AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಮತದಾನ ಮಾಡಲು ಊರುಗಳಿಗೆ ಹೊರಟವರಿಗೆ ಬಸ್ ಇಲ್ಲದೆ ಪರದಾಟ

ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದಿಂದ ಈಗಾಗಲೇ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ (ಏಪ್ರಿಲ್​ 26) ಮತದಾನ ನಡೆಯಲಿದ್ದು, ಹಾಗಾಗಿ ಚುನಾವಣಾ ಕಾರ್ಯಕ್ಕೆ ಕೆಎಸ್​​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್ (Bus) ಬಳಕೆಯಾಗಿದೆ. ಇದರಿಂದ ಮತದಾನ ಮಾಡಲು ಊರಿಗೆ ತೆರಳುವ ಪ್ರಯಾಣಿಕರು ಬಸ್​ ಸಿಗದೇ ಪರದಾಡುತ್ತಿದ್ದಾರೆ.

ಲೋಕಸಭಾ ಚುನಾವಣೆ: ಮತದಾನ ಮಾಡಲು ಊರುಗಳಿಗೆ ಹೊರಟವರಿಗೆ ಬಸ್ ಇಲ್ಲದೆ ಪರದಾಟ
ಲೋಕಸಭಾ ಚುನಾವಣೆ ಹಿನ್ನಲೆ ಬಸ್​ಗಾಗಿ ಪ್ರಯಾಣಿಕರ ಪರದಾಟ
ಕಿರಣ್​ ಸೂರ್ಯ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 25, 2024 | 5:56 PM

Share

ಬೆಂಗಳೂರು, ಏ.25: ಲೋಕಸಭಾ ಚುನಾವಣೆಯ(Lok Sabha Election) ಕಾವು ಜೋರಾಗಿದ್ದು, ರಾಜ್ಯದಲ್ಲಿ ನಾಳೆ(ಏ.26)ಮೊದಲ ಹಂತದಲ್ಲಿ ಹದಿನಾಲ್ಕು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನಲೆ ಎಲೆಕ್ಷನ್ ಡ್ಯೂಟಿಗಾಗಿ ಕೆಎಸ್ಆರ್​ಟಿಸಿ ಯಿಂದ 2100 ಬಸ್​ಗಳನ್ನು ನೀಡಲಾಗಿದೆ. ಹೀಗಾಗಿ ಬಸ್​ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಇತ್ತ ಮತದಾರರು ತಮ್ಮೂರಿನತ್ತ ಪ್ರಯಾಣ ಬೆಳಸಿದ್ದು, ಮೆಜೆಸ್ಟಿಕ್(Majestic) ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ.

ಬಸ್​ಗಳಿಲ್ಲದೆ ಪ್ರಯಾಣಿಕರ ಪರದಾಟ

ಚಿತ್ರದುರ್ಗ, ತುಮಕೂರು , ಹಾಸನ ಕಡೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಸ್​ಗಾಗಿ ಮೆಜೆಸ್ಟಿಕ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಇನ್ನು 2,100 ಕೆಎಸ್​​ಆರ್​ಟಿಸಿ ಮತ್ತು 1,700 ಬಿಎಂಟಿಸಿ ಬಸ್​ಗಳನ್ನು ಆಯೋಗ ಬಳಕೆ​​ ಮಾಡಿಕೊಂಡ ಹಿನ್ನಲೆ ಸರ್ಕಾರಿ ಬಸ್​ಗಳಿಗೆ ಕಿ.ಮೀ.ಗೆ 57 ರೂ. ದರ ನಿಗದಿ ಮಾಡಲಾಗಿದೆ. ಹೀಗಾಗಿ ಎರಡು ದಿನ ಸರ್ಕಾರಿ ಬಸ್​ಗಳ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ 2024: ಮೈಸೂರಿನ ಪುಟ್ಟ ಮಗುವಿನ ತೊದಲ ನುಡಿಯಲ್ಲಿ ಮತದಾನ ಜಾಗೃತಿ; ಇಲ್ಲಿದೆ ವಿಡಿಯೋ

ಇನ್ನು ಚುನಾವಣಾ ಕಾರ್ಯಕ್ಕೆ ಖಾಸಗಿ ವಾಹನಗಳನ್ನು ಕೂಡ ಬಳಸಿಕೊಳ್ಳಲಾಗಿದೆ. ಅದರಂತೆ ಪ್ರತಿ ವಾಹನಕ್ಕೂ ಪ್ರತ್ಯೇಕ ದರ ಫಿಕ್ಸ್​​ ಮಾಡಲಾಗಿದ್ದು, ಮುಂಗಡ ಹಣ ಕೂಡ ಪಾವತಿ ಮಾಡಲಾಗಿದೆ. ಈ ಹಿನ್ನಲೆ ಮತದಾನ ಮಾಡಲು ತೆರಳುವ ಪ್ರಯಾಣಿಕರು ಬಸ್​ಗಾಗಿ ಪರದಾಡುವಂತಾಗಿದೆ.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Thu, 25 April 24

Follow Us
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!