AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೋಟ್ ಮಾಡಿ, ಊಟ ಮಾಡಿ’: ಬೆಂಗಳೂರು ಹೋಟೆಲ್​ಗಳಲ್ಲಿ ಸಿಗಲಿದೆ ಉಚಿತ ದೋಸೆ, ಸಿಹಿ ತಿಂಡಿ!

ಮತದಾನ ಮಾಡಿದವರಿಗೆ ಉಚಿತ ಆಹಾರ ನೀಡುವ ಹೋಟೆಲ್​ಗಳ ಅಭಿಯಾನಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ಮೂಲಕ ಮಂಗಳವಾರ ಅನುಮತಿ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ನಗರದ ಕೆಲವು ಹೋಟೆಲ್​ಗಳು ಉಚಿತ, ರಿಯಾಯಿತಿ ದರದ ಆಫರ್ ನೀಡಿವೆ. ಈ ಮಧ್ಯೆ, ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಮತದಾನಕ್ಕೆ ಉಚಿತ ಆಟೊ, ಟ್ಯಾಕ್ಸಿ ಸೇವೆಯನ್ನೂ ಘೋಷಿಸಲಾಗಿದೆ. ವಿವರ ಇಲ್ಲಿದೆ.

‘ವೋಟ್ ಮಾಡಿ, ಊಟ ಮಾಡಿ’: ಬೆಂಗಳೂರು ಹೋಟೆಲ್​ಗಳಲ್ಲಿ ಸಿಗಲಿದೆ ಉಚಿತ ದೋಸೆ, ಸಿಹಿ ತಿಂಡಿ!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 25, 2024 | 7:47 AM

Share

ಬೆಂಗಳೂರು, ಏಪ್ರಿಲ್ 25: ಮತದಾನದ ಬಗ್ಗೆ ಜಾಗೃತಿ (Voting Awareness) ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್​​ಗಳು (Bengaluru Hotels) ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಮಾಡಿದ್ದಂತೆಯೇ ಈ ಬಾರಿಯೂ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.

‘ವೋಟ್ ಮಾಡಿ, ಊಟ ಮಾಡಿ’

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್ ‘ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಕೇವಲ ಶೇ 54 ರಷ್ಟು ಮತದಾನವಾಗಿತ್ತು ಎಂಬುದು ಬೇಸರದ ಸಂಗತಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್​​ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್‌ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ.

ಮತದಾನ ಮಾಡಿದವರಿಗೆ ಉಚಿತ ಆಹಾರ ನೀಡುವ ಹೋಟೆಲ್​ಗಳ ಅಭಿಯಾನಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ಮೂಲಕ ಮಂಗಳವಾರ ಅನುಮತಿ ನೀಡಿತ್ತು.

ಇದನ್ನೂ ಓದಿ: ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್​​ಗಳಿಗೆ ಹೈಕೋರ್ಟ್ ಅನುಮತಿ

ಹಿರಿಯ ನಾಗರಿಕರು, ಅಂಗವಿಕಲರಿಗೆ ಉಚಿತ ಪ್ರಯಾಣ

ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರಿಗೆ ಮತಗಟ್ಟೆಗೆ ಹೋಗಿ ಬರಲು Rapido ಉಚಿತ ಸೇವೆ ಘೋಷಣೆ ಮಾಡಿದೆ. ಭಾರತೀಯ ಚುನಾವಣಾ ಆಯೋಗ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯೊಂದಿಗೆ ಸೇರಿಕೊಂಡು Rapido ಈ ಕ್ರಮಕ್ಕೆ ಮುಂದಾಗಿದೆ. SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.

ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.

ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್‌ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು