಾವು ಜೋರಾಗಿದ್ದು, ರಾಜ್ಯದಲ್ಲಿ ನಾಳೆ(ಏ.26)ಮೊದಲ ಹಂತದಲ್ಲಿ ಹದಿನಾಲ್ಕು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನಲೆ ಎಲೆಕ್ಷನ್ ಡ್ಯೂಟಿಗಾಗಿ ಕೆಎಸ್ಆರ್​ಟಿಸಿ ಯಿಂದ 2100 ಬಸ್​ಗಳನ್ನು ನೀಡಲಾಗಿದೆ. ಹೀಗಾಗಿ ಬಸ್​ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಇತ್ತ ಮತದಾರರು ತಮ್ಮೂರಿನತ್ತ ಪ್ರಯಾಣ ಬೆಳಸಿದ್ದು, ಮೆಜೆಸ್ಟಿಕ್(Majestic) ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ.

ಬಸ್​ಗಳಿಲ್ಲದೆ ಪ್ರಯಾಣಿಕರ ಪರದಾಟ

ಚಿತ್ರದುರ್ಗ, ತುಮಕೂರು , ಹಾಸನ ಕಡೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಸ್​ಗಾಗಿ ಮೆಜೆಸ್ಟಿಕ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಇನ್ನು 2,100 ಕೆಎಸ್​​ಆರ್​ಟಿಸಿ ಮತ್ತು 1,700 ಬಿಎಂಟಿಸಿ ಬಸ್​ಗಳನ್ನು ಆಯೋಗ ಬಳಕೆ​​ ಮಾಡಿಕೊಂಡ ಹಿನ್ನಲೆ ಸರ್ಕಾರಿ ಬಸ್​ಗಳಿಗೆ ಕಿ.ಮೀ.ಗೆ 57 ರೂ. ದರ ನಿಗದಿ ಮಾಡಲಾಗಿದೆ. ಹೀಗಾಗಿ ಎರಡು ದಿನ ಸರ್ಕಾರಿ ಬಸ್​ಗಳ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ 2024: ಮೈಸೂರಿನ ಪುಟ್ಟ ಮಗುವಿನ ತೊದಲ ನುಡಿಯಲ್ಲಿ ಮತದಾನ ಜಾಗೃತಿ; ಇಲ್ಲಿದೆ ವಿಡಿಯೋ

ಇನ್ನು ಚುನಾವಣಾ ಕಾರ್ಯಕ್ಕೆ ಖಾಸಗಿ ವಾಹನಗಳನ್ನು ಕೂಡ ಬಳಸಿಕೊಳ್ಳಲಾಗಿದೆ. ಅದರಂತೆ ಪ್ರತಿ ವಾಹನಕ್ಕೂ ಪ್ರತ್ಯೇಕ ದರ ಫಿಕ್ಸ್​​ ಮಾಡಲಾಗಿದ್ದು, ಮುಂಗಡ ಹಣ ಕೂಡ ಪಾವತಿ ಮಾಡಲಾಗಿದೆ. ಈ ಹಿನ್ನಲೆ ಮತದಾನ ಮಾಡಲು ತೆರಳುವ ಪ್ರಯಾಣಿಕರು ಬಸ್​ಗಾಗಿ ಪರದಾಡುವಂತಾಗಿದೆ.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Thu, 25 April 24

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!