ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಪದೇ ಪದೇ ಬಂದ ದೂರು ಆಧಾರಿಸಿ ಉಪ ಲೋಕಾಯುಕ್ತ (Lokayukta)ನ್ಯಾ.ಬಿ‌.ವೀರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ಇಂದು(ಆ.08) ದಾಳಿ ಮಾಡಿದ್ದು, ಇ-ಖಾತಾ. ಟ್ಯಾಕ್ಸ್ ಕಲೆಕ್ಷನ್ ಲೆಡ್ಜರ್ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 08, 2024 | 4:05 PM

ಬೆಂಗಳೂರು, ಆ.08: ಅಕ್ರಮ ಖಾತೆ ಸೇರಿದಂತೆ ಪದೇ ಪದೇ ಗ್ರಾಮ ಪಂಚಾಯತಿಗಳ ಮೇಲೆ ದೂರುಗಳು ಬಂದ ಹಿನ್ನೆಲೆ ಇಂದು (ಗುರುವಾರ) ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಉಪ ಲೋಕಾಯುಕ್ತ (Lokayukta)ನ್ಯಾ.ಬಿ‌.ವೀರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂ.ಗ್ರಾಮಾಂತರ ಜಿಲ್ಲೆಯ ಅಣ್ಣೇಶ್ವರ, ಜಾಲಿಗೆ, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಬೂದಿಹಾಳ, ಸೋಂಪುರ, ನಂದಗುಡಿ, ಸೂಲಿಬೆಲೆ ಪಂಚಾಯತಿಗಳ ಮೇಲೆ ಲೋಕಾ ದಾಳಿ ನಡೆಸಿ, ಇ-ಖಾತಾ. ಟ್ಯಾಕ್ಸ್ ಕಲೆಕ್ಷನ್ ಲೆಡ್ಜರ್ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇನ್ನು ಬೆಂಗಳೂರು ನಗರ ಜಿಲ್ಲೆಯ ಕಸಘಟ್ಟಪುರ, ರಾಜಾನುಕುಂಟೆ, ಬನ್ನೇರುಘಟ್ಟ, ಕಲ್ಲುಬಾಳು, ಕಣ್ಣೂರು, ಮಂಡೂರು, ಕುಂಬಳಗೋಡು, ಆಗರ, ದಾಸನಪುರ ಮತ್ತು ಅಡಕಮಾರನಹಳ್ಳಿ ಗ್ರಾ.ಪಂ. ಕಚೇರಿ ಮೇಲೆ ದಾಳಿ ನಡೆಸಿ ಅಧಿಕಾರಿಗಳಿಂದ ಪಂಚಾಯತಿಗಳಲ್ಲಿನ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅವ್ಯವಸ್ಥೆ ಅನಾವರಣ

20ಕ್ಕೂ ಹೆಚ್ಚು ಲೋಕಾಯುಕ್ತ ಅಧೀಕಾರಿಗಳಿಂದ ಪರಿಶೀಲನೆ

ಇತ್ತ ದೂರು ಆಧಾರಿಸಿ ಬೆಂಗಳೂರು ಉತ್ತರ ತಾಲೂಕಿನ ಪಂಚಾಯತಿ ಕಾರ್ಯಾಲಯಗಳ ಮೇಲೆ ಬೆಂಗಳೂರು ಲೋಕಾಯುಕ್ತ ಜಡ್ಜ್ ಶುಭವೀರ್ ಜೈನ್, ಡಿವೈಎಸ್ಪಿ ಸತೀಶ್ ಸೇರಿದಂತೆ 20ಕ್ಕೂ ಹೆಚ್ಚು ಲೋಕಾಯುಕ್ತ ಅಧೀಕಾರಿಗಳು ದಾಳಿ ನಡೆಸಿದ್ದು, ಅಡಕಮಾರನಹಳ್ಳಿ ಹಾಗೂ ದಾಸನಪುರ ಪಂಚಾಯತಿ ಸಿಬ್ಬಂದಿ ಹಾಗೂ ಕಡತ ಪರಿಶೀಲನೆ ಮಾಡುತ್ತಿದ್ದಾರೆ.  ಪ್ರತಿಯೊಬ್ಬ ಸಿಬ್ಬಂದಿಯನ್ನೂ ಬಿಡದೆ ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us