AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಮತದಾನ ಮಾಡಲು ಊರುಗಳಿಗೆ ಹೊರಟವರಿಗೆ ಬಸ್ ಇಲ್ಲದೆ ಪರದಾಟ

ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದಿಂದ ಈಗಾಗಲೇ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ (ಏಪ್ರಿಲ್​ 26) ಮತದಾನ ನಡೆಯಲಿದ್ದು, ಹಾಗಾಗಿ ಚುನಾವಣಾ ಕಾರ್ಯಕ್ಕೆ ಕೆಎಸ್​​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್ (Bus) ಬಳಕೆಯಾಗಿದೆ. ಇದರಿಂದ ಮತದಾನ ಮಾಡಲು ಊರಿಗೆ ತೆರಳುವ ಪ್ರಯಾಣಿಕರು ಬಸ್​ ಸಿಗದೇ ಪರದಾಡುತ್ತಿದ್ದಾರೆ.

ಲೋಕಸಭಾ ಚುನಾವಣೆ: ಮತದಾನ ಮಾಡಲು ಊರುಗಳಿಗೆ ಹೊರಟವರಿಗೆ ಬಸ್ ಇಲ್ಲದೆ ಪರದಾಟ
ಲೋಕಸಭಾ ಚುನಾವಣೆ ಹಿನ್ನಲೆ ಬಸ್​ಗಾಗಿ ಪ್ರಯಾಣಿಕರ ಪರದಾಟ
Kiran Surya
| Edited By: |

Updated on:Apr 25, 2024 | 5:56 PM

Share

ಬೆಂಗಳೂರು, ಏ.25: ಲೋಕಸಭಾ ಚುನಾವಣೆಯ(Lok Sabha Election) ಕಾವು ಜೋರಾಗಿದ್ದು, ರಾಜ್ಯದಲ್ಲಿ ನಾಳೆ(ಏ.26)ಮೊದಲ ಹಂತದಲ್ಲಿ ಹದಿನಾಲ್ಕು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನಲೆ ಎಲೆಕ್ಷನ್ ಡ್ಯೂಟಿಗಾಗಿ ಕೆಎಸ್ಆರ್​ಟಿಸಿ ಯಿಂದ 2100 ಬಸ್​ಗಳನ್ನು ನೀಡಲಾಗಿದೆ. ಹೀಗಾಗಿ ಬಸ್​ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಇತ್ತ ಮತದಾರರು ತಮ್ಮೂರಿನತ್ತ ಪ್ರಯಾಣ ಬೆಳಸಿದ್ದು, ಮೆಜೆಸ್ಟಿಕ್(Majestic) ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ.

ಬಸ್​ಗಳಿಲ್ಲದೆ ಪ್ರಯಾಣಿಕರ ಪರದಾಟ

ಚಿತ್ರದುರ್ಗ, ತುಮಕೂರು , ಹಾಸನ ಕಡೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಸ್​ಗಾಗಿ ಮೆಜೆಸ್ಟಿಕ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಇನ್ನು 2,100 ಕೆಎಸ್​​ಆರ್​ಟಿಸಿ ಮತ್ತು 1,700 ಬಿಎಂಟಿಸಿ ಬಸ್​ಗಳನ್ನು ಆಯೋಗ ಬಳಕೆ​​ ಮಾಡಿಕೊಂಡ ಹಿನ್ನಲೆ ಸರ್ಕಾರಿ ಬಸ್​ಗಳಿಗೆ ಕಿ.ಮೀ.ಗೆ 57 ರೂ. ದರ ನಿಗದಿ ಮಾಡಲಾಗಿದೆ. ಹೀಗಾಗಿ ಎರಡು ದಿನ ಸರ್ಕಾರಿ ಬಸ್​ಗಳ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ 2024: ಮೈಸೂರಿನ ಪುಟ್ಟ ಮಗುವಿನ ತೊದಲ ನುಡಿಯಲ್ಲಿ ಮತದಾನ ಜಾಗೃತಿ; ಇಲ್ಲಿದೆ ವಿಡಿಯೋ

ಇನ್ನು ಚುನಾವಣಾ ಕಾರ್ಯಕ್ಕೆ ಖಾಸಗಿ ವಾಹನಗಳನ್ನು ಕೂಡ ಬಳಸಿಕೊಳ್ಳಲಾಗಿದೆ. ಅದರಂತೆ ಪ್ರತಿ ವಾಹನಕ್ಕೂ ಪ್ರತ್ಯೇಕ ದರ ಫಿಕ್ಸ್​​ ಮಾಡಲಾಗಿದ್ದು, ಮುಂಗಡ ಹಣ ಕೂಡ ಪಾವತಿ ಮಾಡಲಾಗಿದೆ. ಈ ಹಿನ್ನಲೆ ಮತದಾನ ಮಾಡಲು ತೆರಳುವ ಪ್ರಯಾಣಿಕರು ಬಸ್​ಗಾಗಿ ಪರದಾಡುವಂತಾಗಿದೆ.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Thu, 25 April 24

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ