AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಕ್ಕೆ ಬೇಡಿಕೆ, ದಳ್ಳಾಳಿಗಳ ಹಾವಳಿ: ಬೆಂಗಳೂರಿನ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆ ಯಶವಂತಪುರ, ಜಯನಗರ, ಇಂದಿರಾನಗರ, ಜ್ಞಾನಭಾರತಿ ಕಚೇರಿ ಸೇರಿದಂತೆ ನಗರದ ಎಲ್ಲಾ ಆರ್​ಟಿಒ ಕಚೇರಿಗಳ ಮೇಲೆ  ಬುಧವಾರ ಲೋಕಾಯುಕ್ತ ದಾಳಿ ಮಾಡಲಾಗಿದೆ. ನಗರದ ಎಲ್ಲಾ ಆರ್​ಟಿಒ ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ ಮಾಡಿದ್ದಾರೆ.

ಲಂಚಕ್ಕೆ ಬೇಡಿಕೆ, ದಳ್ಳಾಳಿಗಳ ಹಾವಳಿ: ಬೆಂಗಳೂರಿನ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ
ಲೋಕಾಯುಕ್ತ ದಾಳಿ
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on:Sep 13, 2023 | 7:19 PM

ಬೆಂಗಳೂರು, ಸೆಪ್ಟೆಂಬರ್​ 13: ಯಶವಂತಪುರ, ಜಯನಗರ, ಇಂದಿರಾನಗರ, ಜ್ಞಾನಭಾರತಿ ಕಚೇರಿ ಸೇರಿದಂತೆ ನಗರದ ಎಲ್ಲಾ ಆರ್​ಟಿಒ ಕಚೇರಿಗಳ ಮೇಲೆ ಬುಧವಾರ ಲೋಕಾಯುಕ್ತ ದಾಳಿ (Lokayukta raids) ಮಾಡಲಾಗಿದೆ. ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ನೇತೃತ್ವದಲ್ಲಿ ದಾಳಿ ಮಾಡಿದ್ದು, ಎಲ್ಲಾ ಆರ್​ಟಿಒ ಕಚೇರಿಗಳಲ್ಲಿ ಕಡತ ಪರಿಶೀಲಿಸಿದ್ದಾರೆ. ಜಯನಗರದ RTO ಕಚೇರಿಗೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಭೇಟಿ ನೀಡಿದ್ದು, ಆರ್‌ಟಿಒ ಸುರೇಶ್‌ ಕಚೇರಿಯಲ್ಲಿ ಕುಳಿತು ದಾಳಿಯ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ. ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಪವನ್ ನಜೀರ್ ನೇತೃತ್ವದಲ್ಲಿ ದೇವನಹಳ್ಳಿ ಆರ್​ಟಿಒ ಕಛೇರಿ ಮೇಲೆ ದಾಳಿ ಮಾಡಿದ್ದು, ಆರ್​ಟಿಒ ಶ್ರೀನಿವಾಸ್ ಹಾಗೂ ಅಧಿಕಾರಿಗಳನ್ನ ಕೂರಿಸಿಕೊಂಡು ಸತತ 2 ಗಂಟೆಗೂ ಅಧಿಕ ಕಾಲದಿಂದ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಟಿಕೆಟ್ ಇಲ್ಲದೆ ಪಯಾಣಿಸಿದ 3208 ಪ್ರಯಾಣಿಕರಿಗೆ ದಂಡ ಹಾಕಿದ ಕೆಎಸ್ಆರ್​ಟಿಸಿ; ಬಂದ ಮೊತ್ತವೆಷ್ಟು ಗೊತ್ತಾ?

ಕೆಆರ್​​ಪುರ ಮತ್ತು ಇಂದಿರಾನಗರ ಆರ್​ಟಿಒ ಕಚೇರಿಗಳ ಮೇಲೆ ಸಹ ಲೋಕಾ ದಾಳಿ ಮಾಡಿದ್ದು, ಲೋಕಾಯುಕ್ತ ನ್ಯಾಯಮೂರ್ತಿ ಸುದೇಶ್ ರಾಜು ಪರದೇಶಿ, ಡಿವೈಎಸ್ಪಿ ಗೋಪಾಲ್ ಜೋಗಿನಿ ನೇತೃತ್ವದಲಿ ದಾಳಿ ಮಾಡಿದ್ದು, ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ, ದಳ್ಳಾಳಿಗಳ ಹಾವಳಿ ಬಗ್ಗೆ ದೂರುಗಳು ನೀಡಲಾಗಿದೆ. ಹಾಗಾಗಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ 13 ಕಡೆಗಳಲ್ಲಿ ಪರಿಶೀಲನೆ: ಡಿಜಿಪಿ ಪ್ರಶಾಂತ್‌ ಕುಮಾರ್ ಠಾಕೋರ್

ಲೋಕಾಯುಕ್ತ ಡಿಜಿಪಿ ಪ್ರಶಾಂತ್‌ ಕುಮಾರ್ ಠಾಕೋರ್​​​ ಮಾತನಾಡಿ, ಬೆಂಗಳೂರು ನಗರದಲ್ಲಿ 13 ಕಡೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಕರ್ನಾಟಕ ಲೋಕಾಯುಕ್ತ ಆ್ಯಕ್ಟ್​​ ಪ್ರಕಾರ ಸಾರ್ವಜನಿಕರಿಗೆ ಸರಿಯಾದ ರೀತಿ ಸೇವೆ ಸೇರಿದಂತೆ ವಿವಿಧ ದೂರು ಬಂದ ಹಿನ್ನಲೆ ದಾಳಿ ಮಾಡಲಾಗಿದೆ. ದಾಳಿಯಲ್ಲಿ ಎಲ್ಲ ಕಡೆಗಳಲ್ಲಿ ಸಿಕ್ಕಿರುವ ಎಲ್ಲದರ ಬಗ್ಗೆ ಮಾಹಿತಿ ನಾಳೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:13 pm, Wed, 13 September 23

ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ