AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ: ಮೆಜೆಸ್ಟಿಕ್ ಸೇರಿ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಸಾಧ್ಯತೆ

ಲೋಕಸಭೆ ಚುನಾವಣೆಗೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದ್ದು, ಬೆಂಗಳೂರಿನಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಊರುಗಳಿಗೆ ತೆರಳಲಿದ್ದಾರೆ. ಹೀಗಾಗಿ ಇಂದು ಸಂಜೆ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಬಹುದು ಎಂದು ಸಂಚಾರ ಪೊಲೀಸರು ಸುಳಿವು ನೀಡಿದ್ದು, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತ ಸವಾರರಿಗೆ ಮನವಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ: ಮೆಜೆಸ್ಟಿಕ್ ಸೇರಿ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಸಾಧ್ಯತೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 06, 2024 | 10:35 AM

Share

ಬೆಂಗಳೂರು, ಮೇ 6: ಲೋಕಸಭೆ ಚುನಾವಣೆಯ (Lok Sabha Elections) ಮೂರನೇ ಹಂತದಲ್ಲಿ (ಕರ್ನಾಟಕದಲ್ಲಿ 2ನೇ ಹಂತ) ರಾಜ್ಯದ 14 ಕ್ಷೇತ್ರಗಳಿಗೆ ಮಂಗಳವಾರ ಮತದಾನ (Voting) ನಡೆಯಲಿದೆ. ಹೀಗಾಗಿ ಸಾವಿರಾರು ಜನರು ಉತ್ತರ ಕರ್ನಾಟಕ ಭಾಗದ ತಮ್ಮ ಊರುಗಳಿಗೆ ತೆರಳುವ ನಿರೀಕ್ಷೆಯಿರುವುದರಿಂದ ಇಂದು ಸಂಜೆ ಮೆಜೆಸ್ಟಿಕ್ (Mejestic) ಸುತ್ತಮುತ್ತ ಹಾಗೂ ನಗರದ ಇತರ ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಮೆಜೆಸ್ಟಿಕ್‌ನಿಂದ ಉತ್ತರ ಕರ್ನಾಟಕದ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ. ಟ್ರಾಫಿಕ್ ಜಾಮ್ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ಹುಬ್ಬಳ್ಳಿಗೆ ವಿಶೇಷ ರೈಲು

ಮತ್ತೊಂದೆಡೆ, ಮತದಾನಕ್ಕಾಗಿ ಉತ್ತರ ಕರ್ನಾಟಕಕ್ಕೆ ಹೋಗುವ ಜನರಿಗೆ ಅನುಕೂಲವಾಗುವಂತೆ ನೈಋತ್ಯ ರೈಲ್ವೆ ಸೋಮವಾರ ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಶೇಷ ರೈಲು ಓಡಿಸಲಿದೆ.

ರೈಲು ಸಂಖ್ಯೆ 07391 ಸೋಮವಾರ ರಾತ್ರಿ 11 ಗಂಟೆಗೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7.55 ಕ್ಕೆ ಹುಬ್ಬಳ್ಳಿ ತಲುಪಲಿದೆ. ಇದು ಬೆಂಗಳೂರು ಕಂಟೋನ್ಮೆಂಟ್, ತುಮಕೂರು, ದಾವಣಗೆರೆ, ಹರಿಹರ ಮತ್ತು ಹಾವೇರಿಯಲ್ಲಿ ನಿಲುಗಡೆ ಹೊಂದಿರುತ್ತದೆ.

ಅರುಣಾಚಲಕ್ಕೂ ವಿಶೇಷ ರೈಲು

ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಅರುಣಾಚಲ ಪ್ರದೇಶದ ನಹರ್‌ಲಾಗುನ್ ನಡುವೆ ಐದು ಟ್ರಿಪ್‌ಗಳ ವಿಶೇಷ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 07387 ಹುಬ್ಬಳ್ಳಿಯಿಂದ ಮೇ 8 ರಿಂದ ಜೂನ್ 5 ರವರೆಗೆ ಬುಧವಾರ ಮಧ್ಯಾಹ್ನ 12.05 ಕ್ಕೆ ಹೊರಟು ಮೂರನೇ ದಿನ ರಾತ್ರಿ 11 ಗಂಟೆಗೆ ನಹರ್ಲಗುನ್ ತಲುಪುತ್ತದೆ.

ರೈಲು ಸಂಖ್ಯೆ 07388 ಮೇ 11 ರಿಂದ ಜೂನ್ 8 ರವರೆಗೆ ಶನಿವಾರ ರಾತ್ರಿ 11 ಗಂಟೆಗೆ ನಹರ್ಲಗುನ್‌ನಿಂದ ಹೊರಟು ನಾಲ್ಕನೇ ದಿನ ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿ ತಲುಪಲಿದೆ.

ಇದನ್ನೂ ಓದಿ: ರಾಜ್ಯದ 2ನೇ ಹಂತದ ಮತದಾನ: ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲು

ರೈಲು ಗದಗ, ಹೊಸಪೇಟೆ, ಗುಂತಕಲ್, ಗುಂಟೂರು, ವಿಜಯನಗರ, ಭುವನೇಶ್ವರ, ಖುರ್ದಾ ರಸ್ತೆ, ಖರಗ್‌ಪುರ, ನ್ಯೂ ಜಲ್ಪೈಗುರಿ, ನ್ಯೂ ಬೊಂಗೈಗಾಂವ್ ಮತ್ತು ರಂಗಪರ ಉತ್ತರದಲ್ಲಿ ನಿಲುಗಡೆ ಹೊಂದಿರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು