AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ: ಮೆಜೆಸ್ಟಿಕ್ ಸೇರಿ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಸಾಧ್ಯತೆ

ಲೋಕಸಭೆ ಚುನಾವಣೆಗೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದ್ದು, ಬೆಂಗಳೂರಿನಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಊರುಗಳಿಗೆ ತೆರಳಲಿದ್ದಾರೆ. ಹೀಗಾಗಿ ಇಂದು ಸಂಜೆ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಬಹುದು ಎಂದು ಸಂಚಾರ ಪೊಲೀಸರು ಸುಳಿವು ನೀಡಿದ್ದು, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತ ಸವಾರರಿಗೆ ಮನವಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ: ಮೆಜೆಸ್ಟಿಕ್ ಸೇರಿ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಸಾಧ್ಯತೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 06, 2024 | 10:35 AM

Share

ಬೆಂಗಳೂರು, ಮೇ 6: ಲೋಕಸಭೆ ಚುನಾವಣೆಯ (Lok Sabha Elections) ಮೂರನೇ ಹಂತದಲ್ಲಿ (ಕರ್ನಾಟಕದಲ್ಲಿ 2ನೇ ಹಂತ) ರಾಜ್ಯದ 14 ಕ್ಷೇತ್ರಗಳಿಗೆ ಮಂಗಳವಾರ ಮತದಾನ (Voting) ನಡೆಯಲಿದೆ. ಹೀಗಾಗಿ ಸಾವಿರಾರು ಜನರು ಉತ್ತರ ಕರ್ನಾಟಕ ಭಾಗದ ತಮ್ಮ ಊರುಗಳಿಗೆ ತೆರಳುವ ನಿರೀಕ್ಷೆಯಿರುವುದರಿಂದ ಇಂದು ಸಂಜೆ ಮೆಜೆಸ್ಟಿಕ್ (Mejestic) ಸುತ್ತಮುತ್ತ ಹಾಗೂ ನಗರದ ಇತರ ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಮೆಜೆಸ್ಟಿಕ್‌ನಿಂದ ಉತ್ತರ ಕರ್ನಾಟಕದ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ. ಟ್ರಾಫಿಕ್ ಜಾಮ್ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ಹುಬ್ಬಳ್ಳಿಗೆ ವಿಶೇಷ ರೈಲು

ಮತ್ತೊಂದೆಡೆ, ಮತದಾನಕ್ಕಾಗಿ ಉತ್ತರ ಕರ್ನಾಟಕಕ್ಕೆ ಹೋಗುವ ಜನರಿಗೆ ಅನುಕೂಲವಾಗುವಂತೆ ನೈಋತ್ಯ ರೈಲ್ವೆ ಸೋಮವಾರ ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಶೇಷ ರೈಲು ಓಡಿಸಲಿದೆ.

ರೈಲು ಸಂಖ್ಯೆ 07391 ಸೋಮವಾರ ರಾತ್ರಿ 11 ಗಂಟೆಗೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7.55 ಕ್ಕೆ ಹುಬ್ಬಳ್ಳಿ ತಲುಪಲಿದೆ. ಇದು ಬೆಂಗಳೂರು ಕಂಟೋನ್ಮೆಂಟ್, ತುಮಕೂರು, ದಾವಣಗೆರೆ, ಹರಿಹರ ಮತ್ತು ಹಾವೇರಿಯಲ್ಲಿ ನಿಲುಗಡೆ ಹೊಂದಿರುತ್ತದೆ.

ಅರುಣಾಚಲಕ್ಕೂ ವಿಶೇಷ ರೈಲು

ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಅರುಣಾಚಲ ಪ್ರದೇಶದ ನಹರ್‌ಲಾಗುನ್ ನಡುವೆ ಐದು ಟ್ರಿಪ್‌ಗಳ ವಿಶೇಷ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 07387 ಹುಬ್ಬಳ್ಳಿಯಿಂದ ಮೇ 8 ರಿಂದ ಜೂನ್ 5 ರವರೆಗೆ ಬುಧವಾರ ಮಧ್ಯಾಹ್ನ 12.05 ಕ್ಕೆ ಹೊರಟು ಮೂರನೇ ದಿನ ರಾತ್ರಿ 11 ಗಂಟೆಗೆ ನಹರ್ಲಗುನ್ ತಲುಪುತ್ತದೆ.

ರೈಲು ಸಂಖ್ಯೆ 07388 ಮೇ 11 ರಿಂದ ಜೂನ್ 8 ರವರೆಗೆ ಶನಿವಾರ ರಾತ್ರಿ 11 ಗಂಟೆಗೆ ನಹರ್ಲಗುನ್‌ನಿಂದ ಹೊರಟು ನಾಲ್ಕನೇ ದಿನ ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿ ತಲುಪಲಿದೆ.

ಇದನ್ನೂ ಓದಿ: ರಾಜ್ಯದ 2ನೇ ಹಂತದ ಮತದಾನ: ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲು

ರೈಲು ಗದಗ, ಹೊಸಪೇಟೆ, ಗುಂತಕಲ್, ಗುಂಟೂರು, ವಿಜಯನಗರ, ಭುವನೇಶ್ವರ, ಖುರ್ದಾ ರಸ್ತೆ, ಖರಗ್‌ಪುರ, ನ್ಯೂ ಜಲ್ಪೈಗುರಿ, ನ್ಯೂ ಬೊಂಗೈಗಾಂವ್ ಮತ್ತು ರಂಗಪರ ಉತ್ತರದಲ್ಲಿ ನಿಲುಗಡೆ ಹೊಂದಿರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್