ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ: ದಾಳಿಯಲ್ಲಿ ಸಿಕ್ಕ ಹಣವೆಷ್ಟು? ಖಚಿತ ಮಾಹಿತಿ ನೀಡಿದ ಲೋಕಾಯುಕ್ತ ಮುಖ್ಯ ನಾಯಮೂರ್ತಿ

ನಿನ್ನೆ (ಮಾ.2) ಘಟನೆಯಲ್ಲಿ 2 ಕೋಟಿ 2 ಲಕ್ಷ ರಿಕವರಿ ಆಗಿದೆ. 6 ಕೋಟಿ 10 ಲಕ್ಷ ಮನೆಯಲ್ಲಿ ರಿಕವರಿ ಆಗಿದೆ. ಈಗ ಇನ್ವೆಸ್ಟಿಗೇಶನ್ ಆಗುತ್ತಿದೆ. ತಪ್ಪಿತಸ್ತರಿಗೆ ಶಿಕ್ಷೆ ಆಗಬೇಕಿದ್ದು, ಕಂಪ್ಲೇಟ್ ಕೊಟ್ಟಿರುವವರನ್ನು ಗೌರವಿಸಬೇಕು. ಅವರ ಧೈರ್ಯಕ್ಕೆ ಮೆಚ್ಚುಗೆ ಇದೆ ಎಂದು ಲೋಕಾಯುಕ್ತ ಮುಖ್ಯ ನಾಯಮೂರ್ತಿ ಬಿ.ಎಸ್. ಪಾಟೀಲ್ ಹೇಳಿದ್ದಾರೆ.

ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ:  ದಾಳಿಯಲ್ಲಿ ಸಿಕ್ಕ ಹಣವೆಷ್ಟು? ಖಚಿತ ಮಾಹಿತಿ ನೀಡಿದ ಲೋಕಾಯುಕ್ತ ಮುಖ್ಯ ನಾಯಮೂರ್ತಿ
ಲೋಕಾಯುಕ್ತ ಮುಖ್ಯ ನಾಯಮೂರ್ತಿ ಬಿ.ಎಸ್. ಪಾಟೀಲ್
Follow us
|

Updated on:Mar 03, 2023 | 11:38 AM

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ (BJP MLA Madal Virupaksha)  ಪುತ್ರ ಪ್ರಶಾಂತ್​ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ (Lokayukta)ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮುಖ್ಯ ನಾಯಮೂರ್ತಿ ಬಿ.ಎಸ್. ಪಾಟೀಲ್ (Lokayukta Chief Justice BS Patil) ಇಂದು(ಮಾ.03) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿನ್ನೆ (ಮಾ.2) ಘಟನೆಯಲ್ಲಿ 2 ಕೋಟಿ 2 ಲಕ್ಷ ರಿಕವರಿ ಆಗಿದೆ. 6 ಕೋಟಿ 10 ಲಕ್ಷ ಮನೆಯಲ್ಲಿ ರಿಕವರಿ ಆಗಿದೆ. ಈಗ ಇನ್ವೆಸ್ಟಿಗೇಶನ್ ಆಗುತ್ತಿದೆ. ತಪ್ಪಿತಸ್ತರಿಗೆ ಶಿಕ್ಷೆ ಆಗಬೇಕಿದ್ದು, ಕಂಪ್ಲೇಟ್ ಕೊಟ್ಟಿರುವವರನ್ನು ಗೌರವಿಸಬೇಕು. ಅವರ ಧೈರ್ಯಕ್ಕೆ ಮೆಚ್ಚುಗೆ ಇದೆ ಎಂದರು.

ನಮ್ಮ ಸಹಕಾರಕ್ಕೆ ಅವರು ಬಂದರೆ ಎಂತಹ ತಿಮಿಂಗಲುಗಳನ್ನು ಹಿಡಿದು ಹಾಕಬೇಕಿದೆ. ದೊಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ಳಬೇಡಿ. ಪ್ರತಿ ಜಿಲ್ಲೆಯಲ್ಲೂ ನಮ್ಮ ತಂಡ ಇದೆ. ಐದು ಜನರ ಮೇಲೆ ಎಫ್​ಐಆರ್​ ಆಗಿದೆ. ಪ್ರಶಾಂತ್ ಎನ್ನುವ ಅಕೌಂಟೆಂಟ್ ಜೊತೆಗೆ ಮೂರು ಜನ ಲಂಚ ಕೊಡುವವರು ಇದ್ದರು. ದುಡ್ಡು ಕೊಟ್ರೆ ಟೆಂಡರ್ ಮಾಡಿಕೊಡ್ತಿವಿ ಅಂತ ಹೇಳಿದ್ರು ಎಂದು ದೂರುದಾರರು ದೂರು ಕೊಟ್ಟಿದ್ದಾರೆ. ಯಾರು ಅಮೌಂಟ್ ಸ್ವೀಕಾರ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಶಾಸಕ ಪುತ್ರ ಪ್ರಶಾಂತ್ ಮಾಡಾಳ್​ಗೆ 14 ದಿನ ನ್ಯಾಯಾಂಗ ಬಂಧನ

ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್​ಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಪ್ರಶಾಂತ್ ಸೇರಿದಂತೆ ಐವರರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಲೋಕಾಯುಕ್ತ ಕೋರ್ಟ್ (Bangalore lokayukta court)​ ಆದೇಶ ಹೊರಡಿಸಿದೆ. ನಿನ್ನೆ(ಮಾ.02) ಸಂಜೆ ಬೆಂಗಳೂರಿನ ಕ್ರಸೆಂಟ್​ ರಸ್ತೆಯಲ್ಲಿರುವ ಕಚೇರಿಯಲ್ಲಿ ವ್ಯಕ್ತಿಯಿಂದ 40 ಲಕ್ಷ ರೂ ನಗದು ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.

ನಿನ್ನೆ (ಮಾ.02) ಸಂಜೆ ಪ್ರಶಾಂತ್​ನನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇನ್ನೂ ರೇಡ್ ಬಾಕಿ ಇರುವ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖಾ ಹಂತ ಪೂರ್ಣಗೊಂಡ ನಂತರ ಲೋಕಾಯುಕ್ತ ಅಧಿಕಾರಿಗಳು ತಮ್ಮ ಕಷ್ಟಡಿಗೆ ಕೇಳುವ ಸಾಧ್ಯತೆಗಳಿವೆ. ಸದ್ಯ ಪ್ರಶಾಂತ್ ಮಾಡಾಳ್ ಸೇರಿ ಐವರಿಗೂ 14 ದಿನಗಳ ಕಾಲ ಜೈಲು ಫಿಕ್ಸ್.

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ, ಕೆಎಸ್​ಡಿಎಲ್​ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಟೆಂಡರ್​ವೊಂದಕ್ಕೆ ಸಂಬಂಧಿಸಿದಂತೆ 80 ಲಕ್ಷ ಕಮಿಷನ್​​ ಕೇಳಿದ್ದರು. ಈ ಪೈಕಿ ಮುಂಗಡವಾಗಿ ಪ್ರಶಾಂತ್ 40 ಲಕ್ಷ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದರು. ಬಳಿಕ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್‌ ಕಚೇರಿ ಮತ್ತು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದರು. ಈ ವೇಳೆ ಬರೊಬ್ಬರಿ ಒಟ್ಟು 7 ಕೋಟಿ 62 ಲಕ್ಷ ರೂ. ಹಣ ಪತ್ತೆಯಾಗಿದೆ. ಹಾಗೇ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Fri, 3 March 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!