AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಟಿಕೆಟ್​; ಬಿಎಸ್​ ಯಡಿಯೂರಪ್ಪ ಭೇಟಿ ಬಳಿಕ ಡಾ.ಮಂಜುನಾಥ್​ ಹೇಳಿದ್ದಿಷ್ಟು

ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ,ಸಿ.ಎನ್ ಮಂಜುನಾಥ್​ ಅವರಿಗೆ ​ಟಿಕೆಟ್​ ನೀಡಿದೆ. ಇದರ ಬೆನ್ನಲ್ಲೇ ಪ್ರತಿಕ್ರಿಯಿಸದ ಅವರು, ‘ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತದೆ. ಎಲ್ಲ ರೀತಿಯಲ್ಲಿ ಚುನಾವಣೆ ಎದುರಿಸಲು ನಾನು ಸಿದ್ಧನಾಗಿದ್ದೇನೆ ಎಂದು ಹೇಳಿದರು.

ಲೋಕಸಭಾ ಟಿಕೆಟ್​; ಬಿಎಸ್​ ಯಡಿಯೂರಪ್ಪ ಭೇಟಿ ಬಳಿಕ ಡಾ.ಮಂಜುನಾಥ್​ ಹೇಳಿದ್ದಿಷ್ಟು
ಡಾ. ಸಿ.ಎನ್​ ಮಂಜುನಾಥ್
Kiran Surya
| Edited By: |

Updated on:Mar 13, 2024 | 8:43 PM

Share

ಬೆಂಗಳೂರು, ಮಾ.13: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು(ಮಾ.13) ಬಿಡುಗಡೆಯಾಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ​ ಡಾ. ಸಿ.ಎನ್​ ಮಂಜುನಾಥ್ (C. N. Manjunath) ಅವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಈ ಕುರಿತು ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(B. S. Yediyurappa) ಭೇಟಿ ಬಳಿಕ ಮಾತನಾಡಿದ ಅವರು, ‘ಅಧಿಕೃತವಾಗಿ ಇನ್ನೆರಡು ದಿನಗಳಲ್ಲಿ ಬಿಜೆಪಿ ಸೇರುತ್ತೇನೆ. ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಅಂದರೇನೇ ರಾಜಕೀಯ. ಆದರೆ, ನಾನು ರಾಜಕೀಯ ಮಾಡಲ್ಲ ಎಂದರು.

ಎಲ್ಲ ರೀತಿಯಲ್ಲಿ ಚುನಾವಣೆ ಎದುರಿಸಲು ನಾನು ಸಿದ್ಧ

ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತದೆ. ಪ್ರಧಾನಿ ಮೋದಿಯವರ ಜನಪ್ರಿಯತೆ ಹಾಗೂ ಬಿಎಸ್​ ಯಡಿಯೂರಪ್ಪ ಅವರ ನಾಯಕತ್ವ, ಹೆಚ್​​ ಡಿ ದೇವೇಗೌಡ ಮತ್ತು HD ಕುಮಾರಸ್ವಾಮಿ ಅವರ ಸಲಹೆಯಂತೆ ಕೆಲಸ ಮಾಡುತ್ತೇನೆ. ಎಲ್ಲ ರೀತಿಯಲ್ಲಿ ಚುನಾವಣೆ ಎದುರಿಸಲು ನಾನು ಸಿದ್ಧನಾಗಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:​​ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗಾಗಿ ದೆಹಲಿಯಲ್ಲಿ ತಡ ರಾತ್ರಿವರೆಗೂ ಸಭೆ: 5 ಕ್ಷೇತ್ರಗಳ ಅಭ್ಯರ್ಥಿಗಳಿಗೆ ಕೊಕ್ ಸಾಧ್ಯತೆ

ಇನ್ನು ನಾನು ಸುಧೀರ್ಘವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದ್ದೇನೆ. ನನ್ನ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಸಿಗುವ ಕೆಲಸ ಆಗುತ್ತಿದೆ. ಮೋದಿ ಸರ್ಕಾರ ಹೆಚ್ಚು ಸಾಧಕರಿಗೆ, ಪರಿಣಿತರಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ. ಇದರಿಂದಲೇ ಇವತ್ತು ನಾನು ಲೋಕಸಭಾ ಚುನಾವಣಾ ಎದುರಿಸುತ್ತಿದ್ದೇನೆ ಎಂದರು.

ಮಂಜುನಾಥ್​​ ನಮ್ಮ ಜತೆ ಬರ್ತಿರುವುದು ದೊಡ್ಡ ಶಕ್ತಿ-ಯಡಿಯೂರಪ್ಪ

ಇನ್ನು ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ‘ ಇಡೀ ನಾಡಿಗೆ ಗೊತ್ತಿರುವಂತೆ ಡಾ. ಮಂಜುನಾಥ್ ಅವರು ಲಕ್ಷಾಂತರ ಜನರ ಪ್ರಾಣ ಉಳಿಸಿದ್ಧಾರೆ. ಅವರು ಬಿಜೆಪಿಗೆ ಸೇರಿ ಚುನಾವಣೆಗೆ ಸ್ಪರ್ಧಿಸ್ತಾರೆ. ಜೊತೆಗೆ ಪಕ್ಷಕ್ಕೆ ಸೇರ್ಪಡೆ ಆಗುವ ಬಗ್ಗೆ ಮೋದಿ ಅವರಿಗೂ ತಿಳಿಸಿದ್ದೇವೆ. ಪ್ರಧಾನಿ ಮೋದಿ ಕೂಡ ಬಹಳ ಸಂತೋಷ ಪಟ್ಟಿದ್ದಾರೆ. ಮಂಜುನಾಥ್​​ ನಮ್ಮ ಜತೆ ಬರ್ತಿರುವುದು ನಮಗೆ ದೊಡ್ಡ ಶಕ್ತಿ ಬಂದಿದೆ. ಅಂಥವರನ್ನ ಅವಿರೋಧವಾಗಿ ಆಯ್ಕೆ ಮಾಡಿ ಕಳಿಸಬೇಕು ಎಂದರು.

ರಾಜ್ಯದ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:37 pm, Wed, 13 March 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್