AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಮತದಾನ ಮಾಡಲು ಊರುಗಳಿಗೆ ಹೊರಟವರಿಗೆ ಬಸ್ ಇಲ್ಲದೆ ಪರದಾಟ

ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದಿಂದ ಈಗಾಗಲೇ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ (ಏಪ್ರಿಲ್​ 26) ಮತದಾನ ನಡೆಯಲಿದ್ದು, ಹಾಗಾಗಿ ಚುನಾವಣಾ ಕಾರ್ಯಕ್ಕೆ ಕೆಎಸ್​​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್ (Bus) ಬಳಕೆಯಾಗಿದೆ. ಇದರಿಂದ ಮತದಾನ ಮಾಡಲು ಊರಿಗೆ ತೆರಳುವ ಪ್ರಯಾಣಿಕರು ಬಸ್​ ಸಿಗದೇ ಪರದಾಡುತ್ತಿದ್ದಾರೆ.

ಲೋಕಸಭಾ ಚುನಾವಣೆ: ಮತದಾನ ಮಾಡಲು ಊರುಗಳಿಗೆ ಹೊರಟವರಿಗೆ ಬಸ್ ಇಲ್ಲದೆ ಪರದಾಟ
ಲೋಕಸಭಾ ಚುನಾವಣೆ ಹಿನ್ನಲೆ ಬಸ್​ಗಾಗಿ ಪ್ರಯಾಣಿಕರ ಪರದಾಟ
Kiran Surya
| Edited By: |

Updated on:Apr 25, 2024 | 5:56 PM

Share

ಬೆಂಗಳೂರು, ಏ.25: ಲೋಕಸಭಾ ಚುನಾವಣೆಯ(Lok Sabha Election) ಕಾವು ಜೋರಾಗಿದ್ದು, ರಾಜ್ಯದಲ್ಲಿ ನಾಳೆ(ಏ.26)ಮೊದಲ ಹಂತದಲ್ಲಿ ಹದಿನಾಲ್ಕು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನಲೆ ಎಲೆಕ್ಷನ್ ಡ್ಯೂಟಿಗಾಗಿ ಕೆಎಸ್ಆರ್​ಟಿಸಿ ಯಿಂದ 2100 ಬಸ್​ಗಳನ್ನು ನೀಡಲಾಗಿದೆ. ಹೀಗಾಗಿ ಬಸ್​ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಇತ್ತ ಮತದಾರರು ತಮ್ಮೂರಿನತ್ತ ಪ್ರಯಾಣ ಬೆಳಸಿದ್ದು, ಮೆಜೆಸ್ಟಿಕ್(Majestic) ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ.

ಬಸ್​ಗಳಿಲ್ಲದೆ ಪ್ರಯಾಣಿಕರ ಪರದಾಟ

ಚಿತ್ರದುರ್ಗ, ತುಮಕೂರು , ಹಾಸನ ಕಡೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಸ್​ಗಾಗಿ ಮೆಜೆಸ್ಟಿಕ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಇನ್ನು 2,100 ಕೆಎಸ್​​ಆರ್​ಟಿಸಿ ಮತ್ತು 1,700 ಬಿಎಂಟಿಸಿ ಬಸ್​ಗಳನ್ನು ಆಯೋಗ ಬಳಕೆ​​ ಮಾಡಿಕೊಂಡ ಹಿನ್ನಲೆ ಸರ್ಕಾರಿ ಬಸ್​ಗಳಿಗೆ ಕಿ.ಮೀ.ಗೆ 57 ರೂ. ದರ ನಿಗದಿ ಮಾಡಲಾಗಿದೆ. ಹೀಗಾಗಿ ಎರಡು ದಿನ ಸರ್ಕಾರಿ ಬಸ್​ಗಳ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ 2024: ಮೈಸೂರಿನ ಪುಟ್ಟ ಮಗುವಿನ ತೊದಲ ನುಡಿಯಲ್ಲಿ ಮತದಾನ ಜಾಗೃತಿ; ಇಲ್ಲಿದೆ ವಿಡಿಯೋ

ಇನ್ನು ಚುನಾವಣಾ ಕಾರ್ಯಕ್ಕೆ ಖಾಸಗಿ ವಾಹನಗಳನ್ನು ಕೂಡ ಬಳಸಿಕೊಳ್ಳಲಾಗಿದೆ. ಅದರಂತೆ ಪ್ರತಿ ವಾಹನಕ್ಕೂ ಪ್ರತ್ಯೇಕ ದರ ಫಿಕ್ಸ್​​ ಮಾಡಲಾಗಿದ್ದು, ಮುಂಗಡ ಹಣ ಕೂಡ ಪಾವತಿ ಮಾಡಲಾಗಿದೆ. ಈ ಹಿನ್ನಲೆ ಮತದಾನ ಮಾಡಲು ತೆರಳುವ ಪ್ರಯಾಣಿಕರು ಬಸ್​ಗಾಗಿ ಪರದಾಡುವಂತಾಗಿದೆ.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Thu, 25 April 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್