AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಕ್ಕೆ ಬೇಡಿಕೆ, ದಳ್ಳಾಳಿಗಳ ಹಾವಳಿ: ಬೆಂಗಳೂರಿನ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆ ಯಶವಂತಪುರ, ಜಯನಗರ, ಇಂದಿರಾನಗರ, ಜ್ಞಾನಭಾರತಿ ಕಚೇರಿ ಸೇರಿದಂತೆ ನಗರದ ಎಲ್ಲಾ ಆರ್​ಟಿಒ ಕಚೇರಿಗಳ ಮೇಲೆ  ಬುಧವಾರ ಲೋಕಾಯುಕ್ತ ದಾಳಿ ಮಾಡಲಾಗಿದೆ. ನಗರದ ಎಲ್ಲಾ ಆರ್​ಟಿಒ ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ ಮಾಡಿದ್ದಾರೆ.

ಲಂಚಕ್ಕೆ ಬೇಡಿಕೆ, ದಳ್ಳಾಳಿಗಳ ಹಾವಳಿ: ಬೆಂಗಳೂರಿನ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ
ಲೋಕಾಯುಕ್ತ ದಾಳಿ
Shivaprasad B
| Edited By: |

Updated on:Sep 13, 2023 | 7:19 PM

Share

ಬೆಂಗಳೂರು, ಸೆಪ್ಟೆಂಬರ್​ 13: ಯಶವಂತಪುರ, ಜಯನಗರ, ಇಂದಿರಾನಗರ, ಜ್ಞಾನಭಾರತಿ ಕಚೇರಿ ಸೇರಿದಂತೆ ನಗರದ ಎಲ್ಲಾ ಆರ್​ಟಿಒ ಕಚೇರಿಗಳ ಮೇಲೆ ಬುಧವಾರ ಲೋಕಾಯುಕ್ತ ದಾಳಿ (Lokayukta raids) ಮಾಡಲಾಗಿದೆ. ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ನೇತೃತ್ವದಲ್ಲಿ ದಾಳಿ ಮಾಡಿದ್ದು, ಎಲ್ಲಾ ಆರ್​ಟಿಒ ಕಚೇರಿಗಳಲ್ಲಿ ಕಡತ ಪರಿಶೀಲಿಸಿದ್ದಾರೆ. ಜಯನಗರದ RTO ಕಚೇರಿಗೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಭೇಟಿ ನೀಡಿದ್ದು, ಆರ್‌ಟಿಒ ಸುರೇಶ್‌ ಕಚೇರಿಯಲ್ಲಿ ಕುಳಿತು ದಾಳಿಯ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ. ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಪವನ್ ನಜೀರ್ ನೇತೃತ್ವದಲ್ಲಿ ದೇವನಹಳ್ಳಿ ಆರ್​ಟಿಒ ಕಛೇರಿ ಮೇಲೆ ದಾಳಿ ಮಾಡಿದ್ದು, ಆರ್​ಟಿಒ ಶ್ರೀನಿವಾಸ್ ಹಾಗೂ ಅಧಿಕಾರಿಗಳನ್ನ ಕೂರಿಸಿಕೊಂಡು ಸತತ 2 ಗಂಟೆಗೂ ಅಧಿಕ ಕಾಲದಿಂದ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಟಿಕೆಟ್ ಇಲ್ಲದೆ ಪಯಾಣಿಸಿದ 3208 ಪ್ರಯಾಣಿಕರಿಗೆ ದಂಡ ಹಾಕಿದ ಕೆಎಸ್ಆರ್​ಟಿಸಿ; ಬಂದ ಮೊತ್ತವೆಷ್ಟು ಗೊತ್ತಾ?

ಕೆಆರ್​​ಪುರ ಮತ್ತು ಇಂದಿರಾನಗರ ಆರ್​ಟಿಒ ಕಚೇರಿಗಳ ಮೇಲೆ ಸಹ ಲೋಕಾ ದಾಳಿ ಮಾಡಿದ್ದು, ಲೋಕಾಯುಕ್ತ ನ್ಯಾಯಮೂರ್ತಿ ಸುದೇಶ್ ರಾಜು ಪರದೇಶಿ, ಡಿವೈಎಸ್ಪಿ ಗೋಪಾಲ್ ಜೋಗಿನಿ ನೇತೃತ್ವದಲಿ ದಾಳಿ ಮಾಡಿದ್ದು, ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ, ದಳ್ಳಾಳಿಗಳ ಹಾವಳಿ ಬಗ್ಗೆ ದೂರುಗಳು ನೀಡಲಾಗಿದೆ. ಹಾಗಾಗಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ 13 ಕಡೆಗಳಲ್ಲಿ ಪರಿಶೀಲನೆ: ಡಿಜಿಪಿ ಪ್ರಶಾಂತ್‌ ಕುಮಾರ್ ಠಾಕೋರ್

ಲೋಕಾಯುಕ್ತ ಡಿಜಿಪಿ ಪ್ರಶಾಂತ್‌ ಕುಮಾರ್ ಠಾಕೋರ್​​​ ಮಾತನಾಡಿ, ಬೆಂಗಳೂರು ನಗರದಲ್ಲಿ 13 ಕಡೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಕರ್ನಾಟಕ ಲೋಕಾಯುಕ್ತ ಆ್ಯಕ್ಟ್​​ ಪ್ರಕಾರ ಸಾರ್ವಜನಿಕರಿಗೆ ಸರಿಯಾದ ರೀತಿ ಸೇವೆ ಸೇರಿದಂತೆ ವಿವಿಧ ದೂರು ಬಂದ ಹಿನ್ನಲೆ ದಾಳಿ ಮಾಡಲಾಗಿದೆ. ದಾಳಿಯಲ್ಲಿ ಎಲ್ಲ ಕಡೆಗಳಲ್ಲಿ ಸಿಕ್ಕಿರುವ ಎಲ್ಲದರ ಬಗ್ಗೆ ಮಾಹಿತಿ ನಾಳೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:13 pm, Wed, 13 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?