AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಪದೇ ಪದೇ ಬಂದ ದೂರು ಆಧಾರಿಸಿ ಉಪ ಲೋಕಾಯುಕ್ತ (Lokayukta)ನ್ಯಾ.ಬಿ‌.ವೀರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ಇಂದು(ಆ.08) ದಾಳಿ ಮಾಡಿದ್ದು, ಇ-ಖಾತಾ. ಟ್ಯಾಕ್ಸ್ ಕಲೆಕ್ಷನ್ ಲೆಡ್ಜರ್ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ
ನವೀನ್ ಕುಮಾರ್ ಟಿ
| Edited By: |

Updated on: Aug 08, 2024 | 4:05 PM

Share

ಬೆಂಗಳೂರು, ಆ.08: ಅಕ್ರಮ ಖಾತೆ ಸೇರಿದಂತೆ ಪದೇ ಪದೇ ಗ್ರಾಮ ಪಂಚಾಯತಿಗಳ ಮೇಲೆ ದೂರುಗಳು ಬಂದ ಹಿನ್ನೆಲೆ ಇಂದು (ಗುರುವಾರ) ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಉಪ ಲೋಕಾಯುಕ್ತ (Lokayukta)ನ್ಯಾ.ಬಿ‌.ವೀರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂ.ಗ್ರಾಮಾಂತರ ಜಿಲ್ಲೆಯ ಅಣ್ಣೇಶ್ವರ, ಜಾಲಿಗೆ, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಬೂದಿಹಾಳ, ಸೋಂಪುರ, ನಂದಗುಡಿ, ಸೂಲಿಬೆಲೆ ಪಂಚಾಯತಿಗಳ ಮೇಲೆ ಲೋಕಾ ದಾಳಿ ನಡೆಸಿ, ಇ-ಖಾತಾ. ಟ್ಯಾಕ್ಸ್ ಕಲೆಕ್ಷನ್ ಲೆಡ್ಜರ್ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇನ್ನು ಬೆಂಗಳೂರು ನಗರ ಜಿಲ್ಲೆಯ ಕಸಘಟ್ಟಪುರ, ರಾಜಾನುಕುಂಟೆ, ಬನ್ನೇರುಘಟ್ಟ, ಕಲ್ಲುಬಾಳು, ಕಣ್ಣೂರು, ಮಂಡೂರು, ಕುಂಬಳಗೋಡು, ಆಗರ, ದಾಸನಪುರ ಮತ್ತು ಅಡಕಮಾರನಹಳ್ಳಿ ಗ್ರಾ.ಪಂ. ಕಚೇರಿ ಮೇಲೆ ದಾಳಿ ನಡೆಸಿ ಅಧಿಕಾರಿಗಳಿಂದ ಪಂಚಾಯತಿಗಳಲ್ಲಿನ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅವ್ಯವಸ್ಥೆ ಅನಾವರಣ

20ಕ್ಕೂ ಹೆಚ್ಚು ಲೋಕಾಯುಕ್ತ ಅಧೀಕಾರಿಗಳಿಂದ ಪರಿಶೀಲನೆ

ಇತ್ತ ದೂರು ಆಧಾರಿಸಿ ಬೆಂಗಳೂರು ಉತ್ತರ ತಾಲೂಕಿನ ಪಂಚಾಯತಿ ಕಾರ್ಯಾಲಯಗಳ ಮೇಲೆ ಬೆಂಗಳೂರು ಲೋಕಾಯುಕ್ತ ಜಡ್ಜ್ ಶುಭವೀರ್ ಜೈನ್, ಡಿವೈಎಸ್ಪಿ ಸತೀಶ್ ಸೇರಿದಂತೆ 20ಕ್ಕೂ ಹೆಚ್ಚು ಲೋಕಾಯುಕ್ತ ಅಧೀಕಾರಿಗಳು ದಾಳಿ ನಡೆಸಿದ್ದು, ಅಡಕಮಾರನಹಳ್ಳಿ ಹಾಗೂ ದಾಸನಪುರ ಪಂಚಾಯತಿ ಸಿಬ್ಬಂದಿ ಹಾಗೂ ಕಡತ ಪರಿಶೀಲನೆ ಮಾಡುತ್ತಿದ್ದಾರೆ.  ಪ್ರತಿಯೊಬ್ಬ ಸಿಬ್ಬಂದಿಯನ್ನೂ ಬಿಡದೆ ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?